Homeರಾಷ್ಟ್ರೀಯಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

ಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

- Advertisement -
- Advertisement -

ಇತ್ತೀಚೆಗೆ ನಿಷೇಧಗೊಂಡ ಬಲಪಂಥೀಯ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕರೆ ನೀಡಿದ್ದ ರಾಜ್ಯವ್ಯಾಪಿ ಹರತಾಳದ ಹಿಂಸಾಚಾರದ ವೇಳೆ ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿ 86 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಕೇರಳ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ. ಅಲ್ಲದೆ ಹಿಂಸಾತ್ಮಕ ಹರತಾಳದಲ್ಲಿ ಖಾಸಗಿ ವ್ಯಕ್ತಿಗಳಿಗೆ 16 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಹೇಳಿದೆ. ಸೆಪ್ಟೆಂಬರ್ 23 ರಂದು ಪಿಎಫ್‌ಐ ಹರತಾಳಕ್ಕೆ ಕರೆ ನೀಡಿತ್ತು ಮತ್ತು ಈ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿತ್ತು.

ಹಿಂಸಾತ್ಮಕ ಹರತಾಳಕ್ಕೆ ಕರೆ ನೀಡಿದವರಿಂದ ನಷ್ಟವನ್ನು ಮರುಪಡೆಯುವ ಪ್ರಕ್ರಿಯೆಯನ್ನು ತಾನು ಪ್ರಾರಂಭಿಸಿರುವುದಾಗಿ ಸರ್ಕಾರ ಹೇಳಿದೆ. ಇದಕ್ಕಾಗಿ ಮಾಜಿ ಜಿಲ್ಲಾ ನ್ಯಾಯಾಧೀಶರಾದ ಪಿ.ಡಿ. ಶರ್ಗಾಧರನ್ ಅವರನ್ನು ಹಕ್ಕುಗಳ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಬಂಧಕ ಬಂಧನದ ಭಾಗವಾಗಿ ಒಟ್ಟು 724 ಜನರನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲಾ ಅಪರಾಧಿಗಳನ್ನು ಗುರುತಿಸಲಾಗಿದ್ದು ಮತ್ತು ಹೆಚ್ಚಿನವರನ್ನು ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಹರತಾಳ ದಿನದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಇದುವರೆಗೆ ಒಟ್ಟು 361 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 2,674 ಜನರನ್ನು ಬಂಧಿಸಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ: ಭಾರತೀಯ ಚುನಾವಣಾ ಆಯೋಗ

ಈ ಹಿಂದೆ, ಹರತಾಳ ಸಂಬಂಧಿತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಮತ್ತು ಸರ್ಕಾರ ಅಂದಾಜು ಮಾಡಿದ ಹಾನಿಗೆ ಗೃಹ ಇಲಾಖೆಗೆ 5.2 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ನಿಷೇಧಿತ ಪಿಎಫ್‌ಐ ಮತ್ತು ಅದರ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ತಾರ್‌ ಅವರಿಗೆ ಹೈಕೋರ್ಟ್ ಹೇಳಿತ್ತು.

ಹರತಾಳ ಸಮಯದಲ್ಲಿ ತನ್ನ ಬಸ್‌ಗಳಿಗೆ ಹಾನಿ ಮತ್ತು ಸೇವೆಗಳನ್ನು ಕಡಿತಗೊಳಿಸಿದ್ದಕ್ಕಾಗಿ ಪಿಎಫ್‌ಐ ಮತ್ತು ಸತಾರ್‌ ಅವರಿಂದ 5 ಕೋಟಿ ರೂ.ಗೂ ಹೆಚ್ಚು ಪರಿಹಾರವನ್ನು ಕೋರಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಕೀಲ ದೀಪು ತಂಕನ್ ಮೂಲಕ ಸಲ್ಲಿಸಿದ ಮನವಿಯ ಮೇರೆಗೆ ಈ ಆದೇಶ ಹೊರಬಿದ್ದಿತ್ತು.

ಕೆಎಸ್‌ಆರ್‌ಟಿಸಿಯು ತನ್ನ ಅರ್ಜಿಯಲ್ಲಿ ಯಾವುದೇ ಮುನ್ಸೂಚನೆ ನೀಡದೆ ಹರತಾಳಕ್ಕೆ ಕರೆ ನೀಡಲಾಗಿದ್ದು, ಇದು ಹೈಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದೆ ಮತ್ತು ಅಂದು ನಡೆದ ಹಿಂಸಾಚಾರದಲ್ಲಿ 58 ಬಸ್‌ಗಳ ಗಾಜು ಮತ್ತು ಸೀಟುಗಳಿಗೆ ಹಾನಿಯಾಗಿದೆ, ಜೊತೆಗೆ 10 ನೌಕರರು ಮತ್ತು ಒಬ್ಬ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಸತ್ತಾರ್‌‌ ಅವರು ಪಿಎಫ್‌ಐಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾಗ, ಪಿಎಫ್‌ಐ ಕಚೇರಿಗಳ ಮೇಲೆ ಕೇಂದ್ರದ ತನಿಖಾ ಸಂಸ್ಧೆಗಳು ರಾಷ್ಟ್ರವ್ಯಾಪಿ ದಾಳಿ ಮತ್ತು ಅದರ ಮುಖಂಡರ ಬಂಧನದ ವಿರುದ್ಧ ಹರತಾಳಕ್ಕೆ ಕರೆ ನೀಡಿದ್ದರು. ಇದರ ನಂತರ ಅವರು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಪಿಎಫ್‌ಐ ಅನ್ನು ನಿಷೇಧಿಸಿದ ಕೆಲವೇ ಗಂಟೆಗಳ ನಂತರ, “ಗೃಹ ಸಚಿವಾಲಯದ ನಿರ್ಧಾರದ ಹಿನ್ನೆಲೆಯಲ್ಲಿ ಸಂಘಟನೆಯನ್ನು ವಿಸರ್ಜಿಸಲಾಗಿದೆ” ಎಂದು ಅವರು ಹೇಳಿಕೆ ಬಿಡುಗಡೆ ಮಾಡಿದ್ದರು. ಇದರ ನಂತರ ಅವರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...