HomeಮುಖಪುಟNPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

NPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಬ್ಬುತ್ತಿರುವ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಆರೋಗ್ಯ ಸಮೀಕ್ಷೆ ನಡೆಸಲು ಮುಂದಾಗಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ ಮುಸ್ಲಿಂ ಸಮುದಾಯವು ಸಂಪೂರ್ಣ ಸಹಕಾರ ನೀಡುವಂತೆ ಪಾಪ್ಯುಲರ್‌ ಪ್ರಂಟ್‌ ಆಫ್‌ ಇಂಡಿಯಾ ಮನವಿ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ದಕ್ಷಿಣ ಕನ್ನಡದ ಪಿಎಫ್‌ಐ ಜಿಲ್ಲಾಧ್ಯಕ್ಷ ಇಜಾಝಝ್ ಅಹ್ಮದ್ “ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ರವರು ಆರೋಗ್ಯ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಕೋರಿಕೊಂಡಿದ್ದಾರೆ. ಎನ್‌ಪಿಆರ್ ಸಮೀಕ್ಷೆಯನ್ನು ಎಪ್ರಿಲ್ 15ರಂದು ಪ್ರಾರಂಭಿಸುವ ಬಗ್ಗೆ ಈ ಹಿಂದೆ ಸರಕಾರವು ಅಧಿಕೃತ ಆದೇಶ ಹೊರಡಿಸಿತ್ತು. ಆದರೆ ಕೊರೋನದ ಸನ್ನಿವೇಶದಲ್ಲಿ ಅದನ್ನು ಮುಂದೂಡಲಾಗಿದ್ದು, ಇದರ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ. ಎನ್‌ಪಿಆರ್‌ ಪ್ರಕ್ರಿಯೆಗೂ, ಈ  ಸಮೀಕ್ಷೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಹಾಗಾಗಿ ಸಮೀಕ್ಷೆ ನಡೆಸವು ನಾವೆಲ್ಲರೂ ಆಶಾಕಾರ್ಯಕರ್ತರಿಗೆ ಸಹಕಾರ ನೀಡೋಣ” ಎಂದಿದ್ದಾರೆ.


ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?


ಈ ಆರೋಗ್ಯ ಸಮೀಕ್ಷೆ ಯ ವೇಳೆ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಗೊಂದಲ ಹಾಗೂ ತಪ್ಪುಗ್ರಹಿಕೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಈ ಸಮೀಕ್ಷೆಯಲ್ಲಿ ಕೇಳಲಾಗುವ ಮಾಹಿತಿಗಳ ಕುರಿತು ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಮನೆಯ ಯಜಮಾನರ ಹೆಸರು, ಮೊಬೈಲ್ ನಂಬರ್, ಮನೆಯಲ್ಲಿ ಪ್ರಸ್ತುತವಿರುವ ಒಟ್ಟು ಸದಸ್ಯರ ಸಂಖ್ಯೆ ಮತ್ತು ಮನೆಮಂದಿಗೆ ಯಾವುದಾದರೂ ರೋಗ ಲಕ್ಷಣಗಳಿರುವ ಕುರಿತ ಆರೋಗ್ಯ ಸಂಬಂಧಿ ಮಾಹಿತಿಗಳನ್ನಷ್ಟೇ ಕೇಳಲಾಗುತ್ತದೆ. ಈ ಆರೋಗ್ಯ ಸಮೀಕ್ಷೆಗೆ ಎಲ್ಲರೂ ಸಹಕಾರ ನೀಡಿ ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಅದೇ ರೀತಿ ನಮ್ಮ ದೇಶದ, ಸಮಾಜದ ಒಳಿತಿಗಾಗಿ ಮತ್ತು ನಮ್ಮ ಆರೋಗ್ಯದ ಹಿತದಷ್ಟಿಯಿಂದ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸ್ವಯಂ ಸೇವಕರ ಸೇವೆಯನ್ನು ನಾವು ಈ ಸಂದರ್ಭದಲ್ಲಿ ಶ್ಲಾಘಿಸಬೇಕು ಮತ್ತು ಅವರನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಮನೆ ಮನೆ ಭೇಟಿ ಕೊಡುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಮೀಕ್ಷೆಯ ಸ್ವಯಂ ಸೇವಕರಿಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು” ಎಂದು ಕೂಡ ಕರಪತ್ರವೊಂದನ್ನು ಮುದ್ರಿಸಿ ಹಂಚುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರಕರಣವೊಂದು ಕಾಣಿಸಿಕೊಂಡಿದ್ದು, ಜಿಲ್ಲಾಡಳಿತ ಆರೋಗ್ಯ ಸಮೀಕ್ಷೆ ಗೆ ಮುಂದಾಗಿದೆ.

ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಸಾರಾಯಿಪಾಳ್ಯದ ಸಾದಿಕ್ ಲೇಔಟ್ ನಲ್ಲಿ ಕೊವಿಡ್-19 ತಪಾಸಣೆ ಮಾಡಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೋಮು ಬಣ್ಣ ಪಡೆದಿತ್ತು. ಅಲ್ಲಿನ ನಿವಾಸಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಲ್ಲಿನ ಕೆಲವು ನಿವಾಸಿಗಳು ಕೊರೊನಾ ಆರೋಗ್ಯ ತಪಾಸಣೆಯನ್ನು, ಎನ್‌ಪಿಆರ್ ಪ್ರಕ್ರಿಯೆ ಎಂದು ಗೊಂದಲ ಮಾಡಿಕೊಂಡು ಆಗಿದ್ದ ಮಾತಿನ ಚಕಮಕಿಯಾಗಿತ್ತು. ನಂತರ ಸಮುದಾಯದ ಮುಖಂಡರು ಇದರ ಬಗ್ಗೆ ಸಾಮಾನ್ಯರಿಗೆ ತಿಳಿ ಹೇಳಿ ಅಗತ್ಯ ಮಾಹಿತಿ ನೀಡಲು ಕೇಳಿಕೊಂಡಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...