Homeಮುಖಪುಟಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್...ಕಾರಣ?

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

- Advertisement -
- Advertisement -

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮ್ಮೆ ಹೂಡಿದ್ದು, ಬರೋಬ್ಬರಿ 18 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ.

ಝೀ ನ್ಯೂಸ್ ಮತ್ತು ಅದರ ಮಾತೃ ಕಂಪನಿ ಝೀ ಮೀಡಿಯಾ ಕಾರ್ಪೊರೇಷನ್ ಅನ್ನು ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಜೂನ್ 2022ರಲ್ಲಿ ತಾನು ಸೆರೆ ಹಿಡಿದ ವಿಡಿಯೋ ಬಳಸಿಕೊಂಡಿದ್ದಕ್ಕೆ ಸೇನ್ ಮೊಕದ್ದಮೆ ಹೂಡಿದ್ದಾರೆ. ಜೂನ್ 3 ಮತ್ತು 10ರ ನಡುವೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದ ಸೇನ್, ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದ ಚಿರತೆಗಳನ್ನು ಸೆರೆಹಿಡಿದು ಸಾಗಿಸುವುದನ್ನು ದಾಖಲಿಸಿದ್ದರು.

ವಿಶ್ವದ ಮೊದಲ ಅಂತರಖಂಡ ವನ್ಯಜೀವಿ ಸ್ಥಳಾಂತರದಲ್ಲಿ, ಭಾರತವು 2022 ಮತ್ತು 2023ರಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಆಫ್ರಿಕನ್ ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದೆ. ಈ ಚಿರತೆಗಳು 1952ರಲ್ಲಿ ಭಾರತದಲ್ಲಿ ನಿರ್ನಾಮವಾಗಿದೆ ಎಂದು ಘೋಷಿಸಲಾಗಿದೆ.

ತಾನು ಚಿತ್ರೀಕರಿಸಿದ ವಿಡಿಯೋದ 12 ಸೆಕೆಂಡ್‌ಗಳ ಕಿರು ತುಣುಕನ್ನು ಝೀ ನ್ಯೂಸ್ ಹಿಂದಿ ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮವಾದ ಡಿಎನ್‌ಎಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸೇನ್ ಆರೋಪಿಸಿದ್ದಾರೆ. 2022ರ ಸೆಪ್ಟೆಂಬರ್ 16 ಮತ್ತು 17ರಂದು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಆ ಸಮಯದಲ್ಲಿ ರೋಹಿತ್ ರಂಜನ್ ಅವರು ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ತಾನು ಚಿತ್ರೀಕರಿಸಿದ 12 ಸೆಕೆಂಡ್‌ಗಳ ವಿಡಿಯೋ ಅತ್ಯಂತ ಅಪರೂಪದ್ದು. ಪ್ರಾಣಿಗಳ ಛಾಯಾಚಿತ್ರಣಲ್ಲಿ ಇಂಥದ್ದು ಕಾಣ ಸಿಗುವುದು ಬಹಳ ಕಡಿಮೆ. ಅದಕ್ಕಿಂತ ಮುಖ್ಯವಾಗಿ, ಈ ವಿಡಿಯೋಗೆ ಸಂಬಂಧಿಸಿದ ಚಿರತೆಗಳ ಸ್ಥಳಾಂತರ ಯೋಜನೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಯಾವ ದೊಡ್ಡ ಬೆಕ್ಕು ಪ್ರಭೇದವನ್ನೂ (ಚಿರತೆ, ಸಿಂಹ, ಹುಲಿ ಇತ್ಯಾದಿ) ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ಸಾಗಿಸಿ ಬಿಡುಗಡೆ ಮಾಡಿದ ಯೋಜನೆ ಇದುವರೆಗೆ ಎಂದೂ ನಡೆದಿರಲಿಲ್ಲ ಎಂದು ಸೇನ್ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಸಾರದ ವೇಳೆ ಝೀ ನ್ಯೂಸ್ ಚಾನೆಲ್‌ ವಿಡಿಯೋ ತನ್ನದೇ ‘ಸೂಪರ್ ಎಕ್ಸ್‌ಕ್ಲೂಸಿವ್’ ಎಂದು ಹೇಳಿಕೊಂಡಿತ್ತು. ವಾಟರ್‌ಮಾರ್ಕ್‌ಗಳು, ಟಿಕ್ಕರ್‌ಗಳು ಮತ್ತು ಆನ್-ಸ್ಕ್ರೀನ್ ಟೆಕ್ಸ್‌ ಅನ್ನೂ ಹಾಕಿಕೊಂಡಿತ್ತು. ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳನ್ನು ಸಾಗಿಸುವ ವಿಮಾನದೊಳಗೆ ಪ್ರವೇಶಿಸುವ ಅಪರೂಪದ ಅವಕಾಶ ತನಗೆ ದೊರೆತಿದೆ ಎಂಬಂತೆ ಬಿಂಬಿಸಿತ್ತು ಎಂದು ಸೇನ್ ಆರೋಪಿಸಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಕದ್ದು ತನ್ನದು ಎಂದು ಹೇಳಿಕೊಂಡಿದೆ. ಇದರಿಂದ ವಿಡಿಯೋ ತೆಗೆದ ತನಗೆ ಸಿಗಬೇಕಿದ್ದ ಖ್ಯಾತಿ ಮತ್ತು ಹಣ ಎರಡೂ ನಷ್ಟವಾಗಿದೆ ಎಂದು ಸೇನ್ ಹೇಳಿದ್ದಾರೆ.

