HomeಮುಖಪುಟNPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

NPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಬ್ಬುತ್ತಿರುವ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಆರೋಗ್ಯ ಸಮೀಕ್ಷೆ ನಡೆಸಲು ಮುಂದಾಗಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ ಮುಸ್ಲಿಂ ಸಮುದಾಯವು ಸಂಪೂರ್ಣ ಸಹಕಾರ ನೀಡುವಂತೆ ಪಾಪ್ಯುಲರ್‌ ಪ್ರಂಟ್‌ ಆಫ್‌ ಇಂಡಿಯಾ ಮನವಿ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ದಕ್ಷಿಣ ಕನ್ನಡದ ಪಿಎಫ್‌ಐ ಜಿಲ್ಲಾಧ್ಯಕ್ಷ ಇಜಾಝಝ್ ಅಹ್ಮದ್ “ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ರವರು ಆರೋಗ್ಯ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಕೋರಿಕೊಂಡಿದ್ದಾರೆ. ಎನ್‌ಪಿಆರ್ ಸಮೀಕ್ಷೆಯನ್ನು ಎಪ್ರಿಲ್ 15ರಂದು ಪ್ರಾರಂಭಿಸುವ ಬಗ್ಗೆ ಈ ಹಿಂದೆ ಸರಕಾರವು ಅಧಿಕೃತ ಆದೇಶ ಹೊರಡಿಸಿತ್ತು. ಆದರೆ ಕೊರೋನದ ಸನ್ನಿವೇಶದಲ್ಲಿ ಅದನ್ನು ಮುಂದೂಡಲಾಗಿದ್ದು, ಇದರ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ. ಎನ್‌ಪಿಆರ್‌ ಪ್ರಕ್ರಿಯೆಗೂ, ಈ  ಸಮೀಕ್ಷೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಹಾಗಾಗಿ ಸಮೀಕ್ಷೆ ನಡೆಸವು ನಾವೆಲ್ಲರೂ ಆಶಾಕಾರ್ಯಕರ್ತರಿಗೆ ಸಹಕಾರ ನೀಡೋಣ” ಎಂದಿದ್ದಾರೆ.


ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?


ಈ ಆರೋಗ್ಯ ಸಮೀಕ್ಷೆ ಯ ವೇಳೆ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಗೊಂದಲ ಹಾಗೂ ತಪ್ಪುಗ್ರಹಿಕೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಈ ಸಮೀಕ್ಷೆಯಲ್ಲಿ ಕೇಳಲಾಗುವ ಮಾಹಿತಿಗಳ ಕುರಿತು ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಮನೆಯ ಯಜಮಾನರ ಹೆಸರು, ಮೊಬೈಲ್ ನಂಬರ್, ಮನೆಯಲ್ಲಿ ಪ್ರಸ್ತುತವಿರುವ ಒಟ್ಟು ಸದಸ್ಯರ ಸಂಖ್ಯೆ ಮತ್ತು ಮನೆಮಂದಿಗೆ ಯಾವುದಾದರೂ ರೋಗ ಲಕ್ಷಣಗಳಿರುವ ಕುರಿತ ಆರೋಗ್ಯ ಸಂಬಂಧಿ ಮಾಹಿತಿಗಳನ್ನಷ್ಟೇ ಕೇಳಲಾಗುತ್ತದೆ. ಈ ಆರೋಗ್ಯ ಸಮೀಕ್ಷೆಗೆ ಎಲ್ಲರೂ ಸಹಕಾರ ನೀಡಿ ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಅದೇ ರೀತಿ ನಮ್ಮ ದೇಶದ, ಸಮಾಜದ ಒಳಿತಿಗಾಗಿ ಮತ್ತು ನಮ್ಮ ಆರೋಗ್ಯದ ಹಿತದಷ್ಟಿಯಿಂದ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸ್ವಯಂ ಸೇವಕರ ಸೇವೆಯನ್ನು ನಾವು ಈ ಸಂದರ್ಭದಲ್ಲಿ ಶ್ಲಾಘಿಸಬೇಕು ಮತ್ತು ಅವರನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಮನೆ ಮನೆ ಭೇಟಿ ಕೊಡುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಮೀಕ್ಷೆಯ ಸ್ವಯಂ ಸೇವಕರಿಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು” ಎಂದು ಕೂಡ ಕರಪತ್ರವೊಂದನ್ನು ಮುದ್ರಿಸಿ ಹಂಚುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರಕರಣವೊಂದು ಕಾಣಿಸಿಕೊಂಡಿದ್ದು, ಜಿಲ್ಲಾಡಳಿತ ಆರೋಗ್ಯ ಸಮೀಕ್ಷೆ ಗೆ ಮುಂದಾಗಿದೆ.

ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಸಾರಾಯಿಪಾಳ್ಯದ ಸಾದಿಕ್ ಲೇಔಟ್ ನಲ್ಲಿ ಕೊವಿಡ್-19 ತಪಾಸಣೆ ಮಾಡಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೋಮು ಬಣ್ಣ ಪಡೆದಿತ್ತು. ಅಲ್ಲಿನ ನಿವಾಸಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಲ್ಲಿನ ಕೆಲವು ನಿವಾಸಿಗಳು ಕೊರೊನಾ ಆರೋಗ್ಯ ತಪಾಸಣೆಯನ್ನು, ಎನ್‌ಪಿಆರ್ ಪ್ರಕ್ರಿಯೆ ಎಂದು ಗೊಂದಲ ಮಾಡಿಕೊಂಡು ಆಗಿದ್ದ ಮಾತಿನ ಚಕಮಕಿಯಾಗಿತ್ತು. ನಂತರ ಸಮುದಾಯದ ಮುಖಂಡರು ಇದರ ಬಗ್ಗೆ ಸಾಮಾನ್ಯರಿಗೆ ತಿಳಿ ಹೇಳಿ ಅಗತ್ಯ ಮಾಹಿತಿ ನೀಡಲು ಕೇಳಿಕೊಂಡಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...