Homeಅಂತರಾಷ್ಟ್ರೀಯಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಸೆಂಟ್ರಲ್ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕುಸಿದ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ದುರಂತದಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಭೂಕಂಪದಿಂದ ಹಾನಿಗೊಳಗಾಗಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಮರುಸ್ಥಾಪಿಸಲು ಸಂಬಂಧಪಟ್ಟ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ಫಿಲಿಪೈನ್ಸ್‌ನ ಸೆಬೂ ಪ್ರಾಂತ್ಯದ ಉತ್ತರ ಭಾಗದಲ್ಲಿರುವ ಬೊಗೊ ನಗರದ ಬಳಿ ಕಡಲ ತೀರದಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಕಂಪನ ಸಂಭವಿಸಿದೆ. ಇದರ ಕೇಂದ್ರ ಬಿಂದು ಬೊಗೊ ನಗರಕ್ಕೆ ಸಮೀಪದಲ್ಲೇ ಇದೆ. ಗಾಯಾಳುಗಳಿಂದ ಆಸ್ಪತ್ರೆಗಳು ತುಂಬಿವೆ, ಆಸ್ಪತ್ರೆ ಸಿಬ್ಬಂದಿ ಒತ್ತಡ ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ ಎಂದು ರಫಿ ಅಲೆಜಾಂಡ್ರೊ ಎಂಬ ಅಧಿಕಾರಿಯೊಬ್ಬರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಸೆಬೂ ಪ್ರಾಂತ್ಯದ ವಿಪತ್ತು ನಿರ್ವಹಣಾ ಕಚೇರಿಯ ಮಾಹಿತಿಯ ಆಧಾರದ ಮೇಲೆ 69 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಸಂಖ್ಯೆಯನ್ನು ಇನ್ನೂ ದೃಢೀಕರಿಸಬೇಕಾಗಿದೆ ಎಂದು ಪ್ರಾದೇಶಿಕ ಸಿವಿಲ್ ಡಿಫೆನ್ಸ್ ಕಚೇರಿಯ ಮಾಹಿತಿ ಅಧಿಕಾರಿ ಜೇನ್ ಅಬಾಪೊ ಹೇಳಿದ್ದಾರೆ. ಮತ್ತೊಬ್ಬ ಅಧಿಕಾರಿಯ ಪ್ರಕಾರ, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಫಿಲಿಪೈನ್ಸ್‌ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್, ಬದುಕುಳಿದವರಿಗೆ ಶೀಘ್ರ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿಗಳು ಸ್ಥಳದಲ್ಲೇ ಇದ್ದು, ಪರಿಹಾರ ಕಾರ್ಯಾಚರಣೆಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ಸಂತಾಪ ಸೂಚಿಸಿದ್ದಾರೆ.

ಸೆಬೂ ನಗರ ಫಿಲಿಪೈನ್ಸ್‌ನ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿ 34 ಲಕ್ಷ ಜನರು ವಾಸಿಸುತ್ತಾರೆ. ಭೂಕಂಪದಿಂದ ಆಗಿರುವ ಹಾನಿಯ ಹೊರತಾಗಿಯೂ, ದೇಶದ ಎರಡನೇ ಅತಿ ಜನ ನಿಬಿಡ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಮ್ಯಾಕ್ಟಾನ್-ಸೆಬೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಸೆಬೂ ಬಳಿಕ ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ಮತ್ತೊಂದು ನಗರವಾದ ಸ್ಯಾನ್ ರೆಮಿಜಿಯೊವನ್ನು ವಿಪತ್ತು ಘೋಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇದರಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯವಾಗಲಿದೆ. ಸ್ಥಳಾಂತರಗೊಂಡವರಿಗೆ ಆಹಾರ ಮತ್ತು ನೀರಿನ ಅಗತ್ಯವಿದೆ, ಹಾಗೆಯೇ ಶೋಧ ಮತ್ತು ರಕ್ಷಣಾ ಕಾರ್ಯಕರ್ತರಿಗೆ ಸಹಾಯ ಮಾಡಲು ಭಾರೀ ಉಪಕರಣಗಳ ಅಗತ್ಯವಿದೆ ಎಂದು ನಗರದ ಉಪಮೇಯರ್ ಆಲ್ಫಿ ರೇನ್ಸ್ ಮನವಿ ಮಾಡಿದ್ದಾರೆ.

“ಭಾರೀ ಮಳೆಯಾಗುತ್ತಿದೆ ಮತ್ತು ವಿದ್ಯುತ್ ಇಲ್ಲ, ಆದ್ದರಿಂದ ನಮಗೆ ನಿಜವಾಗಿಯೂ ಸಹಾಯ ಬೇಕು. ವಿಶೇಷವಾಗಿ ನಗರದ ಉತ್ತರ ಭಾಗದಲ್ಲಿ, ಏಕೆಂದರೆ ಭೂಕಂಪದಿಂದ ನೀರಿನ ಪೂರೈಕೆ ಮಾರ್ಗಗಳು ಹಾನಿಗೊಳಗಾಗಿವೆ. ಇದರಿಂದ ನೀರಿನ ಕೊರತೆ ಎದುರಾಗಿದೆ” ಎಂದು ರೇನ್ಸ್ ಡಿಜೆಡ್‌ಎಂಎಂ ರೇಡಿಯೊಗೆ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು, ಭೂಮಿ ಕಂಪಿಸುವಾಗ ಜನರು ತಮ್ಮ ಮನೆಗಳಿಂದ ಓಡಿಹೋಗುವ ಮತ್ತು ಕಟ್ಟಡಗಳು ಕುಸಿಯುವ ದೃಶ್ಯಗಳನ್ನು ತೋರಿಸಿವೆ. 100 ವರ್ಷಗಳಿಗಿಂತ ಹಳೆಯ ಚರ್ಚ್‌ವೊಂದು ಕುಸಿದ ದೃಶ್ಯಗಳನ್ನು ಪ್ರಕಟಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಭೂಕಂಪವು ಭೂಮಿಯಿಂದ 10 ಕಿಮೀ ಆಳದಲ್ಲಿ ಸಂಭವಿಸಿದೆ. 6.9 ತೀವ್ರತೆಯ ಪ್ರಬಲ ಕಂಪನದ ನಂತರ, 6.0 ತೀವ್ರತೆಯವರೆಗಿನ ಕೆಲವು ಸಣ್ಣ ಕಂಪನಗಳು ಆಗಿವೆ. ಆದರೆ, ಅವುಗಳಿಂದ ಸುನಾಮಿ ಅಪಾಯ ಇರಲಿಲ್ಲ. ಫಿಲಿಪೈನ್ಸ್‌ನಲ್ಲಿ ಭೂಕಂಪಗಳು ಮತ್ತು ಜ್ವಾಲಾಮುಖಿಗಳು ಸಾಮಾನ್ಯ. ಏಕೆಂದರೆ ಆ ದೇಶ “ರಿಂಗ್ ಆಫ್ ಫೈರ್” ಪ್ರದೇಶದಲ್ಲಿದೆ. ಈ ವರ್ಷದ ಜನವರಿಯಲ್ಲಿ ಎರಡು ದೊಡ್ಡ ಭೂಕಂಪಗಳು ಸಂಭವಿಸಿದ್ದವು. ಆದರೆ, ಯಾವುದೇ ಜೀವಹಾನಿ ಆಗಿರಲಿಲ್ಲ. 2023ರಲ್ಲಿ ಸಂಭವಿಸಿದ ಭೂಕಂಪದಿಂದ 8 ಜನರು ಸಾವನ್ನಪ್ಪಿದ್ದರು.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...