Homeಅಂತರಾಷ್ಟ್ರೀಯಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಸೆಂಟ್ರಲ್ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕುಸಿದ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ದುರಂತದಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಭೂಕಂಪದಿಂದ ಹಾನಿಗೊಳಗಾಗಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಮರುಸ್ಥಾಪಿಸಲು ಸಂಬಂಧಪಟ್ಟ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ಫಿಲಿಪೈನ್ಸ್‌ನ ಸೆಬೂ ಪ್ರಾಂತ್ಯದ ಉತ್ತರ ಭಾಗದಲ್ಲಿರುವ ಬೊಗೊ ನಗರದ ಬಳಿ ಕಡಲ ತೀರದಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಕಂಪನ ಸಂಭವಿಸಿದೆ. ಇದರ ಕೇಂದ್ರ ಬಿಂದು ಬೊಗೊ ನಗರಕ್ಕೆ ಸಮೀಪದಲ್ಲೇ ಇದೆ. ಗಾಯಾಳುಗಳಿಂದ ಆಸ್ಪತ್ರೆಗಳು ತುಂಬಿವೆ, ಆಸ್ಪತ್ರೆ ಸಿಬ್ಬಂದಿ ಒತ್ತಡ ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ ಎಂದು ರಫಿ ಅಲೆಜಾಂಡ್ರೊ ಎಂಬ ಅಧಿಕಾರಿಯೊಬ್ಬರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಸೆಬೂ ಪ್ರಾಂತ್ಯದ ವಿಪತ್ತು ನಿರ್ವಹಣಾ ಕಚೇರಿಯ ಮಾಹಿತಿಯ ಆಧಾರದ ಮೇಲೆ 69 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಸಂಖ್ಯೆಯನ್ನು ಇನ್ನೂ ದೃಢೀಕರಿಸಬೇಕಾಗಿದೆ ಎಂದು ಪ್ರಾದೇಶಿಕ ಸಿವಿಲ್ ಡಿಫೆನ್ಸ್ ಕಚೇರಿಯ ಮಾಹಿತಿ ಅಧಿಕಾರಿ ಜೇನ್ ಅಬಾಪೊ ಹೇಳಿದ್ದಾರೆ. ಮತ್ತೊಬ್ಬ ಅಧಿಕಾರಿಯ ಪ್ರಕಾರ, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಫಿಲಿಪೈನ್ಸ್‌ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್, ಬದುಕುಳಿದವರಿಗೆ ಶೀಘ್ರ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿಗಳು ಸ್ಥಳದಲ್ಲೇ ಇದ್ದು, ಪರಿಹಾರ ಕಾರ್ಯಾಚರಣೆಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ಸಂತಾಪ ಸೂಚಿಸಿದ್ದಾರೆ.

ಸೆಬೂ ನಗರ ಫಿಲಿಪೈನ್ಸ್‌ನ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿ 34 ಲಕ್ಷ ಜನರು ವಾಸಿಸುತ್ತಾರೆ. ಭೂಕಂಪದಿಂದ ಆಗಿರುವ ಹಾನಿಯ ಹೊರತಾಗಿಯೂ, ದೇಶದ ಎರಡನೇ ಅತಿ ಜನ ನಿಬಿಡ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಮ್ಯಾಕ್ಟಾನ್-ಸೆಬೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಸೆಬೂ ಬಳಿಕ ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ಮತ್ತೊಂದು ನಗರವಾದ ಸ್ಯಾನ್ ರೆಮಿಜಿಯೊವನ್ನು ವಿಪತ್ತು ಘೋಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇದರಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯವಾಗಲಿದೆ. ಸ್ಥಳಾಂತರಗೊಂಡವರಿಗೆ ಆಹಾರ ಮತ್ತು ನೀರಿನ ಅಗತ್ಯವಿದೆ, ಹಾಗೆಯೇ ಶೋಧ ಮತ್ತು ರಕ್ಷಣಾ ಕಾರ್ಯಕರ್ತರಿಗೆ ಸಹಾಯ ಮಾಡಲು ಭಾರೀ ಉಪಕರಣಗಳ ಅಗತ್ಯವಿದೆ ಎಂದು ನಗರದ ಉಪಮೇಯರ್ ಆಲ್ಫಿ ರೇನ್ಸ್ ಮನವಿ ಮಾಡಿದ್ದಾರೆ.

“ಭಾರೀ ಮಳೆಯಾಗುತ್ತಿದೆ ಮತ್ತು ವಿದ್ಯುತ್ ಇಲ್ಲ, ಆದ್ದರಿಂದ ನಮಗೆ ನಿಜವಾಗಿಯೂ ಸಹಾಯ ಬೇಕು. ವಿಶೇಷವಾಗಿ ನಗರದ ಉತ್ತರ ಭಾಗದಲ್ಲಿ, ಏಕೆಂದರೆ ಭೂಕಂಪದಿಂದ ನೀರಿನ ಪೂರೈಕೆ ಮಾರ್ಗಗಳು ಹಾನಿಗೊಳಗಾಗಿವೆ. ಇದರಿಂದ ನೀರಿನ ಕೊರತೆ ಎದುರಾಗಿದೆ” ಎಂದು ರೇನ್ಸ್ ಡಿಜೆಡ್‌ಎಂಎಂ ರೇಡಿಯೊಗೆ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು, ಭೂಮಿ ಕಂಪಿಸುವಾಗ ಜನರು ತಮ್ಮ ಮನೆಗಳಿಂದ ಓಡಿಹೋಗುವ ಮತ್ತು ಕಟ್ಟಡಗಳು ಕುಸಿಯುವ ದೃಶ್ಯಗಳನ್ನು ತೋರಿಸಿವೆ. 100 ವರ್ಷಗಳಿಗಿಂತ ಹಳೆಯ ಚರ್ಚ್‌ವೊಂದು ಕುಸಿದ ದೃಶ್ಯಗಳನ್ನು ಪ್ರಕಟಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಭೂಕಂಪವು ಭೂಮಿಯಿಂದ 10 ಕಿಮೀ ಆಳದಲ್ಲಿ ಸಂಭವಿಸಿದೆ. 6.9 ತೀವ್ರತೆಯ ಪ್ರಬಲ ಕಂಪನದ ನಂತರ, 6.0 ತೀವ್ರತೆಯವರೆಗಿನ ಕೆಲವು ಸಣ್ಣ ಕಂಪನಗಳು ಆಗಿವೆ. ಆದರೆ, ಅವುಗಳಿಂದ ಸುನಾಮಿ ಅಪಾಯ ಇರಲಿಲ್ಲ. ಫಿಲಿಪೈನ್ಸ್‌ನಲ್ಲಿ ಭೂಕಂಪಗಳು ಮತ್ತು ಜ್ವಾಲಾಮುಖಿಗಳು ಸಾಮಾನ್ಯ. ಏಕೆಂದರೆ ಆ ದೇಶ “ರಿಂಗ್ ಆಫ್ ಫೈರ್” ಪ್ರದೇಶದಲ್ಲಿದೆ. ಈ ವರ್ಷದ ಜನವರಿಯಲ್ಲಿ ಎರಡು ದೊಡ್ಡ ಭೂಕಂಪಗಳು ಸಂಭವಿಸಿದ್ದವು. ಆದರೆ, ಯಾವುದೇ ಜೀವಹಾನಿ ಆಗಿರಲಿಲ್ಲ. 2023ರಲ್ಲಿ ಸಂಭವಿಸಿದ ಭೂಕಂಪದಿಂದ 8 ಜನರು ಸಾವನ್ನಪ್ಪಿದ್ದರು.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...