Homeಮುಖಪುಟಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್...ಕಾರಣ?

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

- Advertisement -
- Advertisement -

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮ್ಮೆ ಹೂಡಿದ್ದು, ಬರೋಬ್ಬರಿ 18 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ.

ಝೀ ನ್ಯೂಸ್ ಮತ್ತು ಅದರ ಮಾತೃ ಕಂಪನಿ ಝೀ ಮೀಡಿಯಾ ಕಾರ್ಪೊರೇಷನ್ ಅನ್ನು ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಜೂನ್ 2022ರಲ್ಲಿ ತಾನು ಸೆರೆ ಹಿಡಿದ ವಿಡಿಯೋ ಬಳಸಿಕೊಂಡಿದ್ದಕ್ಕೆ ಸೇನ್ ಮೊಕದ್ದಮೆ ಹೂಡಿದ್ದಾರೆ. ಜೂನ್ 3 ಮತ್ತು 10ರ ನಡುವೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದ ಸೇನ್, ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದ ಚಿರತೆಗಳನ್ನು ಸೆರೆಹಿಡಿದು ಸಾಗಿಸುವುದನ್ನು ದಾಖಲಿಸಿದ್ದರು.

ವಿಶ್ವದ ಮೊದಲ ಅಂತರಖಂಡ ವನ್ಯಜೀವಿ ಸ್ಥಳಾಂತರದಲ್ಲಿ, ಭಾರತವು 2022 ಮತ್ತು 2023ರಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಆಫ್ರಿಕನ್ ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದೆ. ಈ ಚಿರತೆಗಳು 1952ರಲ್ಲಿ ಭಾರತದಲ್ಲಿ ನಿರ್ನಾಮವಾಗಿದೆ ಎಂದು ಘೋಷಿಸಲಾಗಿದೆ.

ತಾನು ಚಿತ್ರೀಕರಿಸಿದ ವಿಡಿಯೋದ 12 ಸೆಕೆಂಡ್‌ಗಳ ಕಿರು ತುಣುಕನ್ನು ಝೀ ನ್ಯೂಸ್ ಹಿಂದಿ ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮವಾದ ಡಿಎನ್‌ಎಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸೇನ್ ಆರೋಪಿಸಿದ್ದಾರೆ. 2022ರ ಸೆಪ್ಟೆಂಬರ್ 16 ಮತ್ತು 17ರಂದು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಆ ಸಮಯದಲ್ಲಿ ರೋಹಿತ್ ರಂಜನ್ ಅವರು ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ತಾನು ಚಿತ್ರೀಕರಿಸಿದ 12 ಸೆಕೆಂಡ್‌ಗಳ ವಿಡಿಯೋ ಅತ್ಯಂತ ಅಪರೂಪದ್ದು. ಪ್ರಾಣಿಗಳ ಛಾಯಾಚಿತ್ರಣಲ್ಲಿ ಇಂಥದ್ದು ಕಾಣ ಸಿಗುವುದು ಬಹಳ ಕಡಿಮೆ. ಅದಕ್ಕಿಂತ ಮುಖ್ಯವಾಗಿ, ಈ ವಿಡಿಯೋಗೆ ಸಂಬಂಧಿಸಿದ ಚಿರತೆಗಳ ಸ್ಥಳಾಂತರ ಯೋಜನೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಯಾವ ದೊಡ್ಡ ಬೆಕ್ಕು ಪ್ರಭೇದವನ್ನೂ (ಚಿರತೆ, ಸಿಂಹ, ಹುಲಿ ಇತ್ಯಾದಿ) ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ಸಾಗಿಸಿ ಬಿಡುಗಡೆ ಮಾಡಿದ ಯೋಜನೆ ಇದುವರೆಗೆ ಎಂದೂ ನಡೆದಿರಲಿಲ್ಲ ಎಂದು ಸೇನ್ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಸಾರದ ವೇಳೆ ಝೀ ನ್ಯೂಸ್ ಚಾನೆಲ್‌ ವಿಡಿಯೋ ತನ್ನದೇ ‘ಸೂಪರ್ ಎಕ್ಸ್‌ಕ್ಲೂಸಿವ್’ ಎಂದು ಹೇಳಿಕೊಂಡಿತ್ತು. ವಾಟರ್‌ಮಾರ್ಕ್‌ಗಳು, ಟಿಕ್ಕರ್‌ಗಳು ಮತ್ತು ಆನ್-ಸ್ಕ್ರೀನ್ ಟೆಕ್ಸ್‌ ಅನ್ನೂ ಹಾಕಿಕೊಂಡಿತ್ತು. ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳನ್ನು ಸಾಗಿಸುವ ವಿಮಾನದೊಳಗೆ ಪ್ರವೇಶಿಸುವ ಅಪರೂಪದ ಅವಕಾಶ ತನಗೆ ದೊರೆತಿದೆ ಎಂಬಂತೆ ಬಿಂಬಿಸಿತ್ತು ಎಂದು ಸೇನ್ ಆರೋಪಿಸಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಕದ್ದು ತನ್ನದು ಎಂದು ಹೇಳಿಕೊಂಡಿದೆ. ಇದರಿಂದ ವಿಡಿಯೋ ತೆಗೆದ ತನಗೆ ಸಿಗಬೇಕಿದ್ದ ಖ್ಯಾತಿ ಮತ್ತು ಹಣ ಎರಡೂ ನಷ್ಟವಾಗಿದೆ ಎಂದು ಸೇನ್ ಹೇಳಿದ್ದಾರೆ.

