Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...