Homeಚಳವಳಿಭಾರತ ಜೋಡೋದ ಸಿದ್ಧಾಂತ: ಅವರು ಒಡೆಯುವರು, ನಾವು ಜೋಡಿಸುವೆವು

ಭಾರತ ಜೋಡೋದ ಸಿದ್ಧಾಂತ: ಅವರು ಒಡೆಯುವರು, ನಾವು ಜೋಡಿಸುವೆವು

- Advertisement -
- Advertisement -

“ಇದೇನು ಭಾರತ ಜೋಡೋ ಎಂಬುದನ್ನು ಶುರು ಹಚ್ಕೊಂಡಿದೀರಿ, ಆಂದೋಲನಜೀವಿಗಳೆ? ಯಾವ ಭಾರತವನ್ನು ಜೋಡಿಸುವಿರಿ ನೀವು? ನೋಡುತ್ತಿಲ್ಲವೇ, ದೇಶ ತನ್ನಿಂತಾನೇ ಒಂದುಗೂಡುತ್ತಿದೆ. ಈ ದೇಶ ಜೋಡಿಸುವುದು ನಿಮಗ್ಯಾಕೆ ಬೇಕಿದೆ?”

ಯಾವಾಗಿನಿಂದ ನಾನು ‘ಭಾರತ ಜೋಡೊ ಯಾತ್ರಾ’ದೊಂದಿಗೆ ಸೇರಿಕೊಳ್ಳುವುದಾಗಿ ಸಾರ್ವಜನಿಕ ಘೋಷಿಣೆ ಮಾಡಿದೆನೋ, ಆವಾಗಿನಿಂದ ಇಂತಹ ಪ್ರಶ್ನೆಗಳು ಬರುತ್ತಲೇ ಇವೆ. ಸಾಮಾಜಿಕ ಜಾಲತಾಣಗಳ ಮೂಲಕ ಬರುವ ಈ ಪ್ರಶ್ನೆಗಳು ಬಹುತೇಕವಾಗಿ ತೀಕ್ಷ್ಣವಾಗಿಯೂ ಹಾಗೂ ತಮಾಷೆಯಾಗಿಯೂ ಇರುತ್ತವೆ. ಈ ಯಾತ್ರೆಯ ಘೋಷಣೆಯನ್ನು ಕಾಂಗ್ರೆಸ್ ಪಕ್ಷ ಮಾಡಿದೆಯಾದರೂ, ಈ ದೇಶದ ಜನಾಂದೋಲನಗಳ ದೊಡ್ಡ ಭಾಗ, ಮುಂಚೂಣಿಯಲ್ಲಿರುವ ಚಿಂತಕರು ಹಾಗೂ ಗಣ್ಯ ವ್ಯಕ್ತಿಗಳೂ ಇದನ್ನು ಸ್ವಾಗತಿಸಿದ್ದಾರೆ ಮತ್ತು ಸಮರ್ಥನೆ ಮಾಡಿದ್ದಾರೆ. ಅತ್ತ ಅನೇಕ ಜನಾಂದೋಲನಗಳು ಹಾಗೂ ಜನರ ಸಂಘಟನೆಗಳು ಈ ಯಾತ್ರೆಯ ಸಮರ್ಥನೆ ಮಾಡುತ್ತ ಇದಕ್ಕೆ ಸಮಾನಾಂತರವಾಗಿ “ದ್ವೇಷ ಬಿಡಿ, ಭಾರತ ಜೋಡೊ” ಅಭಿಯಾನ ಘೋಷಣೆ ಮಾಡಿದ್ದಾರೆ. ವೈಚಾರಿಕವಾಗಿ ಬೇರೆಬೇರೆ ದಿಕ್ಕುಗಳಲ್ಲಿ ನಡೆಯುವ ಈ ಧ್ವನಿಗಳಲ್ಲಿ ‘ಭಾರತ ಜೋಡೊ’ದ ಮನವಿ ಕಾಣಿಸಿಕೊಂಡಿರುವುದು ಕೇವಲ ಸಂಯೋಗವಲ್ಲ. ಆದರೆ ಎಲ್ಲರೂ ಇದರ ಬೇರೆಬೇರೆ ಅರ್ಥಗಳನ್ನು ಹುಡುಕುತ್ತಿದ್ದಾರೆ.

