Homeಮುಖಪುಟಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್...ಕಾರಣ?

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

- Advertisement -
- Advertisement -

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮ್ಮೆ ಹೂಡಿದ್ದು, ಬರೋಬ್ಬರಿ 18 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ.

ಝೀ ನ್ಯೂಸ್ ಮತ್ತು ಅದರ ಮಾತೃ ಕಂಪನಿ ಝೀ ಮೀಡಿಯಾ ಕಾರ್ಪೊರೇಷನ್ ಅನ್ನು ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಜೂನ್ 2022ರಲ್ಲಿ ತಾನು ಸೆರೆ ಹಿಡಿದ ವಿಡಿಯೋ ಬಳಸಿಕೊಂಡಿದ್ದಕ್ಕೆ ಸೇನ್ ಮೊಕದ್ದಮೆ ಹೂಡಿದ್ದಾರೆ. ಜೂನ್ 3 ಮತ್ತು 10ರ ನಡುವೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದ ಸೇನ್, ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದ ಚಿರತೆಗಳನ್ನು ಸೆರೆಹಿಡಿದು ಸಾಗಿಸುವುದನ್ನು ದಾಖಲಿಸಿದ್ದರು.

ವಿಶ್ವದ ಮೊದಲ ಅಂತರಖಂಡ ವನ್ಯಜೀವಿ ಸ್ಥಳಾಂತರದಲ್ಲಿ, ಭಾರತವು 2022 ಮತ್ತು 2023ರಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಆಫ್ರಿಕನ್ ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದೆ. ಈ ಚಿರತೆಗಳು 1952ರಲ್ಲಿ ಭಾರತದಲ್ಲಿ ನಿರ್ನಾಮವಾಗಿದೆ ಎಂದು ಘೋಷಿಸಲಾಗಿದೆ.

ತಾನು ಚಿತ್ರೀಕರಿಸಿದ ವಿಡಿಯೋದ 12 ಸೆಕೆಂಡ್‌ಗಳ ಕಿರು ತುಣುಕನ್ನು ಝೀ ನ್ಯೂಸ್ ಹಿಂದಿ ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮವಾದ ಡಿಎನ್‌ಎಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸೇನ್ ಆರೋಪಿಸಿದ್ದಾರೆ. 2022ರ ಸೆಪ್ಟೆಂಬರ್ 16 ಮತ್ತು 17ರಂದು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಆ ಸಮಯದಲ್ಲಿ ರೋಹಿತ್ ರಂಜನ್ ಅವರು ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ತಾನು ಚಿತ್ರೀಕರಿಸಿದ 12 ಸೆಕೆಂಡ್‌ಗಳ ವಿಡಿಯೋ ಅತ್ಯಂತ ಅಪರೂಪದ್ದು. ಪ್ರಾಣಿಗಳ ಛಾಯಾಚಿತ್ರಣಲ್ಲಿ ಇಂಥದ್ದು ಕಾಣ ಸಿಗುವುದು ಬಹಳ ಕಡಿಮೆ. ಅದಕ್ಕಿಂತ ಮುಖ್ಯವಾಗಿ, ಈ ವಿಡಿಯೋಗೆ ಸಂಬಂಧಿಸಿದ ಚಿರತೆಗಳ ಸ್ಥಳಾಂತರ ಯೋಜನೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಯಾವ ದೊಡ್ಡ ಬೆಕ್ಕು ಪ್ರಭೇದವನ್ನೂ (ಚಿರತೆ, ಸಿಂಹ, ಹುಲಿ ಇತ್ಯಾದಿ) ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ಸಾಗಿಸಿ ಬಿಡುಗಡೆ ಮಾಡಿದ ಯೋಜನೆ ಇದುವರೆಗೆ ಎಂದೂ ನಡೆದಿರಲಿಲ್ಲ ಎಂದು ಸೇನ್ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಸಾರದ ವೇಳೆ ಝೀ ನ್ಯೂಸ್ ಚಾನೆಲ್‌ ವಿಡಿಯೋ ತನ್ನದೇ ‘ಸೂಪರ್ ಎಕ್ಸ್‌ಕ್ಲೂಸಿವ್’ ಎಂದು ಹೇಳಿಕೊಂಡಿತ್ತು. ವಾಟರ್‌ಮಾರ್ಕ್‌ಗಳು, ಟಿಕ್ಕರ್‌ಗಳು ಮತ್ತು ಆನ್-ಸ್ಕ್ರೀನ್ ಟೆಕ್ಸ್‌ ಅನ್ನೂ ಹಾಕಿಕೊಂಡಿತ್ತು. ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳನ್ನು ಸಾಗಿಸುವ ವಿಮಾನದೊಳಗೆ ಪ್ರವೇಶಿಸುವ ಅಪರೂಪದ ಅವಕಾಶ ತನಗೆ ದೊರೆತಿದೆ ಎಂಬಂತೆ ಬಿಂಬಿಸಿತ್ತು ಎಂದು ಸೇನ್ ಆರೋಪಿಸಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಕದ್ದು ತನ್ನದು ಎಂದು ಹೇಳಿಕೊಂಡಿದೆ. ಇದರಿಂದ ವಿಡಿಯೋ ತೆಗೆದ ತನಗೆ ಸಿಗಬೇಕಿದ್ದ ಖ್ಯಾತಿ ಮತ್ತು ಹಣ ಎರಡೂ ನಷ್ಟವಾಗಿದೆ ಎಂದು ಸೇನ್ ಹೇಳಿದ್ದಾರೆ.