ಝೀ ನ್ಯೂಸ್ ವಿರುದ್ದ ಕಾನೂನು ಕ್ರಮ ಅಗತ್ಯವಾಗಿದೆ. ಏಕೆಂದರೆ, ಝೀ ನ್ಯೂಸ್ ಮೊದಲ ಬಾರಿಗೆ ಈ ರೀತಿ ಮಾಡುತ್ತಿಲ್ಲ. ಭಾರತೀಯ ಟಿವಿ ಚಾನೆಲ್‌ಗಳಲ್ಲಿ ಇದೊಂದು ದೊಡ್ಡ ರೋಗವೇ ಆಗಿದೆ. ಕ್ಯಾಮರಾಮ್ಯಾನ್‌ಗಳು ಕಷ್ಟಪಟ್ಟು ಸೆರೆ ಹಿಡಿದ ವಿಡಿಯೋಗಳನ್ನು ಹಣ ಅಥವಾ ಕನಿಷ್ಠ ಕ್ರೆಡಿಟ್ ಕೂಡ ಕೊಡದೆ ಚಾನೆಲ್‌ಗಳು ತಮ್ಮ ಸ್ವಂತದ್ದು ಎಂಬಂತೆ ಬಳಸಿಕೊಳ್ಳುತ್ತಿವೆ. ಇದಕ್ಕೆ ಅವರು ‘ಫೇರ್ ಯೂಸ್’ (fair use) ಎಂಬ ಹೆಸರು ಕೊಟ್ಟು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದು ನಿಜವಾಗಿಯೂ ಫೇರ್ ಯೂಸ್ ಅಲ್ಲ, ಇದು ಸ್ಪಷ್ಟ ಕಳ್ಳತನ” ಎಂದು ಸೇನ್ ಹೇಳಿಕೊಂಡಿದ್ದಾರೆ.

ತನ್ನ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಕದ್ದು ಬಳಸಿಕೊಳ್ಳುವ ಮೂಲಕ ಝೀ ನ್ಯೂಸ್ ಹಕ್ಕುಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾತ್ರ ಮಾಡಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳನ್ನೂ ಉಲ್ಲಂಘಿಸಿದೆ ಎಂದು ಸೇನ್ ತಿಳಿಸಿದ್ದಾರೆ.

ಝೀ ನ್ಯೂಸ್ ನನ್ನ ಕೆಲಸವನ್ನು ಬಳಸಿಕೊಂಡಿದ್ದು ಇದೇ ಮೊದಲಲ್ಲ. 2014ರಲ್ಲಿ ಝೀ ನ್ಯೂಸ್ (ಬಂಗಾಳಿ) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರತಿಭಟನೆಗಳ ಕುರಿತಾದ ಒಂದು ವರದಿಯಲ್ಲಿ ನನ್ನ ಒಂದು ಫೋಟೋವನ್ನು ಅನುಮತಿಯಿಲ್ಲದೆ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದೆ. ಈ ಬಗ್ಗೆ ಪರಿಹಾರ ಕೋರಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದ್ದೇನೆ. ಎರಡು ಬಾರಿ ಅವರ ಕಚೇರಿ ತೆರಳಿ ಮಾತುಕತೆಯೂ ನಡೆಸಿದ್ದೇನೆ. ಕೊನೆಗೆ ಅವರು ಬಿಲ್ ಹಾಕು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ 18 ಕೋಟಿ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತಮ್ಮ ಮೊಕದ್ದಮೆಯಲ್ಲಿ, ಸೇನ್ ಅವರು ಝೀ ನ್ಯೂಸ್ ಅನುಮತಿಯಿಲ್ಲದೆ ತಮ್ಮ ವಿಶೇಷ ಚಿರತೆ ಸ್ಥಳಾಂತರ ದೃಶ್ಯಗಳನ್ನು ಪ್ರಸಾರ ಮಾಡಿದ್ದರಿಂದ ಉಂಟಾದ ಆರ್ಥಿಕ ಮತ್ತು ವೃತ್ತಿಪರ ನಷ್ಟಗಳ ಪಟ್ಟಿಯನ್ನು ವಿವರಿಸಿದ್ದಾರೆ.

ತಾನು ಸೆರೆಹಿಡಿದ ವಿಶೇಷ ವಿಡಿಯೋವನ್ನು ಮಾರಾಟ ಮಾಡುವ ಮೊದಲೇ ಝೀ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಎಂದು ಪ್ರಸಾರ ಮಾಡಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದೆ. ಝೀ ನ್ಯೂಸ್ ವಿಡಿಯೋ ಪ್ರಸಾರ ಮಾಡುವ ಮೊದಲು ನಾನು ಎನ್‌ಡಿಟಿವಿಗೆ ವಿಡಿಯೋ ಮಾರಾಟ ಸಂಬಂಧ ರೂ. 1.25 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ನಂತರ ಅದು ಕೈ ತಪ್ಪಿ ಹೋಯಿತು. ಇತರ ಚಾನೆಲ್‌ಗಳೂ ನನ್ನ ವಿಡಿಯೋ ಖರೀದಿಸುತ್ತಿತ್ತು. ಆದರೆ, ಝೀ ಪ್ರಸಾರ ಮಾಡಿದ್ದರಿಂದ ಯಾರೂ ನನ್ನ ವಿಡಿಯೋ ಖರೀದಿಸಲು ಮುಂದೆ ಬರಲಿಲ್ಲ ಎಂದು ಸೇನ್ ಹೇಳಿಕೊಂಡಿದ್ದಾರೆ.

ಕೋಲ್ಕತ್ತಾದ ವಾಣಿಜ್ಯ ನ್ಯಾಯಾಲಯವು ಈ ಮೊಕದ್ದಮೆಯನ್ನು ಒಪ್ಪಿಕೊಂಡಿದ್ದು, ಜನವರಿ 16ರಂದು ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....