Homeಕರೋನಾ ತಲ್ಲಣಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ನಿರ್ಧಾರ- ಫೈಜರ್ ಫಾರ್ಮಾ

ಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ನಿರ್ಧಾರ- ಫೈಜರ್ ಫಾರ್ಮಾ

- Advertisement -
- Advertisement -

ಭಾರತದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುವುದಾಗಿ ಫೈಜರ್ ಫಾರ್ಮಾ ಹೇಳಿದೆ. ಅಮೆರಿಕದ ಔಷಧ ಕಂಪೆನಿಯಾದ ಫೈಝರ್ 2020ರ ಡಿಸಂಬರ್ ನಲ್ಲಿ ತುರ್ತು ಬಳಕೆಯ ಅಧಿಕಾರಕ್ಕಾಗಿ ಭಾರತದ ಔಷಧ ನಿಯಂತ್ರಕರಾದ DCGI-ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ-ದಿಂದ ಅನುಮತಿ ಕೋರಿತ್ತು.

“ಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಫೈಜರ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಪ್ರಾಧಿಕಾರವು ನಮ್ಮಿಂದ ಇನ್ನೂ ಹೆಚ್ಚಿನ ಮಾಹಿತಿಯನ್ನು ಅಪೇಕ್ಷಿಸಿದೆ” ಎಂದು ಭಾರತದ ಔಷಧ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಕಂಪನಿಯ ವಕ್ತಾರರು ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅದಾಗ್ಯೂ ಫೈಜರ್ ಕಂಪನಿಯು ಪ್ರಾಧಿಕಾರದೊದಿಗಿನ ಸಹಭಾಗಿತ್ವವನ್ನು ಮುಂದುವರಿಸುತ್ತದೆ. ಮುಂದಿನ ದಿನಗಳಲ್ಲಿ ಲಸಿಕೆಯ ಅನುಮೋದನೆಗಾಗಿ ಹೆಚ್ಚಿನ ಮಾಹಿತಿಗಳೊಂದಿಗೆ ಮತ್ತೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

“ಫೈಜರ್ ತನ್ನ ಲಸಿಕೆಯನ್ನು ಭಾರತದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ತುರ್ತು ಬಳಕೆಯ ದೃಢೀಕರಣಕ್ಕೆ ಬೇಕಾಗಿರುವ ಅಗತ್ಯ ಮಾರ್ಗಸೂಚಿಯನ್ನು ಅನುಸರಿಸಲು ಬದ್ಧವಾಗಿದೆ” ಎಂದು ವಕ್ತಾರರು ಹೇಳಿದರು.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!

ಫೈಜರ್/ಬಯೋಟೆಕ್ ಕೊರೊನಾ ಲಸಿಕೆ ಪಡೆದ ನಂತರ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಪ್ರಕರಣ ಇಸ್ರೇಲ್‌ನಲ್ಲಿ ನಡೆದಿತ್ತು. ಜಾಗತಿಕವಾಗಿ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿಯೂ ಲಸಿಕೆ ನೀಡಲಾಗುತ್ತಿತ್ತು.

ಫೈಜರ್‌ನ ಲಸಿಕೆ ಹಾಕಿದ ನಂತರ ಇಸ್ರೇಲ್‌ನ ಆರೋಗ್ಯ ಸಚಿವಾಲಯವು 189,000 ಜನರನ್ನು ಪರೀಕ್ಷಿಸಿತ್ತು. ಇವರಲ್ಲಿ ಶೇಕಡಾ 6.6 ರಷ್ಟು ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ತಿಳಿದುಬಂದಿದೆ. ಇತ್ತೀಚೆಗೆ, ಸಾಂಕ್ರಾಮಿಕ ರೋಗದ ರಾಷ್ಟ್ರೀಯ ಸಂಯೋಜಕರಾದ ನಾಚ್ಮನ್ ಆಶ್, “ಫೈಜರ್ ಲಸಿಕೆ ನಾವು ಅಂದುಕೊಂಡಿದ್ದಕ್ಕಿಂತ ಕಡಿಮೆ ಪರಿಣಾಮಕಾರಿಯಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಅಮೆರಿಕ ಮೂಲದ ಫೈಝರ್‌ ಮತ್ತು ಜರ್ಮನಿ ಮೂಲದ ಬಯೋಎಂಡೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆಯು ಮೂರನೇ ಹಂತದ ಪ್ರಯೋಗಗಳಲ್ಲಿ 95% ನಷ್ಟು ದಕ್ಷತೆಯನ್ನು ವರದಿ ಮಾಡಿತ್ತು.

ಬ್ರಿಟನ್ ಮತ್ತು ಬಹ್ರೇನ್‌ನಲ್ಲಿ ಅನುಮತಿ ಪಡೆದ ನಂತರ ಭಾರತದಲ್ಲಿ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. ಕೊರೊನಾ ಲಸಿಕೆಗಾಗಿ ಭಾರತದಲ್ಲಿ ಅನುಮತಿ ಕೋರಿದ ಮೊದಲ ಕಂಪನಿ ಇದಾಗಿದೆ.

ಸಾಮಾನ್ಯವಾಗಿ ಲಸಿಕೆ ಉತ್ಪಾದಿಸಲು ಹಾಗೂ ಸಂಶೋಧನೆ ಮತ್ತು ಬಳಕೆಯ ಹಂತವನ್ನು ತಲುಪಲು 10 ವರ್ಷಗಳವರೆಗೆ ತೆಗೆದುಕೊಳ್ಳುತ್ತದೆ. ಆದರೆ ಫಿಜರ್ ಮತ್ತು ಬಯೋಎಂಡೆಕ್ ಅಭಿವೃದ್ಧಿಪಡಿಸಿದ ಈ ಕೊರೊನಾ ವೈರಸ್ ಲಸಿಕೆ ಕೇವಲ ಹತ್ತು ತಿಂಗಳಿನಲ್ಲಿ ತಯಾರಾಗಿದೆ. ವಿಶ್ವದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ತಯಾರಾದ ಲಸಿಕೆ ಇದಾಗಿದೆ.


ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...