Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...