“ಹಿಂದೂ ಮುಸ್ಲಿಂ ಏಕತೆಯ ಯಾತ್ರೆ ಮಾಡುತ್ತಿದ್ದೀರಲ್ಲವಾ ನೀವು? ಇದರ ಬಹಳ ಅವಶ್ಯಕತೆ ಇದೆ” ಈ ಸಂದೇಶವನ್ನು ಒಬ್ಬ ಹಿರಿಯ ಗಾಂಧಿವಾದಿ ನೀಡಿದರು. “ಇಲ್ಲ. ಅದು ಇದೆ, ಆದರೆ ಅದು ಮುಖ್ಯ ವಿಷಯವಲ್ಲ” ನಾನು ಅಳಕುತ್ತಲೇ ಉತ್ತರ ನೀಡಿದೆ. ನಿಸ್ಸಂದೇಹವಾಗಿಯೂ ಹಿಂದೂ ಮುಸ್ಲಿಂ ಏಕತೆಯನ್ನು ಗಟ್ಟಿಗೊಳಿಸುವುದು ಭಾರತಮಾತೆಯ ಕರೆಯಾಗಿದೆ. ಭಾರತದ ವಿಭಜನೆಯ ದುರಂತದ ನಂತರ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಇಷ್ಟೊಂದು ಅಸಮಧಾನ ಮತ್ತು ದ್ವೇಷ ಹರಡುತ್ತಿರುವ ಇಷ್ಟು ದೊಡ್ಡ ಮಟ್ಟದ, ಇಷ್ಟು ವ್ಯವಸ್ಥಿತವಾದ, ಇಷ್ಟು ಯೋಜಿತವಾದ ಹಾಗೂ ಸರಕಾರದ ಪೋಷಣೆಯುಳ್ಳ ಪ್ರಯತ್ನ ಮತ್ತೆಂದೂ ಆಗಿದ್ದಿಲ್ಲ. ನಿಸ್ಸಂದೇಹವಾಗಿಯೂ ಸಮುದಾಯಗಳನ್ನು ಪರಸ್ಪರ ಕಿತ್ತಾಡುವಂತೆ ಪ್ರಚೋದನೆ ನೀಡುವುದು ದೇಶದ್ರೋಹವಾಗಿದೆ ಹಾಗೂ ಅವುಗಳನ್ನು ಜೋಡಿಸುವುದು ದೇಶಭಕ್ತಿಯ ಮೊದಲ ಧರ್ಮವಾಗಿದೆ.

ಆದರೆ, ಇಂದು ಮೊದಲ ಸವಾಲು ಹಿಂದೂ ಹಾಗೂ ಮುಸ್ಲಿಂರನ್ನು ಜೋಡಿಸುವುದು ಆಗಿಲ್ಲ. ಎಲ್ಲಕ್ಕಿಂತ ದೊಡ್ಡ ಸವಾಲು, ಹಿಂದೂಗಳನ್ನು ಹಿಂದೂ ಧರ್ಮದ ಆತ್ಮದ ಜೊತೆಗೆ ಹಾಗೂ ಮುಸಲ್ಮಾನರನ್ನು ನಿಜವಾದ ಇಸ್ಲಾಂನೊಂದಿಗೆ ಜೋಡಿಸುವುದಾಗಿದೆ. ಸ್ವಾಮಿ ವಿವೇಕಾನಂದರ ಪ್ರಕಾರ, ಹಿಂದೂ ಧರ್ಮದ ಶ್ರೇಷ್ಠತೆಯು ಇತರ ಧರ್ಮಗಳಗಿಂತ ತನ್ನ ಮತವನ್ನು ಮೇಲೆ ನಿಲ್ಲಿಸುವುದರಲ್ಲಿ ಇಲ್ಲ, ಅದರ ಬದಲಿಗೆ ಹಿಂದೂ ಧರ್ಮದ ಶ್ರೇಷ್ಠತೆಯು ಜಗತ್ತಿನ ಎಲ್ಲಾ ಧರ್ಮಗಳ ಸತ್ಯವನ್ನು ಸ್ವೀಕರಿಸುವುದರಲ್ಲಿ ಅಡಗಿದೆ. ಕುರ್‌ಆನ್ ಶರೀಫ್‌ದ ಸಂದೇಶವು ಕಾಫಿರನ ರುಂಡವನ್ನು ಮುಂಡದೊಂದಿಗೆ ಬೇರ್ಪಡಿಸುವುದು ಆಗಿಲ್ಲದೇ, ಪ್ರತಿಯೊಬ್ಬ ವ್ಯಕ್ತಿಯ ಮನಸ್ಸನ್ನು ಜೋಡಿಸುವುದು ಆಗಿದೆ. ಎಲ್ಲಿಯವರೆಗೆ ಪ್ರತಿಯೊಂದು ಧರ್ಮದ ಅನುಯಾಯಿ ತನ್ನತನ್ನ ಧರ್ಮದ ಸಂಕೀರ್ಣವಾದ ವ್ಯಾಖ್ಯಾನವನ್ನು ಅರಿತು, ಧಾರ್ಮಿಕ ಗುತ್ತಿಗೆದಾರರು ಹಾಗೂ ಧರ್ಮದ ಹೆಸರಿನಲ್ಲಿ ದ್ವೇಷವನ್ನು ಬಿತ್ತುವ ವ್ಯಾಪಾರಿಗಳಿಂದ ಮುಕ್ತವಾಗುವುದಿಲ್ಲವೋ, ಅಲ್ಲಿಯವರೆಗೆ ದೇಶ ಒಂದಾಗಲು ಸಾಧ್ಯವಿಲ್ಲ. ಹಾಗಾಗಿಯೇ ಭಾರತ ಜೋಡೊದ ಮೊದಲ ಅರ್ಥ, ಧರ್ಮವನ್ನು ಅದರ ಮರ್ಮದೊಂದಿಗೆ ಜೋಡಿಸುವುದಾಗಿದೆ.

