Homeರಾಷ್ಟ್ರೀಯಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

ಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

- Advertisement -
- Advertisement -

ಇತ್ತೀಚೆಗೆ ನಿಷೇಧಗೊಂಡ ಬಲಪಂಥೀಯ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕರೆ ನೀಡಿದ್ದ ರಾಜ್ಯವ್ಯಾಪಿ ಹರತಾಳದ ಹಿಂಸಾಚಾರದ ವೇಳೆ ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿ 86 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಕೇರಳ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ. ಅಲ್ಲದೆ ಹಿಂಸಾತ್ಮಕ ಹರತಾಳದಲ್ಲಿ ಖಾಸಗಿ ವ್ಯಕ್ತಿಗಳಿಗೆ 16 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಹೇಳಿದೆ. ಸೆಪ್ಟೆಂಬರ್ 23 ರಂದು ಪಿಎಫ್‌ಐ ಹರತಾಳಕ್ಕೆ ಕರೆ ನೀಡಿತ್ತು ಮತ್ತು ಈ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿತ್ತು.

ಹಿಂಸಾತ್ಮಕ ಹರತಾಳಕ್ಕೆ ಕರೆ ನೀಡಿದವರಿಂದ ನಷ್ಟವನ್ನು ಮರುಪಡೆಯುವ ಪ್ರಕ್ರಿಯೆಯನ್ನು ತಾನು ಪ್ರಾರಂಭಿಸಿರುವುದಾಗಿ ಸರ್ಕಾರ ಹೇಳಿದೆ. ಇದಕ್ಕಾಗಿ ಮಾಜಿ ಜಿಲ್ಲಾ ನ್ಯಾಯಾಧೀಶರಾದ ಪಿ.ಡಿ. ಶರ್ಗಾಧರನ್ ಅವರನ್ನು ಹಕ್ಕುಗಳ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಬಂಧಕ ಬಂಧನದ ಭಾಗವಾಗಿ ಒಟ್ಟು 724 ಜನರನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲಾ ಅಪರಾಧಿಗಳನ್ನು ಗುರುತಿಸಲಾಗಿದ್ದು ಮತ್ತು ಹೆಚ್ಚಿನವರನ್ನು ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಹರತಾಳ ದಿನದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಇದುವರೆಗೆ ಒಟ್ಟು 361 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 2,674 ಜನರನ್ನು ಬಂಧಿಸಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ: ಭಾರತೀಯ ಚುನಾವಣಾ ಆಯೋಗ

ಈ ಹಿಂದೆ, ಹರತಾಳ ಸಂಬಂಧಿತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಮತ್ತು ಸರ್ಕಾರ ಅಂದಾಜು ಮಾಡಿದ ಹಾನಿಗೆ ಗೃಹ ಇಲಾಖೆಗೆ 5.2 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ನಿಷೇಧಿತ ಪಿಎಫ್‌ಐ ಮತ್ತು ಅದರ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ತಾರ್‌ ಅವರಿಗೆ ಹೈಕೋರ್ಟ್ ಹೇಳಿತ್ತು.

ಹರತಾಳ ಸಮಯದಲ್ಲಿ ತನ್ನ ಬಸ್‌ಗಳಿಗೆ ಹಾನಿ ಮತ್ತು ಸೇವೆಗಳನ್ನು ಕಡಿತಗೊಳಿಸಿದ್ದಕ್ಕಾಗಿ ಪಿಎಫ್‌ಐ ಮತ್ತು ಸತಾರ್‌ ಅವರಿಂದ 5 ಕೋಟಿ ರೂ.ಗೂ ಹೆಚ್ಚು ಪರಿಹಾರವನ್ನು ಕೋರಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಕೀಲ ದೀಪು ತಂಕನ್ ಮೂಲಕ ಸಲ್ಲಿಸಿದ ಮನವಿಯ ಮೇರೆಗೆ ಈ ಆದೇಶ ಹೊರಬಿದ್ದಿತ್ತು.

ಕೆಎಸ್‌ಆರ್‌ಟಿಸಿಯು ತನ್ನ ಅರ್ಜಿಯಲ್ಲಿ ಯಾವುದೇ ಮುನ್ಸೂಚನೆ ನೀಡದೆ ಹರತಾಳಕ್ಕೆ ಕರೆ ನೀಡಲಾಗಿದ್ದು, ಇದು ಹೈಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದೆ ಮತ್ತು ಅಂದು ನಡೆದ ಹಿಂಸಾಚಾರದಲ್ಲಿ 58 ಬಸ್‌ಗಳ ಗಾಜು ಮತ್ತು ಸೀಟುಗಳಿಗೆ ಹಾನಿಯಾಗಿದೆ, ಜೊತೆಗೆ 10 ನೌಕರರು ಮತ್ತು ಒಬ್ಬ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಸತ್ತಾರ್‌‌ ಅವರು ಪಿಎಫ್‌ಐಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾಗ, ಪಿಎಫ್‌ಐ ಕಚೇರಿಗಳ ಮೇಲೆ ಕೇಂದ್ರದ ತನಿಖಾ ಸಂಸ್ಧೆಗಳು ರಾಷ್ಟ್ರವ್ಯಾಪಿ ದಾಳಿ ಮತ್ತು ಅದರ ಮುಖಂಡರ ಬಂಧನದ ವಿರುದ್ಧ ಹರತಾಳಕ್ಕೆ ಕರೆ ನೀಡಿದ್ದರು. ಇದರ ನಂತರ ಅವರು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಪಿಎಫ್‌ಐ ಅನ್ನು ನಿಷೇಧಿಸಿದ ಕೆಲವೇ ಗಂಟೆಗಳ ನಂತರ, “ಗೃಹ ಸಚಿವಾಲಯದ ನಿರ್ಧಾರದ ಹಿನ್ನೆಲೆಯಲ್ಲಿ ಸಂಘಟನೆಯನ್ನು ವಿಸರ್ಜಿಸಲಾಗಿದೆ” ಎಂದು ಅವರು ಹೇಳಿಕೆ ಬಿಡುಗಡೆ ಮಾಡಿದ್ದರು. ಇದರ ನಂತರ ಅವರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...