Homeಕರ್ನಾಟಕಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

"ಉಭಯ ಕೋಮುಗಳ ಪ್ರತಿಭಟನೆಯಲ್ಲಿ ಭಜನೆ ಹಾಗೂ ನಮಾಜಿಗೆ ಅವಕಾಶ ನೀಡುತ್ತಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯ"

- Advertisement -
- Advertisement -

ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಸಂಭವಿಸಿದ ಲಾಠಿಚಾರ್ಜ್, ಅಶಾಂತಿಯ ಪ್ರಕರಣಗಳು ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ಸಂಘ ಪರಿವಾರ ಮತ್ತು ಪಿಎಫ್‌ಐ ಸಂಘಟನೆಗಳು ಸಂಯೋಜಿಸಿ ನಿರ್ದೇಶಿಸುತ್ತಿರುವ ಮತೀಯ ಹುನ್ನಾರ, ಕೋಮು ಗಲಭೆಗೆ ವೇದಿಕೆ ನಿರ್ಮಿಸುವ ಪೂರ್ವ ಯೋಜಿತ ಕೃತ್ಯಗಳ ಮುಂದುವರಿದ ಭಾಗವೇ ಆಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಿ.ಪಿ.ಐ(ಎಂ) ಸಮಿತಿ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹೇಳಿದ್ದಾರೆ.

ಪತ್ರಿಕೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳ ಮೇಲೆ ಹಲ್ಲೆ, ಭಿನ್ನ ಧರ್ಮಿಯ ಸಹಭೋಜನ ಮತ್ತು ಸಹಕೂಟಗಳ ಮೇಲೆ ಗುಂಪು ಹಲ್ಲೆ, ಪರಸ್ಪರ ವ್ಯಾಪಾರ-ವ್ಯವಹಾರಗಳ ಮೇಲೆ ದಾಂಧಲೆ, ಲವ್ ಜಿಹಾದ್ ಕಟ್ಟುಕತೆಗಳು, ದನ ಕಳ್ಳತನ ಮತ್ತು ನಾಗಬನ ಧ್ವಂಸದ ಪ್ರಕರಣ ಹಾಗೂ ಪೂಜಾ ಸ್ಥಳಗಳ ಅಪವಿತ್ರ ಇವೇ ಮೊದಲಾದ ಸಮಾಜ ಬಾಹಿರ ಕೃತ್ಯಗಳು ಒಂದಾದ ಮೇಲೆ ಒಂದರಂತೆ ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿವೆ. ಇವುಗಳ ಹಿಂದೆ ಸಂಘ ಪರಿವಾರದ ಸಂಘಟನೆಗಳ ಸಿದ್ಧಾಂತ ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅದೇ ರೀತಿ ಅದಕ್ಕೆ ಪ್ರತಿಯಾಗಿ ಪಿ.ಎಫ್.ಐ.ನ ಸಿದ್ಧಾಂತದಿಂದ ಪ್ರಭಾವಿತರಾದ ಕಾರ್ಯಕರ್ತರು ಕ್ರಿಯೆಗೆ ಪ್ರತಿಕ್ರಿಯೆ ಎಂಬ ನೆಲೆಯಲ್ಲಿ ಸಕ್ರಿಯವಾಗಿ ಸಮಾಜ ಬಾಹಯ, ಶಾಂತಿ ಭಂಗದ ಕೃತ್ಯಗಳಲ್ಲಿ ಭಾಗವಹಿಸಿ ಕಾನೂನನ್ನು ಕೈಗೆತ್ತಿಕೊಂಡಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ನೆಲದ ಕಾನೂನನ್ನು ಎತ್ತಿ ಹಿಡಿದು ಕಾನೂನಿನನ್ವಯ ಕಾರ್ಯ ಪ್ರವೃತ್ತರಾಗಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರು ಮತ್ತೆ ಇದೇ ಸಂಘಟನೆಗಳ ನಾಯಕರೊಂದಿಗೆ ಒಪ್ಪಂದ ನಡೆಸಿ ಲೋಪವೆಸಗಿದ್ದಾರೆ ಎಂದು ಯಾದವ್‌ ದೂರಿದ್ದಾರೆ.

