Homeಮುಖಪುಟಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್...ಕಾರಣ?

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

- Advertisement -
- Advertisement -

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮ್ಮೆ ಹೂಡಿದ್ದು, ಬರೋಬ್ಬರಿ 18 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ.

ಝೀ ನ್ಯೂಸ್ ಮತ್ತು ಅದರ ಮಾತೃ ಕಂಪನಿ ಝೀ ಮೀಡಿಯಾ ಕಾರ್ಪೊರೇಷನ್ ಅನ್ನು ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಜೂನ್ 2022ರಲ್ಲಿ ತಾನು ಸೆರೆ ಹಿಡಿದ ವಿಡಿಯೋ ಬಳಸಿಕೊಂಡಿದ್ದಕ್ಕೆ ಸೇನ್ ಮೊಕದ್ದಮೆ ಹೂಡಿದ್ದಾರೆ. ಜೂನ್ 3 ಮತ್ತು 10ರ ನಡುವೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದ ಸೇನ್, ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದ ಚಿರತೆಗಳನ್ನು ಸೆರೆಹಿಡಿದು ಸಾಗಿಸುವುದನ್ನು ದಾಖಲಿಸಿದ್ದರು.

ವಿಶ್ವದ ಮೊದಲ ಅಂತರಖಂಡ ವನ್ಯಜೀವಿ ಸ್ಥಳಾಂತರದಲ್ಲಿ, ಭಾರತವು 2022 ಮತ್ತು 2023ರಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಆಫ್ರಿಕನ್ ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದೆ. ಈ ಚಿರತೆಗಳು 1952ರಲ್ಲಿ ಭಾರತದಲ್ಲಿ ನಿರ್ನಾಮವಾಗಿದೆ ಎಂದು ಘೋಷಿಸಲಾಗಿದೆ.

ತಾನು ಚಿತ್ರೀಕರಿಸಿದ ವಿಡಿಯೋದ 12 ಸೆಕೆಂಡ್‌ಗಳ ಕಿರು ತುಣುಕನ್ನು ಝೀ ನ್ಯೂಸ್ ಹಿಂದಿ ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮವಾದ ಡಿಎನ್‌ಎಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸೇನ್ ಆರೋಪಿಸಿದ್ದಾರೆ. 2022ರ ಸೆಪ್ಟೆಂಬರ್ 16 ಮತ್ತು 17ರಂದು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಆ ಸಮಯದಲ್ಲಿ ರೋಹಿತ್ ರಂಜನ್ ಅವರು ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ತಾನು ಚಿತ್ರೀಕರಿಸಿದ 12 ಸೆಕೆಂಡ್‌ಗಳ ವಿಡಿಯೋ ಅತ್ಯಂತ ಅಪರೂಪದ್ದು. ಪ್ರಾಣಿಗಳ ಛಾಯಾಚಿತ್ರಣಲ್ಲಿ ಇಂಥದ್ದು ಕಾಣ ಸಿಗುವುದು ಬಹಳ ಕಡಿಮೆ. ಅದಕ್ಕಿಂತ ಮುಖ್ಯವಾಗಿ, ಈ ವಿಡಿಯೋಗೆ ಸಂಬಂಧಿಸಿದ ಚಿರತೆಗಳ ಸ್ಥಳಾಂತರ ಯೋಜನೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಯಾವ ದೊಡ್ಡ ಬೆಕ್ಕು ಪ್ರಭೇದವನ್ನೂ (ಚಿರತೆ, ಸಿಂಹ, ಹುಲಿ ಇತ್ಯಾದಿ) ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ಸಾಗಿಸಿ ಬಿಡುಗಡೆ ಮಾಡಿದ ಯೋಜನೆ ಇದುವರೆಗೆ ಎಂದೂ ನಡೆದಿರಲಿಲ್ಲ ಎಂದು ಸೇನ್ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಸಾರದ ವೇಳೆ ಝೀ ನ್ಯೂಸ್ ಚಾನೆಲ್‌ ವಿಡಿಯೋ ತನ್ನದೇ ‘ಸೂಪರ್ ಎಕ್ಸ್‌ಕ್ಲೂಸಿವ್’ ಎಂದು ಹೇಳಿಕೊಂಡಿತ್ತು. ವಾಟರ್‌ಮಾರ್ಕ್‌ಗಳು, ಟಿಕ್ಕರ್‌ಗಳು ಮತ್ತು ಆನ್-ಸ್ಕ್ರೀನ್ ಟೆಕ್ಸ್‌ ಅನ್ನೂ ಹಾಕಿಕೊಂಡಿತ್ತು. ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳನ್ನು ಸಾಗಿಸುವ ವಿಮಾನದೊಳಗೆ ಪ್ರವೇಶಿಸುವ ಅಪರೂಪದ ಅವಕಾಶ ತನಗೆ ದೊರೆತಿದೆ ಎಂಬಂತೆ ಬಿಂಬಿಸಿತ್ತು ಎಂದು ಸೇನ್ ಆರೋಪಿಸಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಕದ್ದು ತನ್ನದು ಎಂದು ಹೇಳಿಕೊಂಡಿದೆ. ಇದರಿಂದ ವಿಡಿಯೋ ತೆಗೆದ ತನಗೆ ಸಿಗಬೇಕಿದ್ದ ಖ್ಯಾತಿ ಮತ್ತು ಹಣ ಎರಡೂ ನಷ್ಟವಾಗಿದೆ ಎಂದು ಸೇನ್ ಹೇಳಿದ್ದಾರೆ.

