Homeರಾಷ್ಟ್ರೀಯಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

ಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

- Advertisement -
- Advertisement -

ಇತ್ತೀಚೆಗೆ ನಿಷೇಧಗೊಂಡ ಬಲಪಂಥೀಯ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕರೆ ನೀಡಿದ್ದ ರಾಜ್ಯವ್ಯಾಪಿ ಹರತಾಳದ ಹಿಂಸಾಚಾರದ ವೇಳೆ ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿ 86 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಕೇರಳ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ. ಅಲ್ಲದೆ ಹಿಂಸಾತ್ಮಕ ಹರತಾಳದಲ್ಲಿ ಖಾಸಗಿ ವ್ಯಕ್ತಿಗಳಿಗೆ 16 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಹೇಳಿದೆ. ಸೆಪ್ಟೆಂಬರ್ 23 ರಂದು ಪಿಎಫ್‌ಐ ಹರತಾಳಕ್ಕೆ ಕರೆ ನೀಡಿತ್ತು ಮತ್ತು ಈ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿತ್ತು.

ಹಿಂಸಾತ್ಮಕ ಹರತಾಳಕ್ಕೆ ಕರೆ ನೀಡಿದವರಿಂದ ನಷ್ಟವನ್ನು ಮರುಪಡೆಯುವ ಪ್ರಕ್ರಿಯೆಯನ್ನು ತಾನು ಪ್ರಾರಂಭಿಸಿರುವುದಾಗಿ ಸರ್ಕಾರ ಹೇಳಿದೆ. ಇದಕ್ಕಾಗಿ ಮಾಜಿ ಜಿಲ್ಲಾ ನ್ಯಾಯಾಧೀಶರಾದ ಪಿ.ಡಿ. ಶರ್ಗಾಧರನ್ ಅವರನ್ನು ಹಕ್ಕುಗಳ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಬಂಧಕ ಬಂಧನದ ಭಾಗವಾಗಿ ಒಟ್ಟು 724 ಜನರನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲಾ ಅಪರಾಧಿಗಳನ್ನು ಗುರುತಿಸಲಾಗಿದ್ದು ಮತ್ತು ಹೆಚ್ಚಿನವರನ್ನು ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಹರತಾಳ ದಿನದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಇದುವರೆಗೆ ಒಟ್ಟು 361 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 2,674 ಜನರನ್ನು ಬಂಧಿಸಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ: ಭಾರತೀಯ ಚುನಾವಣಾ ಆಯೋಗ

ಈ ಹಿಂದೆ, ಹರತಾಳ ಸಂಬಂಧಿತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಮತ್ತು ಸರ್ಕಾರ ಅಂದಾಜು ಮಾಡಿದ ಹಾನಿಗೆ ಗೃಹ ಇಲಾಖೆಗೆ 5.2 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ನಿಷೇಧಿತ ಪಿಎಫ್‌ಐ ಮತ್ತು ಅದರ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸತ್ತಾರ್‌ ಅವರಿಗೆ ಹೈಕೋರ್ಟ್ ಹೇಳಿತ್ತು.

ಹರತಾಳ ಸಮಯದಲ್ಲಿ ತನ್ನ ಬಸ್‌ಗಳಿಗೆ ಹಾನಿ ಮತ್ತು ಸೇವೆಗಳನ್ನು ಕಡಿತಗೊಳಿಸಿದ್ದಕ್ಕಾಗಿ ಪಿಎಫ್‌ಐ ಮತ್ತು ಸತಾರ್‌ ಅವರಿಂದ 5 ಕೋಟಿ ರೂ.ಗೂ ಹೆಚ್ಚು ಪರಿಹಾರವನ್ನು ಕೋರಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಕೀಲ ದೀಪು ತಂಕನ್ ಮೂಲಕ ಸಲ್ಲಿಸಿದ ಮನವಿಯ ಮೇರೆಗೆ ಈ ಆದೇಶ ಹೊರಬಿದ್ದಿತ್ತು.

ಕೆಎಸ್‌ಆರ್‌ಟಿಸಿಯು ತನ್ನ ಅರ್ಜಿಯಲ್ಲಿ ಯಾವುದೇ ಮುನ್ಸೂಚನೆ ನೀಡದೆ ಹರತಾಳಕ್ಕೆ ಕರೆ ನೀಡಲಾಗಿದ್ದು, ಇದು ಹೈಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದೆ ಮತ್ತು ಅಂದು ನಡೆದ ಹಿಂಸಾಚಾರದಲ್ಲಿ 58 ಬಸ್‌ಗಳ ಗಾಜು ಮತ್ತು ಸೀಟುಗಳಿಗೆ ಹಾನಿಯಾಗಿದೆ, ಜೊತೆಗೆ 10 ನೌಕರರು ಮತ್ತು ಒಬ್ಬ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಸತ್ತಾರ್‌‌ ಅವರು ಪಿಎಫ್‌ಐಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾಗ, ಪಿಎಫ್‌ಐ ಕಚೇರಿಗಳ ಮೇಲೆ ಕೇಂದ್ರದ ತನಿಖಾ ಸಂಸ್ಧೆಗಳು ರಾಷ್ಟ್ರವ್ಯಾಪಿ ದಾಳಿ ಮತ್ತು ಅದರ ಮುಖಂಡರ ಬಂಧನದ ವಿರುದ್ಧ ಹರತಾಳಕ್ಕೆ ಕರೆ ನೀಡಿದ್ದರು. ಇದರ ನಂತರ ಅವರು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಪಿಎಫ್‌ಐ ಅನ್ನು ನಿಷೇಧಿಸಿದ ಕೆಲವೇ ಗಂಟೆಗಳ ನಂತರ, “ಗೃಹ ಸಚಿವಾಲಯದ ನಿರ್ಧಾರದ ಹಿನ್ನೆಲೆಯಲ್ಲಿ ಸಂಘಟನೆಯನ್ನು ವಿಸರ್ಜಿಸಲಾಗಿದೆ” ಎಂದು ಅವರು ಹೇಳಿಕೆ ಬಿಡುಗಡೆ ಮಾಡಿದ್ದರು. ಇದರ ನಂತರ ಅವರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...