Homeಕರ್ನಾಟಕಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

"ಉಭಯ ಕೋಮುಗಳ ಪ್ರತಿಭಟನೆಯಲ್ಲಿ ಭಜನೆ ಹಾಗೂ ನಮಾಜಿಗೆ ಅವಕಾಶ ನೀಡುತ್ತಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯ"

- Advertisement -
- Advertisement -

ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಸಂಭವಿಸಿದ ಲಾಠಿಚಾರ್ಜ್, ಅಶಾಂತಿಯ ಪ್ರಕರಣಗಳು ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ಸಂಘ ಪರಿವಾರ ಮತ್ತು ಪಿಎಫ್‌ಐ ಸಂಘಟನೆಗಳು ಸಂಯೋಜಿಸಿ ನಿರ್ದೇಶಿಸುತ್ತಿರುವ ಮತೀಯ ಹುನ್ನಾರ, ಕೋಮು ಗಲಭೆಗೆ ವೇದಿಕೆ ನಿರ್ಮಿಸುವ ಪೂರ್ವ ಯೋಜಿತ ಕೃತ್ಯಗಳ ಮುಂದುವರಿದ ಭಾಗವೇ ಆಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಿ.ಪಿ.ಐ(ಎಂ) ಸಮಿತಿ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹೇಳಿದ್ದಾರೆ.

ಪತ್ರಿಕೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳ ಮೇಲೆ ಹಲ್ಲೆ, ಭಿನ್ನ ಧರ್ಮಿಯ ಸಹಭೋಜನ ಮತ್ತು ಸಹಕೂಟಗಳ ಮೇಲೆ ಗುಂಪು ಹಲ್ಲೆ, ಪರಸ್ಪರ ವ್ಯಾಪಾರ-ವ್ಯವಹಾರಗಳ ಮೇಲೆ ದಾಂಧಲೆ, ಲವ್ ಜಿಹಾದ್ ಕಟ್ಟುಕತೆಗಳು, ದನ ಕಳ್ಳತನ ಮತ್ತು ನಾಗಬನ ಧ್ವಂಸದ ಪ್ರಕರಣ ಹಾಗೂ ಪೂಜಾ ಸ್ಥಳಗಳ ಅಪವಿತ್ರ ಇವೇ ಮೊದಲಾದ ಸಮಾಜ ಬಾಹಿರ ಕೃತ್ಯಗಳು ಒಂದಾದ ಮೇಲೆ ಒಂದರಂತೆ ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿವೆ. ಇವುಗಳ ಹಿಂದೆ ಸಂಘ ಪರಿವಾರದ ಸಂಘಟನೆಗಳ ಸಿದ್ಧಾಂತ ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅದೇ ರೀತಿ ಅದಕ್ಕೆ ಪ್ರತಿಯಾಗಿ ಪಿ.ಎಫ್.ಐ.ನ ಸಿದ್ಧಾಂತದಿಂದ ಪ್ರಭಾವಿತರಾದ ಕಾರ್ಯಕರ್ತರು ಕ್ರಿಯೆಗೆ ಪ್ರತಿಕ್ರಿಯೆ ಎಂಬ ನೆಲೆಯಲ್ಲಿ ಸಕ್ರಿಯವಾಗಿ ಸಮಾಜ ಬಾಹಯ, ಶಾಂತಿ ಭಂಗದ ಕೃತ್ಯಗಳಲ್ಲಿ ಭಾಗವಹಿಸಿ ಕಾನೂನನ್ನು ಕೈಗೆತ್ತಿಕೊಂಡಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ನೆಲದ ಕಾನೂನನ್ನು ಎತ್ತಿ ಹಿಡಿದು ಕಾನೂನಿನನ್ವಯ ಕಾರ್ಯ ಪ್ರವೃತ್ತರಾಗಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರು ಮತ್ತೆ ಇದೇ ಸಂಘಟನೆಗಳ ನಾಯಕರೊಂದಿಗೆ ಒಪ್ಪಂದ ನಡೆಸಿ ಲೋಪವೆಸಗಿದ್ದಾರೆ ಎಂದು ಯಾದವ್‌ ದೂರಿದ್ದಾರೆ.

