Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...