ಝೀ ನ್ಯೂಸ್ ವಿರುದ್ದ ಕಾನೂನು ಕ್ರಮ ಅಗತ್ಯವಾಗಿದೆ. ಏಕೆಂದರೆ, ಝೀ ನ್ಯೂಸ್ ಮೊದಲ ಬಾರಿಗೆ ಈ ರೀತಿ ಮಾಡುತ್ತಿಲ್ಲ. ಭಾರತೀಯ ಟಿವಿ ಚಾನೆಲ್‌ಗಳಲ್ಲಿ ಇದೊಂದು ದೊಡ್ಡ ರೋಗವೇ ಆಗಿದೆ. ಕ್ಯಾಮರಾಮ್ಯಾನ್‌ಗಳು ಕಷ್ಟಪಟ್ಟು ಸೆರೆ ಹಿಡಿದ ವಿಡಿಯೋಗಳನ್ನು ಹಣ ಅಥವಾ ಕನಿಷ್ಠ ಕ್ರೆಡಿಟ್ ಕೂಡ ಕೊಡದೆ ಚಾನೆಲ್‌ಗಳು ತಮ್ಮ ಸ್ವಂತದ್ದು ಎಂಬಂತೆ ಬಳಸಿಕೊಳ್ಳುತ್ತಿವೆ. ಇದಕ್ಕೆ ಅವರು ‘ಫೇರ್ ಯೂಸ್’ (fair use) ಎಂಬ ಹೆಸರು ಕೊಟ್ಟು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದು ನಿಜವಾಗಿಯೂ ಫೇರ್ ಯೂಸ್ ಅಲ್ಲ, ಇದು ಸ್ಪಷ್ಟ ಕಳ್ಳತನ” ಎಂದು ಸೇನ್ ಹೇಳಿಕೊಂಡಿದ್ದಾರೆ.

ತನ್ನ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಕದ್ದು ಬಳಸಿಕೊಳ್ಳುವ ಮೂಲಕ ಝೀ ನ್ಯೂಸ್ ಹಕ್ಕುಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾತ್ರ ಮಾಡಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳನ್ನೂ ಉಲ್ಲಂಘಿಸಿದೆ ಎಂದು ಸೇನ್ ತಿಳಿಸಿದ್ದಾರೆ.

ಝೀ ನ್ಯೂಸ್ ನನ್ನ ಕೆಲಸವನ್ನು ಬಳಸಿಕೊಂಡಿದ್ದು ಇದೇ ಮೊದಲಲ್ಲ. 2014ರಲ್ಲಿ ಝೀ ನ್ಯೂಸ್ (ಬಂಗಾಳಿ) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರತಿಭಟನೆಗಳ ಕುರಿತಾದ ಒಂದು ವರದಿಯಲ್ಲಿ ನನ್ನ ಒಂದು ಫೋಟೋವನ್ನು ಅನುಮತಿಯಿಲ್ಲದೆ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದೆ. ಈ ಬಗ್ಗೆ ಪರಿಹಾರ ಕೋರಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದ್ದೇನೆ. ಎರಡು ಬಾರಿ ಅವರ ಕಚೇರಿ ತೆರಳಿ ಮಾತುಕತೆಯೂ ನಡೆಸಿದ್ದೇನೆ. ಕೊನೆಗೆ ಅವರು ಬಿಲ್ ಹಾಕು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ 18 ಕೋಟಿ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತಮ್ಮ ಮೊಕದ್ದಮೆಯಲ್ಲಿ, ಸೇನ್ ಅವರು ಝೀ ನ್ಯೂಸ್ ಅನುಮತಿಯಿಲ್ಲದೆ ತಮ್ಮ ವಿಶೇಷ ಚಿರತೆ ಸ್ಥಳಾಂತರ ದೃಶ್ಯಗಳನ್ನು ಪ್ರಸಾರ ಮಾಡಿದ್ದರಿಂದ ಉಂಟಾದ ಆರ್ಥಿಕ ಮತ್ತು ವೃತ್ತಿಪರ ನಷ್ಟಗಳ ಪಟ್ಟಿಯನ್ನು ವಿವರಿಸಿದ್ದಾರೆ.

ತಾನು ಸೆರೆಹಿಡಿದ ವಿಶೇಷ ವಿಡಿಯೋವನ್ನು ಮಾರಾಟ ಮಾಡುವ ಮೊದಲೇ ಝೀ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಎಂದು ಪ್ರಸಾರ ಮಾಡಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದೆ. ಝೀ ನ್ಯೂಸ್ ವಿಡಿಯೋ ಪ್ರಸಾರ ಮಾಡುವ ಮೊದಲು ನಾನು ಎನ್‌ಡಿಟಿವಿಗೆ ವಿಡಿಯೋ ಮಾರಾಟ ಸಂಬಂಧ ರೂ. 1.25 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ನಂತರ ಅದು ಕೈ ತಪ್ಪಿ ಹೋಯಿತು. ಇತರ ಚಾನೆಲ್‌ಗಳೂ ನನ್ನ ವಿಡಿಯೋ ಖರೀದಿಸುತ್ತಿತ್ತು. ಆದರೆ, ಝೀ ಪ್ರಸಾರ ಮಾಡಿದ್ದರಿಂದ ಯಾರೂ ನನ್ನ ವಿಡಿಯೋ ಖರೀದಿಸಲು ಮುಂದೆ ಬರಲಿಲ್ಲ ಎಂದು ಸೇನ್ ಹೇಳಿಕೊಂಡಿದ್ದಾರೆ.

ಕೋಲ್ಕತ್ತಾದ ವಾಣಿಜ್ಯ ನ್ಯಾಯಾಲಯವು ಈ ಮೊಕದ್ದಮೆಯನ್ನು ಒಪ್ಪಿಕೊಂಡಿದ್ದು, ಜನವರಿ 16ರಂದು ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...