ಯಾವ ಮಾತು ಧರ್ಮಕ್ಕೆ ಅನ್ವಯವಾಗುತ್ತೋ, ಅದೇ ಜಾತಿ, ಕ್ಷೇತ್ರ, ಭಾಷೆ ಹಾಗೂ ಭೂಷಣಗಳ ಭೇದಗಳ ಬಗ್ಗೆಯೂ ನಿಜವಾಗಿರುತ್ತದೆ. ಭಾರತ ಜೋಡೊದ ಅರ್ಥವು, ಪ್ರದೇಶ ಮತ್ತು ಭಾಷೆಯ ಕಂದರವನ್ನು ಕಡಿಮೆ ಮಾಡುವುದು. ಆದರೆ ಇದಕ್ಕಾಗಿ ತನ್ನ ಪ್ರಾದೇಶಿಕ ಅಸ್ಮಿತೆಯನ್ನು ಮರೆತುಬಿಡುವ ಹಾಗೂ ಭಾಷಾ ಸಂಸ್ಕೃತಿಯನ್ನು ಬಿಟ್ಟುಬಿಡುವಂತೆ ಮನವಿ ಮಾಡುವುದು ಅಥವಾ ಒತ್ತಾಯ ಮಾಡುವುದು ಮಾರಕವಾಗಲಿದೆ. ಅದರಲ್ಲೂ ವಿಶೇಷವಾಗಿ ಉತ್ತರಭಾರತದ ಹಿಂದಿ ಭಾಷಿಕರು ಇತರ ದೇಶವಾಸಿಗಳಿಗೆ ಕ್ಷೇತ್ರೀಯತೆ (ಪ್ರಾದೇಶಿಕತೆ)ಯನ್ನು ಬಿಡುವ ಹಾಗೂ ಬಾಷೆಯ ಸಂಕೀರ್ಣತೆಯಿಂದ ಹೊರಬರುವ ಉಪದೇಶ ಮಾಡಿದರೆ ಅದು ಸರಿಯಾದ ಮಾರ್ಗವಲ್ಲ. ಭಾರತವನ್ನು ಜೋಡಿಸಲು ಎಲ್ಲಕ್ಕಿಂತ ಮೊದಲು ಹಿಂದಿ ಭಾಷಿಕರು ‘ತಾವು ದೇಶದ ಮಾಲೀಕರು ಹಾಗೂ ಇತರರೆಲ್ಲ ಬಾಡಿಗೆದಾರರು’ ಎಂಬ ಭಾವನೆಯಿಂದ ಹೊರಬರಬೇಕು. ಈ ನಿಟ್ಟಿನಲ್ಲಿ ನೋಡಿದರೆ, ಹಿಂದಿಗಿಂತ ತುಲನಾತ್ಮಕವಾಗಿ ಪ್ರಾಚೀನವಾದ ಮತ್ತು ಸಮೃದ್ಧವಾದ ತಮಿಳ ಭಾಷೆ ಮತ್ತು ಸಂಸ್ಕೃತಿಗೆ ನಮಿಸುತ್ತ ಕನ್ಯಾಕುಮಾರಿಯಿಂದ ಶುರುವಾಗುತ್ತಿರುವುದು ಒಂದು ಸುಂದರ ಸಂಯೋಗವೇ ಆಗಿದೆ.

