Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...