ಝೀ ನ್ಯೂಸ್ ವಿರುದ್ದ ಕಾನೂನು ಕ್ರಮ ಅಗತ್ಯವಾಗಿದೆ. ಏಕೆಂದರೆ, ಝೀ ನ್ಯೂಸ್ ಮೊದಲ ಬಾರಿಗೆ ಈ ರೀತಿ ಮಾಡುತ್ತಿಲ್ಲ. ಭಾರತೀಯ ಟಿವಿ ಚಾನೆಲ್‌ಗಳಲ್ಲಿ ಇದೊಂದು ದೊಡ್ಡ ರೋಗವೇ ಆಗಿದೆ. ಕ್ಯಾಮರಾಮ್ಯಾನ್‌ಗಳು ಕಷ್ಟಪಟ್ಟು ಸೆರೆ ಹಿಡಿದ ವಿಡಿಯೋಗಳನ್ನು ಹಣ ಅಥವಾ ಕನಿಷ್ಠ ಕ್ರೆಡಿಟ್ ಕೂಡ ಕೊಡದೆ ಚಾನೆಲ್‌ಗಳು ತಮ್ಮ ಸ್ವಂತದ್ದು ಎಂಬಂತೆ ಬಳಸಿಕೊಳ್ಳುತ್ತಿವೆ. ಇದಕ್ಕೆ ಅವರು ‘ಫೇರ್ ಯೂಸ್’ (fair use) ಎಂಬ ಹೆಸರು ಕೊಟ್ಟು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದು ನಿಜವಾಗಿಯೂ ಫೇರ್ ಯೂಸ್ ಅಲ್ಲ, ಇದು ಸ್ಪಷ್ಟ ಕಳ್ಳತನ” ಎಂದು ಸೇನ್ ಹೇಳಿಕೊಂಡಿದ್ದಾರೆ.

ತನ್ನ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಕದ್ದು ಬಳಸಿಕೊಳ್ಳುವ ಮೂಲಕ ಝೀ ನ್ಯೂಸ್ ಹಕ್ಕುಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾತ್ರ ಮಾಡಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳನ್ನೂ ಉಲ್ಲಂಘಿಸಿದೆ ಎಂದು ಸೇನ್ ತಿಳಿಸಿದ್ದಾರೆ.

ಝೀ ನ್ಯೂಸ್ ನನ್ನ ಕೆಲಸವನ್ನು ಬಳಸಿಕೊಂಡಿದ್ದು ಇದೇ ಮೊದಲಲ್ಲ. 2014ರಲ್ಲಿ ಝೀ ನ್ಯೂಸ್ (ಬಂಗಾಳಿ) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರತಿಭಟನೆಗಳ ಕುರಿತಾದ ಒಂದು ವರದಿಯಲ್ಲಿ ನನ್ನ ಒಂದು ಫೋಟೋವನ್ನು ಅನುಮತಿಯಿಲ್ಲದೆ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದೆ. ಈ ಬಗ್ಗೆ ಪರಿಹಾರ ಕೋರಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದ್ದೇನೆ. ಎರಡು ಬಾರಿ ಅವರ ಕಚೇರಿ ತೆರಳಿ ಮಾತುಕತೆಯೂ ನಡೆಸಿದ್ದೇನೆ. ಕೊನೆಗೆ ಅವರು ಬಿಲ್ ಹಾಕು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ 18 ಕೋಟಿ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತಮ್ಮ ಮೊಕದ್ದಮೆಯಲ್ಲಿ, ಸೇನ್ ಅವರು ಝೀ ನ್ಯೂಸ್ ಅನುಮತಿಯಿಲ್ಲದೆ ತಮ್ಮ ವಿಶೇಷ ಚಿರತೆ ಸ್ಥಳಾಂತರ ದೃಶ್ಯಗಳನ್ನು ಪ್ರಸಾರ ಮಾಡಿದ್ದರಿಂದ ಉಂಟಾದ ಆರ್ಥಿಕ ಮತ್ತು ವೃತ್ತಿಪರ ನಷ್ಟಗಳ ಪಟ್ಟಿಯನ್ನು ವಿವರಿಸಿದ್ದಾರೆ.

ತಾನು ಸೆರೆಹಿಡಿದ ವಿಶೇಷ ವಿಡಿಯೋವನ್ನು ಮಾರಾಟ ಮಾಡುವ ಮೊದಲೇ ಝೀ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಎಂದು ಪ್ರಸಾರ ಮಾಡಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದೆ. ಝೀ ನ್ಯೂಸ್ ವಿಡಿಯೋ ಪ್ರಸಾರ ಮಾಡುವ ಮೊದಲು ನಾನು ಎನ್‌ಡಿಟಿವಿಗೆ ವಿಡಿಯೋ ಮಾರಾಟ ಸಂಬಂಧ ರೂ. 1.25 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ನಂತರ ಅದು ಕೈ ತಪ್ಪಿ ಹೋಯಿತು. ಇತರ ಚಾನೆಲ್‌ಗಳೂ ನನ್ನ ವಿಡಿಯೋ ಖರೀದಿಸುತ್ತಿತ್ತು. ಆದರೆ, ಝೀ ಪ್ರಸಾರ ಮಾಡಿದ್ದರಿಂದ ಯಾರೂ ನನ್ನ ವಿಡಿಯೋ ಖರೀದಿಸಲು ಮುಂದೆ ಬರಲಿಲ್ಲ ಎಂದು ಸೇನ್ ಹೇಳಿಕೊಂಡಿದ್ದಾರೆ.

ಕೋಲ್ಕತ್ತಾದ ವಾಣಿಜ್ಯ ನ್ಯಾಯಾಲಯವು ಈ ಮೊಕದ್ದಮೆಯನ್ನು ಒಪ್ಪಿಕೊಂಡಿದ್ದು, ಜನವರಿ 16ರಂದು ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...