ಅಪರಾಧಿಗಳನ್ನು ಹಸ್ತಾಂತರ ಮತ್ತು ಕೆಲವು ಘಟನೆಗಳಲ್ಲಿ ಅಪರಾಧಿಗಳ ಅದಲು ಬದಲಿನಂತಹ ಪರಸ್ಪರ ಸಂಯೋಜನೆಯನ್ನು ರೂಪಿಸುವ ಮೂಲಕ ಸಂಘ ಪರಿವಾರ ಹಾಗೂ ಪಿಎಫ್‌ಐನಂತಹ ಸಮಾಜಬಾಹಿರ ಸಂಘಟನೆಗಳಿಗೆ ಪೊಲೀಸರು ಕುಮ್ಮಕ್ಕು ನೀಡಿರುವುದನ್ನು ಕಾಣಬಹುದು. ಆದುದರಿಂದ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗಳು ಈ ಎರಡು ಸಮಾಜ ಬಾಹಿರ ಕೃತ್ಯಗಳ ವಾರೀಸುದಾರ ಸಂಘಟನೆಗಳೊಂದಿಗೆ ಪೊಲೀಸ್ ಇಲಾಖೆಯೂ ಹೊಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

ಸಂಘ ಪರಿವಾರ ಹಾಗೂ ಪಿಎಫ್‌ಐ ಸಂಘಟನೆಗಳು ಇತ್ತೀಚಿನ ಪೊಲೀಸ್ ಠಾಣೆಗಳ ಮುಂಭಾಗದ ಪ್ರತಿಭಟನೆಯಲ್ಲಿ ಭಜನೆ, ನಮಾಜಿನಂತಹ ಪವಿತ್ರ ಧಾರ್ಮಿಕ ಆಚರಣೆಗಳನ್ನು ಬಳಕೆ ಮಾಡಿರುವುದು ಸಮಾಜದಲ್ಲಿ ಮತೀಯ ದ್ರುವೀಕರಣ ಮತ್ತಷ್ಟು ಆಳಗೊಳಿಸುವ ವ್ಯವಸ್ಥಿತ ಹುನ್ನಾರವಾಗಿದೆ. ಇಂತಹ ಅಪಾಯಕಾರಿ ಬೆಳವಣಿಗೆಗಳನ್ನು ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ದಕ್ಷಿಣ ಜಿಲ್ಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೂದಿಮುಚ್ಚಿದ ಕೆಂಡದಂತಿರುವ ಕೋಮು ಉದ್ವಿಘ್ನತೆಯ ಸಮಯದಲ್ಲಿ ಕಳೆದ ಎರಡು ತಿಂಗಳ ಹಿಂದೆ ನೀಡಿರುವ ಹೇಳಿಕೆ ಸಮಾಜ ಬಾಹಿರ ಕೃತ್ಯಗಳಲ್ಲಿರುವ ಸಂಘ ಪರಿವಾರದ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ಬಿಜೆಪಿ ಪಕ್ಷದ ಸಂಸದರು, ಶಾಸಕರು, ನಾಯಕರು ಪೊಲೀಸ್ ಇಲಾಖೆಯ ಸ್ವತಂತ್ರ ಕಾರ್ಯನಿರ್ವಹಣೆಯ ಮೇಲೆ ಪ್ರಭಾವ ಬೀರಿದ್ದಾರೆ. ಇದರ ಪರಿಣಾಮವಾಗಿ ಜಿಲ್ಲೆಯ ಕೆಲವು ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಆಚರಣೆಯು ಸಂಘ ಪರಿವಾರದ ಡ್ರೆಸ್ ಕೋಡಿನೊಂದಿಗೆ ನಡೆದಿದೆ. ಇದನ್ನು ಬಲವಾಗಿ ಉನ್ನತ ಪೊಲೀಸರು ಬೆಂಬಲಿಸಿ ಪ್ರತಿಪಾದಿಸಿರುವುದನ್ನು ಈ ಹಿನ್ನೆಲೆಯಲ್ಲಿ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಅದೇ ರೀತಿ ಇತ್ತೀಚೆಗೆ ಕರಾವಳಿ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಸಂಘ ಪರಿವಾರ ಪ್ರತಿಭಟನೆಯ ಭಾಗವಾಗಿ ಭಜನೆ ಹಾಡುವ ಕ್ರಮವನ್ನು ಪೊಲೀಸರು ತಡೆಯದಿರುವುದು. ಇದೇ ರೀತಿಯಲ್ಲಿ ಉಪ್ಪಿನಂಗಡಿ ಠಾಣೆ ಆವರಣದಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಮಾಜನ್ನು ಕೂಡಾ ಮಾಡಲು ಅವಕಾಶ ನೀಡಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯವಾಗಿದೆ. ಅಷ್ಟು ಮಾತ್ರವೇ ಅಲ್ಲದೆ ಕೆಲವು ಪೊಲೀಸ್ ಠಾಣೆಗಳಲ್ಲಿ ಗರ್ಭಿಣೆ ಮಹಿಳೆಯರಿಗೆ ಸಂಪ್ರದಾಯದ ಹಿನ್ನೆಲೆಯ ಸೀಮಂತ ಥರದ ಮೊದಲಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪೊಲೀಸ್ ಇಲಾಖೆ ಕರ್ತವ್ಯದ ಪರಿಧಿಯನ್ನು ದಾಟಿರುವ ಪ್ರಕರಣಗಳು ನಡೆದಿವೆ ಎಂದು ಅವರು ಎಚ್ಚರಿಸಿದ್ದಾರೆ.

