Homeಅಂತರಾಷ್ಟ್ರೀಯಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಸೆಂಟ್ರಲ್ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕುಸಿದ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ದುರಂತದಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಭೂಕಂಪದಿಂದ ಹಾನಿಗೊಳಗಾಗಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಮರುಸ್ಥಾಪಿಸಲು ಸಂಬಂಧಪಟ್ಟ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ಫಿಲಿಪೈನ್ಸ್‌ನ ಸೆಬೂ ಪ್ರಾಂತ್ಯದ ಉತ್ತರ ಭಾಗದಲ್ಲಿರುವ ಬೊಗೊ ನಗರದ ಬಳಿ ಕಡಲ ತೀರದಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಕಂಪನ ಸಂಭವಿಸಿದೆ. ಇದರ ಕೇಂದ್ರ ಬಿಂದು ಬೊಗೊ ನಗರಕ್ಕೆ ಸಮೀಪದಲ್ಲೇ ಇದೆ. ಗಾಯಾಳುಗಳಿಂದ ಆಸ್ಪತ್ರೆಗಳು ತುಂಬಿವೆ, ಆಸ್ಪತ್ರೆ ಸಿಬ್ಬಂದಿ ಒತ್ತಡ ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ ಎಂದು ರಫಿ ಅಲೆಜಾಂಡ್ರೊ ಎಂಬ ಅಧಿಕಾರಿಯೊಬ್ಬರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಸೆಬೂ ಪ್ರಾಂತ್ಯದ ವಿಪತ್ತು ನಿರ್ವಹಣಾ ಕಚೇರಿಯ ಮಾಹಿತಿಯ ಆಧಾರದ ಮೇಲೆ 69 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಸಂಖ್ಯೆಯನ್ನು ಇನ್ನೂ ದೃಢೀಕರಿಸಬೇಕಾಗಿದೆ ಎಂದು ಪ್ರಾದೇಶಿಕ ಸಿವಿಲ್ ಡಿಫೆನ್ಸ್ ಕಚೇರಿಯ ಮಾಹಿತಿ ಅಧಿಕಾರಿ ಜೇನ್ ಅಬಾಪೊ ಹೇಳಿದ್ದಾರೆ. ಮತ್ತೊಬ್ಬ ಅಧಿಕಾರಿಯ ಪ್ರಕಾರ, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಫಿಲಿಪೈನ್ಸ್‌ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್, ಬದುಕುಳಿದವರಿಗೆ ಶೀಘ್ರ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿಗಳು ಸ್ಥಳದಲ್ಲೇ ಇದ್ದು, ಪರಿಹಾರ ಕಾರ್ಯಾಚರಣೆಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ಸಂತಾಪ ಸೂಚಿಸಿದ್ದಾರೆ.

ಸೆಬೂ ನಗರ ಫಿಲಿಪೈನ್ಸ್‌ನ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿ 34 ಲಕ್ಷ ಜನರು ವಾಸಿಸುತ್ತಾರೆ. ಭೂಕಂಪದಿಂದ ಆಗಿರುವ ಹಾನಿಯ ಹೊರತಾಗಿಯೂ, ದೇಶದ ಎರಡನೇ ಅತಿ ಜನ ನಿಬಿಡ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಮ್ಯಾಕ್ಟಾನ್-ಸೆಬೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಸೆಬೂ ಬಳಿಕ ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ಮತ್ತೊಂದು ನಗರವಾದ ಸ್ಯಾನ್ ರೆಮಿಜಿಯೊವನ್ನು ವಿಪತ್ತು ಘೋಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇದರಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯವಾಗಲಿದೆ. ಸ್ಥಳಾಂತರಗೊಂಡವರಿಗೆ ಆಹಾರ ಮತ್ತು ನೀರಿನ ಅಗತ್ಯವಿದೆ, ಹಾಗೆಯೇ ಶೋಧ ಮತ್ತು ರಕ್ಷಣಾ ಕಾರ್ಯಕರ್ತರಿಗೆ ಸಹಾಯ ಮಾಡಲು ಭಾರೀ ಉಪಕರಣಗಳ ಅಗತ್ಯವಿದೆ ಎಂದು ನಗರದ ಉಪಮೇಯರ್ ಆಲ್ಫಿ ರೇನ್ಸ್ ಮನವಿ ಮಾಡಿದ್ದಾರೆ.

“ಭಾರೀ ಮಳೆಯಾಗುತ್ತಿದೆ ಮತ್ತು ವಿದ್ಯುತ್ ಇಲ್ಲ, ಆದ್ದರಿಂದ ನಮಗೆ ನಿಜವಾಗಿಯೂ ಸಹಾಯ ಬೇಕು. ವಿಶೇಷವಾಗಿ ನಗರದ ಉತ್ತರ ಭಾಗದಲ್ಲಿ, ಏಕೆಂದರೆ ಭೂಕಂಪದಿಂದ ನೀರಿನ ಪೂರೈಕೆ ಮಾರ್ಗಗಳು ಹಾನಿಗೊಳಗಾಗಿವೆ. ಇದರಿಂದ ನೀರಿನ ಕೊರತೆ ಎದುರಾಗಿದೆ” ಎಂದು ರೇನ್ಸ್ ಡಿಜೆಡ್‌ಎಂಎಂ ರೇಡಿಯೊಗೆ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು, ಭೂಮಿ ಕಂಪಿಸುವಾಗ ಜನರು ತಮ್ಮ ಮನೆಗಳಿಂದ ಓಡಿಹೋಗುವ ಮತ್ತು ಕಟ್ಟಡಗಳು ಕುಸಿಯುವ ದೃಶ್ಯಗಳನ್ನು ತೋರಿಸಿವೆ. 100 ವರ್ಷಗಳಿಗಿಂತ ಹಳೆಯ ಚರ್ಚ್‌ವೊಂದು ಕುಸಿದ ದೃಶ್ಯಗಳನ್ನು ಪ್ರಕಟಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಭೂಕಂಪವು ಭೂಮಿಯಿಂದ 10 ಕಿಮೀ ಆಳದಲ್ಲಿ ಸಂಭವಿಸಿದೆ. 6.9 ತೀವ್ರತೆಯ ಪ್ರಬಲ ಕಂಪನದ ನಂತರ, 6.0 ತೀವ್ರತೆಯವರೆಗಿನ ಕೆಲವು ಸಣ್ಣ ಕಂಪನಗಳು ಆಗಿವೆ. ಆದರೆ, ಅವುಗಳಿಂದ ಸುನಾಮಿ ಅಪಾಯ ಇರಲಿಲ್ಲ. ಫಿಲಿಪೈನ್ಸ್‌ನಲ್ಲಿ ಭೂಕಂಪಗಳು ಮತ್ತು ಜ್ವಾಲಾಮುಖಿಗಳು ಸಾಮಾನ್ಯ. ಏಕೆಂದರೆ ಆ ದೇಶ “ರಿಂಗ್ ಆಫ್ ಫೈರ್” ಪ್ರದೇಶದಲ್ಲಿದೆ. ಈ ವರ್ಷದ ಜನವರಿಯಲ್ಲಿ ಎರಡು ದೊಡ್ಡ ಭೂಕಂಪಗಳು ಸಂಭವಿಸಿದ್ದವು. ಆದರೆ, ಯಾವುದೇ ಜೀವಹಾನಿ ಆಗಿರಲಿಲ್ಲ. 2023ರಲ್ಲಿ ಸಂಭವಿಸಿದ ಭೂಕಂಪದಿಂದ 8 ಜನರು ಸಾವನ್ನಪ್ಪಿದ್ದರು.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...