ಝೀ ನ್ಯೂಸ್ ವಿರುದ್ದ ಕಾನೂನು ಕ್ರಮ ಅಗತ್ಯವಾಗಿದೆ. ಏಕೆಂದರೆ, ಝೀ ನ್ಯೂಸ್ ಮೊದಲ ಬಾರಿಗೆ ಈ ರೀತಿ ಮಾಡುತ್ತಿಲ್ಲ. ಭಾರತೀಯ ಟಿವಿ ಚಾನೆಲ್‌ಗಳಲ್ಲಿ ಇದೊಂದು ದೊಡ್ಡ ರೋಗವೇ ಆಗಿದೆ. ಕ್ಯಾಮರಾಮ್ಯಾನ್‌ಗಳು ಕಷ್ಟಪಟ್ಟು ಸೆರೆ ಹಿಡಿದ ವಿಡಿಯೋಗಳನ್ನು ಹಣ ಅಥವಾ ಕನಿಷ್ಠ ಕ್ರೆಡಿಟ್ ಕೂಡ ಕೊಡದೆ ಚಾನೆಲ್‌ಗಳು ತಮ್ಮ ಸ್ವಂತದ್ದು ಎಂಬಂತೆ ಬಳಸಿಕೊಳ್ಳುತ್ತಿವೆ. ಇದಕ್ಕೆ ಅವರು ‘ಫೇರ್ ಯೂಸ್’ (fair use) ಎಂಬ ಹೆಸರು ಕೊಟ್ಟು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದು ನಿಜವಾಗಿಯೂ ಫೇರ್ ಯೂಸ್ ಅಲ್ಲ, ಇದು ಸ್ಪಷ್ಟ ಕಳ್ಳತನ” ಎಂದು ಸೇನ್ ಹೇಳಿಕೊಂಡಿದ್ದಾರೆ.

ತನ್ನ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಕದ್ದು ಬಳಸಿಕೊಳ್ಳುವ ಮೂಲಕ ಝೀ ನ್ಯೂಸ್ ಹಕ್ಕುಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾತ್ರ ಮಾಡಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳನ್ನೂ ಉಲ್ಲಂಘಿಸಿದೆ ಎಂದು ಸೇನ್ ತಿಳಿಸಿದ್ದಾರೆ.

ಝೀ ನ್ಯೂಸ್ ನನ್ನ ಕೆಲಸವನ್ನು ಬಳಸಿಕೊಂಡಿದ್ದು ಇದೇ ಮೊದಲಲ್ಲ. 2014ರಲ್ಲಿ ಝೀ ನ್ಯೂಸ್ (ಬಂಗಾಳಿ) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರತಿಭಟನೆಗಳ ಕುರಿತಾದ ಒಂದು ವರದಿಯಲ್ಲಿ ನನ್ನ ಒಂದು ಫೋಟೋವನ್ನು ಅನುಮತಿಯಿಲ್ಲದೆ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದೆ. ಈ ಬಗ್ಗೆ ಪರಿಹಾರ ಕೋರಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದ್ದೇನೆ. ಎರಡು ಬಾರಿ ಅವರ ಕಚೇರಿ ತೆರಳಿ ಮಾತುಕತೆಯೂ ನಡೆಸಿದ್ದೇನೆ. ಕೊನೆಗೆ ಅವರು ಬಿಲ್ ಹಾಕು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ 18 ಕೋಟಿ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತಮ್ಮ ಮೊಕದ್ದಮೆಯಲ್ಲಿ, ಸೇನ್ ಅವರು ಝೀ ನ್ಯೂಸ್ ಅನುಮತಿಯಿಲ್ಲದೆ ತಮ್ಮ ವಿಶೇಷ ಚಿರತೆ ಸ್ಥಳಾಂತರ ದೃಶ್ಯಗಳನ್ನು ಪ್ರಸಾರ ಮಾಡಿದ್ದರಿಂದ ಉಂಟಾದ ಆರ್ಥಿಕ ಮತ್ತು ವೃತ್ತಿಪರ ನಷ್ಟಗಳ ಪಟ್ಟಿಯನ್ನು ವಿವರಿಸಿದ್ದಾರೆ.

ತಾನು ಸೆರೆಹಿಡಿದ ವಿಶೇಷ ವಿಡಿಯೋವನ್ನು ಮಾರಾಟ ಮಾಡುವ ಮೊದಲೇ ಝೀ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಎಂದು ಪ್ರಸಾರ ಮಾಡಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದೆ. ಝೀ ನ್ಯೂಸ್ ವಿಡಿಯೋ ಪ್ರಸಾರ ಮಾಡುವ ಮೊದಲು ನಾನು ಎನ್‌ಡಿಟಿವಿಗೆ ವಿಡಿಯೋ ಮಾರಾಟ ಸಂಬಂಧ ರೂ. 1.25 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ನಂತರ ಅದು ಕೈ ತಪ್ಪಿ ಹೋಯಿತು. ಇತರ ಚಾನೆಲ್‌ಗಳೂ ನನ್ನ ವಿಡಿಯೋ ಖರೀದಿಸುತ್ತಿತ್ತು. ಆದರೆ, ಝೀ ಪ್ರಸಾರ ಮಾಡಿದ್ದರಿಂದ ಯಾರೂ ನನ್ನ ವಿಡಿಯೋ ಖರೀದಿಸಲು ಮುಂದೆ ಬರಲಿಲ್ಲ ಎಂದು ಸೇನ್ ಹೇಳಿಕೊಂಡಿದ್ದಾರೆ.

ಕೋಲ್ಕತ್ತಾದ ವಾಣಿಜ್ಯ ನ್ಯಾಯಾಲಯವು ಈ ಮೊಕದ್ದಮೆಯನ್ನು ಒಪ್ಪಿಕೊಂಡಿದ್ದು, ಜನವರಿ 16ರಂದು ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...