ಸಂಘ ಪರಿವಾರದ ಕ್ರಿಯೆ, ಪಿಎಫ್‌ಐನಂತಹ ಸಂಘಟನೆಗಳ ಪ್ರತಿತಂತ್ರ ಮತ್ತು ಪೊಲೀಸರ ಓಲೈಕೆಯ ಅಧಿಕಾರ ತಂತ್ರಗಳು ಜಿಲ್ಲೆಯನ್ನು ಕೋಮು ಉದ್ವಿಘ್ನತೆಯ ಅಗ್ನಿ ಕುಂಡದ ಬಳಿ ತಂದಿರಿಸಿದೆ. ಜಿಲ್ಲೆಯ ಶಾಂತಿ, ಸಾಮರಸ್ಯ, ಸಹಬಾಳ್ವೆ ಮರೀಚಿಕೆಯಾಗಿದೆ. ಕೊರೊನಾ ಸಾಂಕ್ರಾಮಿಕದಿಂದ, ಕೇಂದ್ರ, ರಾಜ್ಯ ಸರಕಾರದ ತಪ್ಪು ಆರ್ಥಿಕ ನೀತಿ, ಕೈಗಾರಿಕಾ ನೀತಿಯಿಂದ; ವ್ಯಾಪಕ ಬಡತನ, ಹಸಿವು, ಬೆಲೆ ಏರಿಕೆ, ನಿರುದ್ಯೋಗದಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯರ ಮೇಲೆ, ಅಪ್ರಾಪ್ತ ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರದ ಘಟನೆಗಳು ಹೆಚ್ಚಾಗುತ್ತಿದೆ. ಇಂತಹ ಜ್ವಲಂತ ಸಮಸ್ಯೆಗಳು ಜನರನ್ನು ಕಾಡುತ್ತಿರುವಾಗ ಸಂಘ ಪರಿವಾರದ ಸಂಘಟನೆಗಳು ಮತ್ತು ಪಿ.ಎಫ್.ಐ. ಜನರನ್ನು ದಾರಿ ತಪ್ಪಿಸಿ ರಾಜಕೀಯ ಲಾಭ ಪಡೆಯಲು ಕೋಮು ದ್ವೇಷದ ವಿಷ ಪ್ರಸರಿಸುತ್ತಿರುವುದು ತೀವ್ರ ಖಂಡನೀಯ ಎಂದಿದ್ದಾರೆ.

ಜಿಲ್ಲೆಯ ಜಾತ್ಯಾತೀತ ಪರಂಪರೆ, ಶಾಂತಿ ಮತ್ತು ಅಭಿವೃದ್ಧಿಗಾಗಿ ಪ್ರಗತಿಪರ ಶಕ್ತಿಗಳೊಂದಿಗೆ ಸೇರಿ ಪರಸ್ಪರ ಶಾಂತಿ ಸೌಹಾರ್ದತೆಗಾಗಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...