Homeಕರ್ನಾಟಕಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

- Advertisement -
- Advertisement -

ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕ ಉದಯ್ ಕಿರಣ್ ಮೇಲಿನ ಸವರ್ಣೀಯರ ಹಲ್ಲೆ ಮತ್ತು ಆತ್ಮಹತ್ಯೆಗೆ ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ. ಇಂದು ಗ್ರಾಮಕ್ಕೆ ಭೇಟಿ ನೀಡಿ ದಲಿತ ಮತ್ತು ಪ್ರಗತಿಪರ ಸಂಘಟನೆಯ ಮುಖಂಡರು ಸಭೆ ಸೇರಿ ಪೆತ್ತಾಂಡ್ಲಹಳ್ಳಿ ಬೈಕ್ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ.

ಯಾವ ಮರಕ್ಕೆ ದಲಿತ ಉದಯ್ ಕಿರಣ್ ಕಟ್ಟಿ ಹಲ್ಲೆ ನಡೆಸಲಾಯಿತೊ ಅಲ್ಲಿಯೇ ಜಮಾಯಿಸಿದ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ಇದು ಆತ್ಮಹತ್ಯೆ ಎನ್ನುವುದಕ್ಕಿಂತ ಕೊಲೆ ಎಂದು ಕರೆಯಬೇಕಾಗಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಕೋಲಾರ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಪ್ರಕರಣವನ್ನು ಖಂಡಿಸಿಲ್ಲ. ಮೂರು ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕರು, ಜಿಲ್ಲೆಯ ದಲಿತ ಸಂಸದರು ಬಾಯಿ ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದಕ್ಕೂ ಮೊದಲು ಸಂತ್ರಸ್ತ ಯುವಕ ವಾಸವಿದ್ದ ಬೇವಹಳ್ಳಿಗೆ ಭೇಟಿ ನೀಡಿದ ಸಂಘಟನೆಗಳ ನಿಯೋಗವು ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದರು.

ಪೊಲೀಸರು 24 ಗಂಟೆಗಳ ಒಳಗಾಗಿ ಆರೋಪಿಗಳನ್ನು ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ, ಮನೆ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಮುಳಬಾಗಿಲಿನಿಂದ ಪೆತ್ತಾಂಡ್ಲಹಳ್ಳಿಗೆ ಬೈಕ್ ಜಾಥ ನಡೆಸಲಾಗುವುದು. ಆರೋಪಿಗಲ ಮನೆ ಎದುರೆ ಸ್ವಾಭಿಮಾನಿ ಸಮಾವೇಶ ನಡೆಸಲಾಗುವುದು. ಪೆತ್ತಾಂಡ್ಲಹಳ್ಳಿ ಜಾಥಾದ ದಿನಾಂಕವನ್ನು ಡಿಸೆಂಬರ್ 6 ರ ಅಂಬೇಡ್ಕರ್ ಪರಿನಿರ್ವಾಣ ದಿನದಂದು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಕಂಬಾಲಪಲ್ಲಿ ಘಟನೆಯಿಂದ ಹಿಡಿದು ಉಳ್ಳೇರಹಳ್ಳಿ ಜಾತಿದೌರ್ಜನ್ಯದವರೆಗೂ, ಇಂದಿನ ಪೆತ್ತಾಂಡ್ಲಹಳ್ಳಿ ಕೊಲೆವರೆಗೂ ದಲಿತರ ಮೇಲಿನ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ವರದಿಯಾಗುವ ಭೀಕರ ಘಟನೆಗಳು ನಮ್ಮಲ್ಲಿಯೂ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಭೆಯಲ್ಲಿ ಸಿಪಿಎಂ ಜಿಲ್ಲಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿ, ಡಿಎಸ್‌ಎಸ್‌ ಸಂಯೋಜಕ ಬಣದ ಮೆಕಾನಿಕ್ ಶ್ರೀನಿವಾಸ್, ಬಹುಜನ ಚಳವಳಿಯ ಸಂಗಸಂದ್ರ ವಿಜಯ್ ಕುಮಾರ್, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ, ಸುರೇಶ್ ಬಾಬು, ಶ್ರೀನಿವಾಸ್, ಮೃತ ಉದಯ್ ಕಿರಣ್ ಮಾವ ನಾಗರಾಜು ಭಾಗವಹಿಸಿದ್ದರು.

ಇನ್ನೊಂದೆಡೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬೇವಹಳ್ಳಿಯ ಸಂತ್ರಸ್ತ ಯುವಕನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. 50 ಸಾವಿರ ರೂಗಳ ಪರಿಹಾರದ ಚೆಕ್ ವಿತರಿಸಲಾಗಿದೆ.

ಇದನ್ನೂ ಓದಿ: ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...