ಅಪರಾಧಿಗಳನ್ನು ಹಸ್ತಾಂತರ ಮತ್ತು ಕೆಲವು ಘಟನೆಗಳಲ್ಲಿ ಅಪರಾಧಿಗಳ ಅದಲು ಬದಲಿನಂತಹ ಪರಸ್ಪರ ಸಂಯೋಜನೆಯನ್ನು ರೂಪಿಸುವ ಮೂಲಕ ಸಂಘ ಪರಿವಾರ ಹಾಗೂ ಪಿಎಫ್‌ಐನಂತಹ ಸಮಾಜಬಾಹಿರ ಸಂಘಟನೆಗಳಿಗೆ ಪೊಲೀಸರು ಕುಮ್ಮಕ್ಕು ನೀಡಿರುವುದನ್ನು ಕಾಣಬಹುದು. ಆದುದರಿಂದ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗಳು ಈ ಎರಡು ಸಮಾಜ ಬಾಹಿರ ಕೃತ್ಯಗಳ ವಾರೀಸುದಾರ ಸಂಘಟನೆಗಳೊಂದಿಗೆ ಪೊಲೀಸ್ ಇಲಾಖೆಯೂ ಹೊಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

ಸಂಘ ಪರಿವಾರ ಹಾಗೂ ಪಿಎಫ್‌ಐ ಸಂಘಟನೆಗಳು ಇತ್ತೀಚಿನ ಪೊಲೀಸ್ ಠಾಣೆಗಳ ಮುಂಭಾಗದ ಪ್ರತಿಭಟನೆಯಲ್ಲಿ ಭಜನೆ, ನಮಾಜಿನಂತಹ ಪವಿತ್ರ ಧಾರ್ಮಿಕ ಆಚರಣೆಗಳನ್ನು ಬಳಕೆ ಮಾಡಿರುವುದು ಸಮಾಜದಲ್ಲಿ ಮತೀಯ ದ್ರುವೀಕರಣ ಮತ್ತಷ್ಟು ಆಳಗೊಳಿಸುವ ವ್ಯವಸ್ಥಿತ ಹುನ್ನಾರವಾಗಿದೆ. ಇಂತಹ ಅಪಾಯಕಾರಿ ಬೆಳವಣಿಗೆಗಳನ್ನು ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ದಕ್ಷಿಣ ಜಿಲ್ಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೂದಿಮುಚ್ಚಿದ ಕೆಂಡದಂತಿರುವ ಕೋಮು ಉದ್ವಿಘ್ನತೆಯ ಸಮಯದಲ್ಲಿ ಕಳೆದ ಎರಡು ತಿಂಗಳ ಹಿಂದೆ ನೀಡಿರುವ ಹೇಳಿಕೆ ಸಮಾಜ ಬಾಹಿರ ಕೃತ್ಯಗಳಲ್ಲಿರುವ ಸಂಘ ಪರಿವಾರದ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ಬಿಜೆಪಿ ಪಕ್ಷದ ಸಂಸದರು, ಶಾಸಕರು, ನಾಯಕರು ಪೊಲೀಸ್ ಇಲಾಖೆಯ ಸ್ವತಂತ್ರ ಕಾರ್ಯನಿರ್ವಹಣೆಯ ಮೇಲೆ ಪ್ರಭಾವ ಬೀರಿದ್ದಾರೆ. ಇದರ ಪರಿಣಾಮವಾಗಿ ಜಿಲ್ಲೆಯ ಕೆಲವು ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಆಚರಣೆಯು ಸಂಘ ಪರಿವಾರದ ಡ್ರೆಸ್ ಕೋಡಿನೊಂದಿಗೆ ನಡೆದಿದೆ. ಇದನ್ನು ಬಲವಾಗಿ ಉನ್ನತ ಪೊಲೀಸರು ಬೆಂಬಲಿಸಿ ಪ್ರತಿಪಾದಿಸಿರುವುದನ್ನು ಈ ಹಿನ್ನೆಲೆಯಲ್ಲಿ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಅದೇ ರೀತಿ ಇತ್ತೀಚೆಗೆ ಕರಾವಳಿ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಸಂಘ ಪರಿವಾರ ಪ್ರತಿಭಟನೆಯ ಭಾಗವಾಗಿ ಭಜನೆ ಹಾಡುವ ಕ್ರಮವನ್ನು ಪೊಲೀಸರು ತಡೆಯದಿರುವುದು. ಇದೇ ರೀತಿಯಲ್ಲಿ ಉಪ್ಪಿನಂಗಡಿ ಠಾಣೆ ಆವರಣದಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಮಾಜನ್ನು ಕೂಡಾ ಮಾಡಲು ಅವಕಾಶ ನೀಡಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯವಾಗಿದೆ. ಅಷ್ಟು ಮಾತ್ರವೇ ಅಲ್ಲದೆ ಕೆಲವು ಪೊಲೀಸ್ ಠಾಣೆಗಳಲ್ಲಿ ಗರ್ಭಿಣೆ ಮಹಿಳೆಯರಿಗೆ ಸಂಪ್ರದಾಯದ ಹಿನ್ನೆಲೆಯ ಸೀಮಂತ ಥರದ ಮೊದಲಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪೊಲೀಸ್ ಇಲಾಖೆ ಕರ್ತವ್ಯದ ಪರಿಧಿಯನ್ನು ದಾಟಿರುವ ಪ್ರಕರಣಗಳು ನಡೆದಿವೆ ಎಂದು ಅವರು ಎಚ್ಚರಿಸಿದ್ದಾರೆ.

