Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...