Homeಮುಖಪುಟಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

ಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

- Advertisement -
- Advertisement -

ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ತಮ್ಮ ಮುಂದೆ ಹಾಜರಾಗುವಂತೆ ಮುಂಬೈ ಸೈಬರ್ ಪೋಲಿಸರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನಾವಿಸ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫಡ್ನಾವಿಸ್ ಅವರಿಗೆ ಮುಚ್ಚಿದ ಲಕೋಟೆಯಲ್ಲಿ ಹಲವಾರು ಪ್ರಶ್ನೆಗಳನ್ನು ಕಳುಹಿಸಲಾಗಿದೆ. ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆಯನ್ನು ಫಡ್ನಾವೀಸ್ ನೀಡಿಲ್ಲ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ ಆ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೋನ್ ಕದ್ದಾಲಿಕೆ ಮತ್ತು ಗೌಪ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಂಬೈ ಬಿಕೆಸಿ ಸೈಬರ್ ಪೊಲೀಸ್‌‌ ಠಾಣೆಯಲ್ಲಿ ಕಳೆದ ವರ್ಷ ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣವನ್ನು ರಾಜ್ಯ ಗುಪ್ತಚರ ಇಲಾಖೆ ದಾಖಲು ಮಾಡಿದೆ. ಅಂದಿನ ಐಪಿಎಸ್ ಅಧಿಕಾರಿ ರಶ್ಮೀ ಶುಕ್ಲಾ ಅವರು ಗೌಪ್ಯ ವರದಿಯನ್ನು ಸೋರಿಕೆ ಮಾಡಿದ್ದಾರೆ ಎಂದು ತನಿಖಾ ವರದಿ ಹೇಳಿತ್ತು.

ರಶ್ಮೀ ಶುಕ್ಲಾರವರು ಎಸ್ಐಡಿ ಮುಖ್ಯಸ್ಥರಾಗಿದ್ದಾಗ ರಾಜಕೀಯ ಮುಖಂಡರು ಮತ್ತು ಹಿರಿಯ ಅಧಿಕಾರಿಗಳ ಪೋನ್ ಕರೆಗಳನ್ನು ಕದ್ದಾಲಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್ ನಲ್ಲಿ ಮುಂಬೈ ಪೋಲಿಸರು ಶುಕ್ಲಾ ಅವರನ್ನು ಬಿಕೆಸಿ ಸೈಬರ್ ಪೋಲಿಸ್ ಮುಂದೆ ವಿಚಾರಣೆಗೆ ಕರೆದಿದ್ದರು. ಆದರೆ ಅವರು ಕೊರೊನಾ ನೆಪ ಹೇಳಿ ಹಾಜರಾಗಲಿಲ್ಲ. ಮುಂದೆ ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ತಿಂಗಳಿನಲ್ಲಿ ಮುಂಬೈ ಸೈಬರ್ ಪೊಲೀಸರ ತಂಡ ಹೈದರಬಾದ್ ನಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನಾವೀಸ್, “ಬಿಕೆಸಿ ಸೈಬರ್ ಪೊಲೀಸರು ನನಗೆ ವಿಚಾರಣೆಗೆ ನೋಟಿಸ್‌ ನೀಡಿದ್ದಾರೆ. ನಾನು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ” ಎಂದಿದ್ದಾರೆ.

“ನಾನು ಎಂವಿಎ ಸರ್ಕಾರವನ್ನು ಬಹಿರಂಗಪಡಿಸಿದ್ದರಿಂದ ನನಗೆ ನೋಟಿಸ್‌‌ ನೀಡಲಾಗಿದೆ. ಈ ಪೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾದಳಕ್ಕೆ (ಸಿಬಿಐ) ಹಸ್ತಾಂತರಿಸಬೇಕು ಎಂದು ಒತ್ತಾಯಿಸುತ್ತೇನೆ. ಇಂತಹ ಪ್ರಕರಣಗಳಲ್ಲಿ ರಾಜ್ಯ ಸರ್ಕಾರವು ಸರಿಯಾದ ತನಿಖೆ ನೆಡೆಸಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯ ಪೊಲೀಸ್‌‌ ಇಲಾಖೆಯಲ್ಲಿನ ವರ್ಗಾವಣೆ ಹಗರಣವನ್ನು ನಾನು ಬಹಿರಂಗಪಡಿಸಿದ್ದರಿಂದ ಸರ್ಕಾರ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನನ್ನ ಬಳಿ ಹೆಚ್ಚಿನ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ಸಿಬಿಐಗೆ ಒಪ್ಪಿಸುತ್ತೇನೆ. ನಾಳೆ ಮುಂಬೈ ಪೊಲೀಸರೊಂದಿಗೆ ವಿಚಾರಣೆಗೆ ಸಹಕರಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿರಿ: ಸೋನಿಯಾ, ರಾಹುಲ್‌, ಪ್ರಿಯಾಂಕಾ ರಾಜೀನಾಮೆ ಸಾಧ್ಯತೆ: ಎನ್‌ಡಿಟಿವಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...