ಅದೇ ರೀತಿಯಲ್ಲಿ ಜಾತಿ ಭೇದದ ಕಂದರವನ್ನು ಇಲ್ಲವಾಗಿಸುವ ಅರ್ಥ, ನಾವು ಜಾತಿ ಕಡೆಗೆ ಕಣ್ಣು ಮುಚ್ಚುವುದು ಅಥವಾ ನಮ್ಮ ಹೆಸರಿನಿಂದ ಜಾತಿಸೂಚಕ ಪದಗಳನ್ನು ಸೇರಿಸುವುದು ಯಾ ಬಿಡುವುದು ಅಲ್ಲ. ನಮ್ಮ ದೇಶದಲ್ಲಿ ತನ್ನ ಜಾತಿ ಗೊತ್ತಿಲ್ಲದೇ ಇರುವ ವಿಶೇಷಾಧಿಕಾರ ಮೇಲ್ಜಾತಿಯ ನಗರಗಳಲ್ಲಿರುವ ಜನರಿಗೆ ಮಾತ್ರ ಇರುತ್ತದೆ. ಜಾತಿ ಸೂಚಕ ಹೆಸರನ್ನು ಬಿಡುವುದರಿಂದ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಜಾತಿಯ ಕಂದರವನ್ನು ಇಲ್ಲವಾಗಿಸುವ ದಾರಿ, ಸಮಾಜದಲ್ಲಿ ಇಂದಿಗೂ ಜಾತಿಯ ಆಧಾರದ ಮೇಲೆ ನಿಷೇಧ, ವಂಚನೆ ಮತ್ತು ವಿಶೇಷಾಧಿಕಾರ ಮುಂತಾದವುಗಳ ಅವಶೇಷಗಳನ್ನು ಕೊನೆಗೊಳಿಸುವುದರಿಂದ ಮಾತ್ರ ಸಾಧ್ಯವಾಗಬಲ್ಲದು. ಅಂದರೆ ಜಾತಿ ವ್ಯವಸ್ಥೆಯ ಮೇಲುಕೀಳುಗಳನ್ನು ನಾಶಗೊಳಿಸಬೇಕು. ಭಾರತ ಜೋಡೊದ ಅರ್ಥ ಜಾತಿ ಒಡೆಯುವುದು ಆಗುವುದು.

