HomeಚಳವಳಿPFI ರಾಷ್ಟ್ರೀಯ ನಾಯಕ ಕೆ.ಎಂ ಶರೀಫ್ ನಿಧನ : ಸಂತಾಪ

PFI ರಾಷ್ಟ್ರೀಯ ನಾಯಕ ಕೆ.ಎಂ ಶರೀಫ್ ನಿಧನ : ಸಂತಾಪ

ಕರಾವಳಿಯಲ್ಲಿ ಅಲ್ಪಸಂಖ್ಯಾತರರು ಕೋಮುವಾದಿಗಳ ವಿರುದ್ಧ ಸ್ವಾಭಿಮಾನದಿಂದ ತಲೆ ಎತ್ತಿ ನಿಲ್ಲುವಂತೆ ಹೋರಾಡಿದವರು ಮತ್ತು ಧೈರ್ಯ ತುಂಬಿದವರು ಕೆ.ಎಂ ಶರೀಫ್‌ರವರು. ಬಹಳ ವಿಶಿಷ್ಟ ವ್ಯಕ್ತಿತ್ವದ, ಹೃದಯವಂತಿಕೆ ಇದ್ದವರಾಗಿದ್ದರು.

- Advertisement -
- Advertisement -

PFI ಸಂಘಟನೆಯ ಮಾಜಿ ರಾಷ್ಟ್ರೀಯ ಅಧ್ಯಕ್ಷರು, ಹಾಲಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಕೆ.ಎಂ ಶರೀಫ್‌ರವರು ಇಂದು ನಿಧನರಾಗಿದ್ದಾರೆ. ಹಲವು ದಿನಗಳಿಂದ ಮಧುಮೇಹ, ಶ್ವಾಸಕೋಶ ಮತ್ತು ರಕ್ತದೊತ್ತಡ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೈಕಂಬ ಮುಹಮ್ಮದ್ ಶರೀಫ್ ರವರ ಅಂತಿಮ ದರ್ಶನಕ್ಕೆ ಬಿ‌.ಸಿ.ರೋಡ್ ಮಿತ್ತಬೈಲ್ ಮಸ್ಜಿದ್ ನಲ್ಲಿ ಇಂದು ಸಂಜೆ 5:30ಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇಶಾ ನಮಾಝ್ ಬಳಿಕ ಮೃತರ ದಫನ ಕಾರ್ಯ ನೆರವೇರಲಿದೆ ಎಂದು ಪಿಎಫ್‌ಐ ರಾಜ್ಯಾಧ್ಯಕ್ಷರಾದ ಯಾಸಿರ್ ಹಸನ್ ತಿಳಿಸಿದ್ದಾರೆ.

ಸಾಮಾನ್ಯ ಕುಟುಂಬದಲ್ಲಿ ಜನಿಸಿ ಬಿಎಸ್ಸಿ ಪದವಿ ಪಡೆದು ವಿದೇಶದಲ್ಲಿ ವಾಸವಾಗಿದ್ದ ಅವರು ನಂತರ ಭಾರತಕ್ಕೆ ವಾಪಸ್‌ ಆಗಿದ್ದರು. ಮಂಗಳೂರಿನ ಕೋಡಿಯಾಲ್ ಬಳಿ ಸಣ್ಣ ಝೆರಾಕ್ಸ್ ಅಂಗಡಿ ಇಟ್ಟುಕೊಂಡು ಸರಳ ಜೀವನ ನಡೆಸುತ್ತಿದ್ದರು. ದಲಿತ-ಮುಸ್ಲಿಂ ಐಕ್ಯತೆಯ ಪ್ರಖರ ಚಿಂತಕರಾಗಿದ್ದ ಅವರು ಪಿಎಫ್ಐನ ರಾಜ್ಯಾಧ್ಯಕ್ಷರಾಗಿ, ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು ರಾಷ್ಟ್ರೀಯ ನಾಯಕರಾಗಿ ಕೆಲಸ ಮಾಡಿದ್ದರು.

ಕರಾವಳಿಯಲ್ಲಿ ಅಲ್ಪಸಂಖ್ಯಾತರರು ಕೋಮುವಾದಿಗಳ ವಿರುದ್ಧ ಸ್ವಾಭಿಮಾನದಿಂದ ತಲೆ ಎತ್ತಿ ನಿಲ್ಲುವಂತೆ ಹೋರಾಡಿದವರು ಮತ್ತು ಧೈರ್ಯ ತುಂಬಿದವರು ಕೆ.ಎಂ ಶರೀಫ್‌ರವರು. ಬಹಳ ವಿಶಿಷ್ಟ ವ್ಯಕ್ತಿತ್ವದ, ಹೃದಯವಂತಿಕೆ ಇದ್ದವರಾಗಿದ್ದರು. 2003ರಿಂದ 2010ರ ರವರೆಗೆ ಅವರೊಡನೆ ಹತ್ತಿರದಿಂದ ಒಡನಾಟದ ಅನುಭವದಿಂದ ಹೇಳುವುದಾರೆ ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಸಂಘಟಕರಾಗಿದ್ದರು. ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ತಮ್ಮ ಹೋರಾಟದ ಚಾಪನ್ನು ಮೂಡಿಸಿದವರು. ಅವರ ಹಠಾತ್ ನಿಧನ ಕರ್ನಾಟಕದ ಹೋರಾಟ ಪರಂಪರೆಗೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಯಾದ ಕೆ.ಎಲ್ ಅಶೋಕ್ ಸಂತಾಪ ಸೂಚಿಸಿದ್ದಾರೆ.

ಸಂಘಟನೆಯ ಪ್ರಾರಂಭ ಕಾಲದ ಪ್ರವರ್ತಕರಾಗಿದ್ದ ಕೆ.ಎಂ ಶರೀಫ್‌ರವರು, ತನ್ನ ಆಯುಷ್ಯದ ದೀರ್ಘ ಸಮಯವನ್ನು ಪಿಎಫ್‌ಐ ಆಂದೋಲನಕ್ಕಾಗಿ ಮುಡಿಪಾಗಿಟ್ಟಿದ್ದರು. ಸಮುದಾಯದ ಸಬಲೀಕರಣಕ್ಕಾಗಿ ಅವರ ದಣಿವರಿಯದ ಹೋರಾಟವು ಮುಂದಿನ ತಲೆಮಾರಿಗೆ ಎಂದೂ ಮಾದರಿಯಾಗಿರಲಿದೆ ಎಂದು ಪಿಎಫ್‌ಐ ರಾಜ್ಯಾಧ್ಯಕ್ಷರಾದ ಯಾಸಿರ್ ಹಸನ್ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...