Homeಅಂತರಾಷ್ಟ್ರೀಯಭಾರತದಲ್ಲಿ ಕೊರೊನಾ ಲಸಿಕೆ ಬಳಕೆಗೆ ಅನುಮತಿ ಕೋರಿದ ಫೈಝರ್‌

ಭಾರತದಲ್ಲಿ ಕೊರೊನಾ ಲಸಿಕೆ ಬಳಕೆಗೆ ಅನುಮತಿ ಕೋರಿದ ಫೈಝರ್‌

ಅಮೆರಿಕ ಮೂಲದ ಫೈಝರ್‌ ಮತ್ತು ಜರ್ಮನಿ ಮೂಲದ ಬಯೋಎನ್‌ಟೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿದ ಈ ಕೊರೊನಾ ಲಸಿಕೆಯ ಬಳಕೆಗೆ ಬ್ರಿಟನ್ ಮತ್ತು ಬಹ್ರೈನ್ ಈಗಾಗಲೆ ಅನುಮತಿ ನೀಡಿದೆ.

- Advertisement -
- Advertisement -

ಕೊರೊನಾ ಲಸಿಕೆಯ ವ್ಯಾಪಕ ಬಳಕೆಗೆ ಬ್ರಿಟನ್‌ನಲ್ಲಿ ಅನುಮತಿ ಪಡೆದಿರುವ ಅಮೆರಿಕದ ಔಷಧ ಕಂಪೆನಿಯಾದ ಫೈಝರ್ ಇದೀಗ ತುರ್ತು ಬಳಕೆಯ ಅಧಿಕಾರಕ್ಕಾಗಿ ಭಾರತದ ಔಷಧ ನಿಯಂತ್ರಕರಾದ DCGI-ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ-ದಿಂದ ಅನುಮತಿ ಕೋರಿದೆ ಎಂದು ಮೂಲಗಳು ತಿಳಿಸಿವೆ.

ಕಂಪೆನಿಯು ತನ್ನ ಲಸಿಕೆಯನ್ನು ಬ್ರಿಟನ್ ಮತ್ತು ಬಹ್ರೇನ್‌ನಲ್ಲಿ ಹೊರತರಲು ಸಿದ್ಧವಾಗಿದ್ದು, ಹೊರಗಡೆ ನಡೆಸಿರುವ ಪ್ರಯೋಗಗಳ ಫಲಿತಾಂಶದಿಂದ ತೃಪ್ತಿಪಟ್ಟರೆ ಔಷಧ ನಿಯಂತ್ರಕ DCGI ತುರ್ತು ಅನುಮೋದನೆ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಬ್ರಿಟನ್!

ಅಮೆರಿಕ ಮೂಲದ ಫೈಝರ್‌ ಮತ್ತು ಜರ್ಮನಿ ಮೂಲದ ಬಯೋಎನ್‌ಟೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಮೊದಲ ಪಾಶ್ಚಿಮಾತ್ಯ ದೇಶವಾಗಿ ಬ್ರಿಟನ್ ಹೊರಹೊಮ್ಮಿದೆ. ಲಸಿಕೆಯು ಮೂರನೇ ಹಂತದ ಪ್ರಯೋಗಗಳಲ್ಲಿ 95% ದಷ್ಟು ದಕ್ಷತೆಯನ್ನು ವರದಿ ಮಾಡಿದೆ.

ಫೈಝರ್ ಇಂಡಿಯಾ ಶುಕ್ರವಾರದಂದು DCGI ಗೆ ಸಲ್ಲಿಸಿದ ಅರ್ಜಿಯಲ್ಲಿ ದೇಶದಲ್ಲಿ ಮಾರಾಟ ಹಾಗೂ ವಿತರಣೆಗಾಗಿ ಲಸಿಕೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ಕೋರಿದೆ. ಭಾರತದಲ್ಲಿ 96 ಲಕ್ಷಕ್ಕೂ ಅಧಿಕ ಜನರಿಗೆ ಕೊರೊನಾ ಸೋಂಕು ತಗಲಿದ್ದು, ಮಾರಣಾಂತಿಕ ಸೋಂಕಿಗೆ ಲಸಿಕೆ ಹುಡುಕುವ ಸ್ಪರ್ಧೆ ಏರ್ಪಟ್ಟಿರುವ ನಡುವೆಯೆ DCGI ಸ್ವೀಕರಿಸಿರುವ ಮೊದಲ ಕೋರಿಕೆ ಇದಾಗಿದೆ.

ಸಾಮಾನ್ಯವಾಗಿ ಲಸಿಕೆ ಉತ್ಪಾದಿಸಲು ಹಾಗೂ ಸಂಶೋಧನೆ ಮತ್ತು ಬಳಕೆಯ ಹಂತವನ್ನು ತಲುಪಲು 10 ವರ್ಷಗಳವರೆಗೆ ತೆಗೆದುಕೊಳ್ಳುತ್ತದೆ. ಆದರೆ ಫಿಜರ್ ಮತ್ತು ಬಯೋಎಂಡೆಕ್ ಅಭಿವೃದ್ಧಿಪಡಿಸಿದ ಈ ಕೊರೊನಾ ವೈರಸ್ ಲಸಿಕೆ ಕೇವಲ ಹತ್ತು ತಿಂಗಳಿನಲ್ಲಿ ತಯಾರಾಗಿದೆ. ವಿಶ್ವದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ತಯಾರಾದ ಲಸಿಕೆ ಇದಾಗಿದೆ.

ಇದನ್ನೂ ಓದಿ: ಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...