ಭಾರತ ಜೋಡೊ ಎಂಬುದು ಕೇವಲ ಸಾಂಸ್ಕೃತಿಕ ಅಸ್ಮಿತೆಯ ಆಂದೋಲನವಾಗಲು ಸಾಧ್ಯವಿಲ್ಲ. ಎಲ್ಲಿಯವರೆಗೆ ದೇಶದ ಅಂತಿಮ ವ್ಯಕ್ತಿಯ ಜೀವನವನ್ನು ಸುಖಸಂತೋಷದ ಜೊತೆಗೆ ಜೋಡಿಸುವುದಿಲ್ಲವೋ ಅಲ್ಲಿಯವರೆಗೆ ಭಾರತ ಜೋಡೊ ಎಂಬುದು ಕೇವಲ ಘೋಷಣೆಯಾಗಿ ಉಳಿಯಲಿದೆ. ಭಾರತ ಜೋಡೊವನ್ನು ಸಾಕಾರಗೊಳಿಸಲು ನಾವುಗಳು ಒಂದು ಕಹಿ ಸತ್ಯವನ್ನು ಎದುರಿಸುವುದು ಅತ್ಯಗತ್ಯವಾಗಿದೆ. ಕಳೆದ 2 ವರ್ಷಗಳಲ್ಲಿ ದೇಶದ 97% ಜನರ ಆದಾಯ ಕಡಿಮೆಯಾಗಿದೆ, ಆದರೆ ಅದೇ ಸಮಯದಲ್ಲಿ ಮುಕೇಶ್ ಅಂಬಾನಿಯ ಸಂಪತ್ತು ಮೂರು ಪಟ್ಟು ಹೆಚ್ಚಾಗಿದೆ ಹಾಗೂ ಅದಾನಿಯ ಸಾಮ್ರಾಜ್ಯ 14 ಪಟ್ಟು ದೊಡ್ಡದಾಗಿದೆ. ಇತ್ತೀಚಿಗೆ ಬೆಳಕಿಗೆ ಬಂದಿದ್ದೇನೆಂದರೆ, ದೇಶದ ಶ್ರೀಮಂತ ವರ್ಗದಲ್ಲಿ ಭಾರತ ಛೋಡೋ (ಬಿಡುವ) ಆಂದೋಲನ ನಡೆಯುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ಲಕ್ಷಾಂತರ ಭಾರತೀಯರು ದೇಶದ ನಾಗರಿಕತೆಯನ್ನು ಬಿಟ್ಟುಕೊಟ್ಟಿದ್ದಾರೆ. ಭಾರತದ ಎಲ್ಲಾ ಶ್ರೀಮಂತರು ದೇಶದ ಹೊರಗೆ ಹೂಡಿಕೆ ಮಾಡುತ್ತಿದ್ದಾರೆ. ಈ ಸರಕಾರದ ‘ನಾವಿಬ್ಬರು ನಮ್ಮ ಇಬ್ಬರು’ ಆರ್ಥಿಕ ನೀತಿಯಿಂದ ದೇಶವು ಎರಡು ಹೋಳಾಗುತ್ತಿದೆ. ಇದಕ್ಕೆ ಎದರು ನಿಂತು ಸವಾಲು ಒಡ್ಡದೇ ಭಾರತ ಜೋಡೊದ ಕನಸು ಕಾಣುವುದೂ ವ್ಯರ್ಥ. ಅಭೂತಪೂರ್ವ ನಿರುದ್ಯೋಗ, ಹೆಚ್ಚುತ್ತಿರುವ ಬೆಲೆ ಏರಿಕೆ ಹಾಗೂ ಸಾಮಾನ್ಯ ವ್ಯಕ್ತಿಯ ಅಸಾಹಯಕತೆಯ ಈ ಯುಗದಲ್ಲಿ ಭಾರತ ಜೋಡೊದ ಅರ್ಥ ಲೂಟಿಕೋರರ ಸ್ಥಾನದಲ್ಲಿ ಕಾರ್ಮಿಕರನ್ನು ಆರ್ಥಿಕ ನೀತಿಯ ಕೇಂದ್ರದಲ್ಲಿ ಇರಿಸುವುದು ಹಾಗೂ ಕರ್ಮವನ್ನು ಹೆಮ್ಮೆಯೊಂದಿಗೆ ಜೋಡಿಸುವುದೇ ಆಗಬೇಕಿದೆ.

