Homeಮುಖಪುಟಫೋನ್‌ ಕದ್ದಾಳಿಕೆ: ತಮ್ಮದೆ ಸರ್ಕಾರ ಮೇಲೆ ಸಂಶಯ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ

ಫೋನ್‌ ಕದ್ದಾಳಿಕೆ: ತಮ್ಮದೆ ಸರ್ಕಾರ ಮೇಲೆ ಸಂಶಯ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ

ರಾಜಸ್ಥಾನದ ಗೆಹ್ಲೋಟ್‌ ಸರ್ಕಾರಕ್ಕೆ ಇದು ಹೊಸ ಸಮಸ್ಯೆಯನ್ನು ತಂದೊಡ್ಡಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

- Advertisement -
- Advertisement -

ನಮ್ಮ ಕೆಲವು ಶಾಸಕರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ರಾಜಸ್ಥಾನದ ಕಾಂಗ್ರೆಸ್‌ ಶಾಸಕ ವೇದ ಪ್ರಕಾಶ್‌ ಸೋಲಂಕಿ ಭಾನುವಾರ ಆರೋಪಿಸಿದ್ದಾರೆ. ಸ್ವತಃ ತಮ್ಮ ಸರ್ಕಾರದ ವಿರುದ್ದವೆ ಸಂಶಯ ವ್ಯಕ್ತಪಡಿಸಿರುವ ಅವರು, ದೂರವಾಣಿ ಕರೆಗಳ ಕದ್ದಾಲಿಕೆಯಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದೆಯೇ ಎನ್ನುವುದು ತಿಳಿದಿಲ್ಲ ಎಂದಿದ್ದಾರೆ.

“ನನ್ನ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎನ್ನುವುದು ಗೊತ್ತಿಲ್ಲ. ಆದರೆ, ಕೆಲವು ಶಾಸಕರು ಈ ಬಗ್ಗೆ ನನ್ನ ಬಳಿ ಹೇಳಿಕೊಂಡಿದ್ದಾರೆ. ದೂರವಾಣಿ ಕರೆಗಳ ಕದ್ದಾಲಿಕೆಯಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದೆಯೇ ಎನ್ನುವುದು ಸಹ ನನಗೆ ಗೊತ್ತಿಲ್ಲ” ರಾಜಸ್ಥಾನ ಕಾಂಗ್ರೆಸ್‌ನ ಬಂಡಾಯ ನಾಯಕ ಸಚಿನ್‌ ಪೈಲಟ್‌ ಅವರ ಆಪ್ತರೂ ಆಗಿರುವ ವೇದ ಪ್ರಕಾಶ್‌ ಸೋಲಂಕಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಶಾಸಕರನ್ನು ಸಿಲುಕಿಸಲು ಕದ್ದಾಲಿಕೆ ನಡೆಸಲಾಗುತ್ತಿದೆ ಎಂದು ಹಲವು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆದರೆ, ಯಾವುದೇ ಶಾಸಕರ ಹೆಸರನ್ನು ಅವರು ಬಹಿರಂಗ ಪಡಿಸಿಲ್ಲ. ಸದ್ಯ, ದೂರವಾಣಿ ಕದ್ದಾಲಿಕೆ ಪ್ರಕರಣ ರಾಜಸ್ಥಾನದ ಅಶೋಕ್‌ ಗೆಹ್ಲೋಟ್‌ ಸರ್ಕಾರಕ್ಕೆ ಹೊಸ ಸಮಸ್ಯೆಯನ್ನು ತಂದೊಡ್ಡಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್‌ ಪೂನಿಯಾ, “ತನ್ನ ಶಾಸಕರಿಗೆ ಕಾಂಗ್ರೆಸ್‌ ಬೆದರಿಕೆ ಹಾಕುತ್ತಿದೆ. ಶಾಸಕರ ವಿರುದ್ಧವೇ ಬೇಹುಗಾರಿಕೆ ನಡೆಸಲಾಗುತ್ತಿದೆ. ಈ ಶಾಸಕರು ಯಾರು ಎನ್ನುವುದನ್ನು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...