Homeಕರ್ನಾಟಕಸರ್ಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೊ ನಿರ್ಬಂಧ: ಆದೇಶ ವಾಪಸ್ ಪಡೆದ ಸರ್ಕಾರ

ಸರ್ಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೊ ನಿರ್ಬಂಧ: ಆದೇಶ ವಾಪಸ್ ಪಡೆದ ಸರ್ಕಾರ

- Advertisement -
- Advertisement -

ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸರ್ಕಾರ ರಾತ್ರೋರಾತ್ರಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ನಿರ್ಬಂಧ ಆದೇಶವನ್ನು ಜುಲೈ 15ರ ತಡರಾತ್ರಿ ವಾಪಸ್ ಪಡೆಯಲಾಗಿದೆ. ರಾತ್ರಿ 2 ಗಂಟೆ ವೇಳೆಗೆ ಮುಖ್ಯಮಂತ್ರಿಯವರ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಈ ಮಾಹಿತಿ ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಕಾರ್ಯನಿರ್ವಹಣೆ ವೇಳೆಯಲ್ಲಿ ಸಾರ್ವಜನಿಕರು ಅನುಮತಿ ಇಲ್ಲದೆ ಫೋಟೊ ತೆಗೆಯಬಾರದು, ವಿಡಿಯೊ ಚಿತ್ರೀಕರಣ ಮಾಡಬಾರದು ಎಂದು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿ‌ತ್ತು.

‘ಶೇ 40ರ ಲಂಚದ ಆಪಾದನೆಗೆ ಗುರಿಯಾಗಿರುವ ಸರ್ಕಾರ, ಭ್ರಷ್ಟಾಚಾರವನ್ನು ಎಗ್ಗಿಲ್ಲದೆ ನಡೆಸಲು ಅನುಕೂಲವಾಗುವಂತೆ ನಿರ್ಬಂಧ ಹೇರಿದೆ. ಇದೇ 40% ಕಮಿಷನ್ ಸರ್ಕಾರದ ಪಾರದರ್ಶಕತೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸಚಿವಾಲಯದ ಕಚೇರಿಗಳನ್ನು ಬಿಟ್ಟು ಉಳಿದೆಲ್ಲ ಕಚೇರಿಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿತ್ತು. ಕಚೇರಿಯ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಕೊಠಡಿಗಳ ಚಲನವಲನಗಳನ್ನು ವೀಕ್ಷಿಸಲು ಕೇಂದ್ರೀಕೃತ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಅದನ್ನು ಇನ್ನಷ್ಟು ಸುಧಾರಣೆ ಮಾಡಬೇಕು ಎಂಬ ಆಗ್ರಹ ಇರುವಾಗಲೇ, ಫೋಟೊ, ವಿಡಿಯೊ ಚಿತ್ರೀಕರಣನ್ನೂ ನಿಷೇಧ ಹೇರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ವಿಧಾನಸೌಧ ಮತ್ತು ವಿಕಾಸಸೌಧದಲ್ಲಿನ ಸಚಿವರು ಮತ್ತು ಅಧಿಕಾರಿಗಳ ಕಚೇರಿಗೆ ಮಾಧ್ಯಮ ಪ್ರತಿನಿಧಿಗಳು ಭೇಟಿ ನೀಡುವುದನ್ನು ನಿರ್ಬಂಧಿಸಿ 2021ರ ಜುಲೈ ತಿಂಗಳಲ್ಲಿ ಆದೇಶ ಹೊರಡಿಸಲಾಗಿತ್ತು. ತೀವ್ರ ವಿರೋಧ ವ್ಯಕ್ತವಾದ ಬಳಿಕ ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆದೇಶ ಹಿಂಪಡೆದಿದ್ದರು. ಈಗ ಬೊಮ್ಮಾಯಿಯವರ ಅವಧಿಯಲ್ಲೂ ಇಂತಹದ್ದೇ ಪ್ರಕರಣ ಮರುಕಳಿಸಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

ಹೊಸ ಆದೇಶವನ್ನು ತೀವ್ರವಾಗಿ ವಿರೋಧಿಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತರಕ್ಷಣೆಗಾಗಿ ಈ ಆದೇಶ ಹೊರಡಿಸಿಲ್ಲ. ಸರ್ಕಾರದಲ್ಲಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ಕ್ರಮ ಕೈಗೊಂಡಿದೆ’ ಎಂದು ಆರೋಪಿಸಿದ್ದರು.

ಡಿಜಿಟಲ್‌ ಸುದ್ದಿ ಮಾಧ್ಯಮಗಳ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ?

ಡಿಜಿಟಲ್‌ ಸುದ್ದಿ ಮಾಧ್ಯಮವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಪತ್ರಿಕೆ ಮತ್ತು ನಿಯತಕಾಲಿಕ ನೋಂದಣಿ ಮಸೂದೆಯನ್ನು ಮಂಡಿಸಲು ಮುಂದಾಗಿದೆ. ಈಗ ‘ಪತ್ರಿಕೆ ಮತ್ತು ಪುಸ್ತಕಗಳ ನೋಂದಣಿ ಕಾಯ್ದೆ 1867’ ಜಾರಿಯಲ್ಲಿದ್ದು, ಇದು ಪತ್ರಿಕೆಗಳ ನಿಯಂತ್ರಣಕ್ಕೆ ಬಳಕೆಯಾಗುತ್ತಿದೆ.

ಡಿಜಿಟಲ್‌ ಸುದ್ದಿ ಪೋರ್ಟಲ್‌ಗಳನ್ನು ಕೂಡ ಪತ್ರಿಕೆಗಳ ರೀತಿಯಲ್ಲಿಯೇ ನಿಯಂತ್ರಿಸುವುದಕ್ಕೆ ಹೊಸ ಕಾಯ್ದೆಯನ್ನು ಜಾರಿಗೊಳಿಸಲು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿದೆ. ಸಚಿವ ಸಂಪುಟದ ಮುಂದೆ ಶೀಘ್ರದಲ್ಲೇ ಮಸೂದೆ ಬರಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...