ಭಾರತ ಜೋಡೊ ಸಂಕಲ್ಪವು ದೇಶದ ರಾಜಕೀಯ ವ್ಯವಸ್ಥೆಯನ್ನು ಮುಟ್ಟದೇ ಇರಲು ಸಾಧ್ಯವಿಲ್ಲ. ಈ ಯಾತ್ರೆಯ ಸಫಲತೆ ರಾಜಕೀಯ ಪಕ್ಷಗಳು ಹಾಗೂ ಜನಾಂದೋಲನಗಳನ್ನು ಜೋಡಿಸುವುದರ ಮೇಲೆ ಅವಲಂಬಿತವಾಗಿದೆ. ಆದರೆ, ಇದಕ್ಕೆ ನಮ್ಮ ಗಣರಾಜ್ಯದಲ್ಲಿ ಕೆಲವು ಮೂಲಭೂತವಾದ ಜೋಡಣೆಯನ್ನೂ ಮಾಡಬೇಕಾಗುತ್ತದೆ. ಭಾರತದ ಸ್ವಾತಂತ್ರದ ನಂತರದಿಂದ ನಮ್ಮ ಲೋಕತಂತ್ರ (ಪ್ರಜಾಪ್ರಭುತ್ವ) ಯಾವಾಗಲೂ ಬಗ್ಗಿ ನಿಂತಿದೆ, ಲೋಕದ (ಪ್ರಜೆಗಳ) ಮೇಲೆ ತಂತ್ರ (ಪ್ರಭುತ್ವ) ಯಾವಾಗಲೂ ಮೇಲುಗೈ ಸಾಧಿಸಿದೆ. ಆದರೆ, ಕಳೆದ ಕೆಲವು ವರ್ಷಗಳಲ್ಲಿ ಲೋಕ (ಪ್ರಜೆ) ಎಂಬುದೇ ಕಣ್ಮರೆಯಾಗುತ್ತಿದೆ, ಅಥವಾ ಅದು ಒಂದು ಗುಂಪಾಗಿ ಬದಲಾಗುತ್ತಿದೆ ಎನ್ನಬಹುದು. ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಕೇವಲ ಹಾಳೆಯ ತುಂಡಗಳಾಗಿ ಬದಲಾಗುತ್ತಿವೆ. ಸರಕಾರದ ವಿರುದ್ಧ ಧ್ವನಿ ಎತ್ತುವವರ ಸ್ಥಳ ಜೈಲು ಎಂದಾಗಿದೆ. ರಾಜಕೀಯ ವಿರೋಧಿಗಳನ್ನು ಬೆಂಬತ್ತಿ ಪೊಲೀಸ್ ವ್ಯವಸ್ಥೆಯ ಜೊತೆಗೆ ಈಗ ಸಿಬಿಐ, ಇಡಿ ಹಾಗೂ ಇನ್‌ಕಂ ಟ್ಯಾಕ್ಸ್ ಇಲಾಖೆ ಕೂಡ ಕೈಜೋಡಿಸಿವೆ. ಸಾಮಾನ್ಯ ವ್ಯಕ್ತಿಗಳನ್ನು ಬಿಟ್ಟುಬಿಡಿ, ಈಗ ಮುಖ್ಯಮಂತ್ರಿಗಳದ್ದೂ ಯಾವುದೇ ಸ್ಥಾನಮಾನ ಉಳಿದಿಲ್ಲ. ಯಾವ ರಾಜ್ಯದಲ್ಲಿ ಯಾರ ಸರಕಾರ ರಚಿಸಲಾಗುವುದು, ಯಾವುದು ಉಳಿಯುವುದು, ಯಾವುದು ಇಲ್ಲವಾಗುವುದು ಎಂಬುದರ ನಿರ್ಣಯ ದೆಹಲಿಯ ದರ್ಬಾರಿನಲ್ಲಿ ಆಗುತ್ತಿದೆ. ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಈಗ ನ್ಯಾಯಾಲಯದ ಬಾಗಿಲುಗಳೂ ಬಹುತೇಕ ಮುಚ್ಚಿವೆ. ಇಂತಹ ಪರಿಸ್ಥಿತಿಗಳಲ್ಲಿ ಭಾರತ ಜೋಡೊದ ಅರ್ಥ, ಲೋಕವನ್ನು ತಂತ್ರದೊಂದಿಗೆ ಜೋಡಿಸುವುದು ಹಾಗೂ ಗಣವನ್ನು ರಾಜ್ಯದೊಂದಿಗೆ ಜೋಡಿಸುವುದು ಆಗಲಿದೆ.

ಇಂದು ಭಾರತ ಜೋಡೊ ಯಾತ್ರೆಯ ಸಂಕಲ್ಪ ಒಂದೇ ಒಂದು ಆಗಲು ಸಾಧ್ಯ: ಅವರು ತುಂಡು ತುಂಡಾಗಿ ವಿಭಜಿಸುವರು, ನಾವು ಕಾಮನಬಿಲ್ಲು ಕಟ್ಟುವೆವು. ಈ ಆಂದೋಲನದ ಘೋಷಣೆ ಒಂದೇ ಒಂದು ಆಗಲು ಸಾಧ್ಯ: ಅವರು ಒಡೆಯುವರು, ನಾವು ಜೋಡಿಸುವೆವು. ಭಾರತದೊಂದಿಗೆ ಸುಂದರ ಭವಿಷ್ಯವನ್ನು ಜೋಡಿಸುವುದೇ ಭಾರತ ಜೋಡೊದ ಸಾರ್ಥಕ ಪರಿಣಾಮ ಆಗಬಹುದಾಗಿದೆ.

– ಯೋಗೇಂದ್ರ ಯಾದವ್

ಕನ್ನಡಕ್ಕೆ: ರಾಜಶೇಖರ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...