Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...