Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...