ಸಂಘ ಪರಿವಾರದ ಕ್ರಿಯೆ, ಪಿಎಫ್‌ಐನಂತಹ ಸಂಘಟನೆಗಳ ಪ್ರತಿತಂತ್ರ ಮತ್ತು ಪೊಲೀಸರ ಓಲೈಕೆಯ ಅಧಿಕಾರ ತಂತ್ರಗಳು ಜಿಲ್ಲೆಯನ್ನು ಕೋಮು ಉದ್ವಿಘ್ನತೆಯ ಅಗ್ನಿ ಕುಂಡದ ಬಳಿ ತಂದಿರಿಸಿದೆ. ಜಿಲ್ಲೆಯ ಶಾಂತಿ, ಸಾಮರಸ್ಯ, ಸಹಬಾಳ್ವೆ ಮರೀಚಿಕೆಯಾಗಿದೆ. ಕೊರೊನಾ ಸಾಂಕ್ರಾಮಿಕದಿಂದ, ಕೇಂದ್ರ, ರಾಜ್ಯ ಸರಕಾರದ ತಪ್ಪು ಆರ್ಥಿಕ ನೀತಿ, ಕೈಗಾರಿಕಾ ನೀತಿಯಿಂದ; ವ್ಯಾಪಕ ಬಡತನ, ಹಸಿವು, ಬೆಲೆ ಏರಿಕೆ, ನಿರುದ್ಯೋಗದಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯರ ಮೇಲೆ, ಅಪ್ರಾಪ್ತ ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರದ ಘಟನೆಗಳು ಹೆಚ್ಚಾಗುತ್ತಿದೆ. ಇಂತಹ ಜ್ವಲಂತ ಸಮಸ್ಯೆಗಳು ಜನರನ್ನು ಕಾಡುತ್ತಿರುವಾಗ ಸಂಘ ಪರಿವಾರದ ಸಂಘಟನೆಗಳು ಮತ್ತು ಪಿ.ಎಫ್.ಐ. ಜನರನ್ನು ದಾರಿ ತಪ್ಪಿಸಿ ರಾಜಕೀಯ ಲಾಭ ಪಡೆಯಲು ಕೋಮು ದ್ವೇಷದ ವಿಷ ಪ್ರಸರಿಸುತ್ತಿರುವುದು ತೀವ್ರ ಖಂಡನೀಯ ಎಂದಿದ್ದಾರೆ.

ಜಿಲ್ಲೆಯ ಜಾತ್ಯಾತೀತ ಪರಂಪರೆ, ಶಾಂತಿ ಮತ್ತು ಅಭಿವೃದ್ಧಿಗಾಗಿ ಪ್ರಗತಿಪರ ಶಕ್ತಿಗಳೊಂದಿಗೆ ಸೇರಿ ಪರಸ್ಪರ ಶಾಂತಿ ಸೌಹಾರ್ದತೆಗಾಗಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...