Homeಮುಖಪುಟಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್...ಕಾರಣ?

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

- Advertisement -
- Advertisement -

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮ್ಮೆ ಹೂಡಿದ್ದು, ಬರೋಬ್ಬರಿ 18 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ.

ಝೀ ನ್ಯೂಸ್ ಮತ್ತು ಅದರ ಮಾತೃ ಕಂಪನಿ ಝೀ ಮೀಡಿಯಾ ಕಾರ್ಪೊರೇಷನ್ ಅನ್ನು ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಜೂನ್ 2022ರಲ್ಲಿ ತಾನು ಸೆರೆ ಹಿಡಿದ ವಿಡಿಯೋ ಬಳಸಿಕೊಂಡಿದ್ದಕ್ಕೆ ಸೇನ್ ಮೊಕದ್ದಮೆ ಹೂಡಿದ್ದಾರೆ. ಜೂನ್ 3 ಮತ್ತು 10ರ ನಡುವೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದ ಸೇನ್, ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದ ಚಿರತೆಗಳನ್ನು ಸೆರೆಹಿಡಿದು ಸಾಗಿಸುವುದನ್ನು ದಾಖಲಿಸಿದ್ದರು.

ವಿಶ್ವದ ಮೊದಲ ಅಂತರಖಂಡ ವನ್ಯಜೀವಿ ಸ್ಥಳಾಂತರದಲ್ಲಿ, ಭಾರತವು 2022 ಮತ್ತು 2023ರಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಆಫ್ರಿಕನ್ ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದೆ. ಈ ಚಿರತೆಗಳು 1952ರಲ್ಲಿ ಭಾರತದಲ್ಲಿ ನಿರ್ನಾಮವಾಗಿದೆ ಎಂದು ಘೋಷಿಸಲಾಗಿದೆ.

ತಾನು ಚಿತ್ರೀಕರಿಸಿದ ವಿಡಿಯೋದ 12 ಸೆಕೆಂಡ್‌ಗಳ ಕಿರು ತುಣುಕನ್ನು ಝೀ ನ್ಯೂಸ್ ಹಿಂದಿ ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮವಾದ ಡಿಎನ್‌ಎಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸೇನ್ ಆರೋಪಿಸಿದ್ದಾರೆ. 2022ರ ಸೆಪ್ಟೆಂಬರ್ 16 ಮತ್ತು 17ರಂದು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಆ ಸಮಯದಲ್ಲಿ ರೋಹಿತ್ ರಂಜನ್ ಅವರು ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ತಾನು ಚಿತ್ರೀಕರಿಸಿದ 12 ಸೆಕೆಂಡ್‌ಗಳ ವಿಡಿಯೋ ಅತ್ಯಂತ ಅಪರೂಪದ್ದು. ಪ್ರಾಣಿಗಳ ಛಾಯಾಚಿತ್ರಣಲ್ಲಿ ಇಂಥದ್ದು ಕಾಣ ಸಿಗುವುದು ಬಹಳ ಕಡಿಮೆ. ಅದಕ್ಕಿಂತ ಮುಖ್ಯವಾಗಿ, ಈ ವಿಡಿಯೋಗೆ ಸಂಬಂಧಿಸಿದ ಚಿರತೆಗಳ ಸ್ಥಳಾಂತರ ಯೋಜನೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಯಾವ ದೊಡ್ಡ ಬೆಕ್ಕು ಪ್ರಭೇದವನ್ನೂ (ಚಿರತೆ, ಸಿಂಹ, ಹುಲಿ ಇತ್ಯಾದಿ) ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ಸಾಗಿಸಿ ಬಿಡುಗಡೆ ಮಾಡಿದ ಯೋಜನೆ ಇದುವರೆಗೆ ಎಂದೂ ನಡೆದಿರಲಿಲ್ಲ ಎಂದು ಸೇನ್ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಸಾರದ ವೇಳೆ ಝೀ ನ್ಯೂಸ್ ಚಾನೆಲ್‌ ವಿಡಿಯೋ ತನ್ನದೇ ‘ಸೂಪರ್ ಎಕ್ಸ್‌ಕ್ಲೂಸಿವ್’ ಎಂದು ಹೇಳಿಕೊಂಡಿತ್ತು. ವಾಟರ್‌ಮಾರ್ಕ್‌ಗಳು, ಟಿಕ್ಕರ್‌ಗಳು ಮತ್ತು ಆನ್-ಸ್ಕ್ರೀನ್ ಟೆಕ್ಸ್‌ ಅನ್ನೂ ಹಾಕಿಕೊಂಡಿತ್ತು. ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳನ್ನು ಸಾಗಿಸುವ ವಿಮಾನದೊಳಗೆ ಪ್ರವೇಶಿಸುವ ಅಪರೂಪದ ಅವಕಾಶ ತನಗೆ ದೊರೆತಿದೆ ಎಂಬಂತೆ ಬಿಂಬಿಸಿತ್ತು ಎಂದು ಸೇನ್ ಆರೋಪಿಸಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಕದ್ದು ತನ್ನದು ಎಂದು ಹೇಳಿಕೊಂಡಿದೆ. ಇದರಿಂದ ವಿಡಿಯೋ ತೆಗೆದ ತನಗೆ ಸಿಗಬೇಕಿದ್ದ ಖ್ಯಾತಿ ಮತ್ತು ಹಣ ಎರಡೂ ನಷ್ಟವಾಗಿದೆ ಎಂದು ಸೇನ್ ಹೇಳಿದ್ದಾರೆ.

ಝೀ ನ್ಯೂಸ್ ವಿರುದ್ದ ಕಾನೂನು ಕ್ರಮ ಅಗತ್ಯವಾಗಿದೆ. ಏಕೆಂದರೆ, ಝೀ ನ್ಯೂಸ್ ಮೊದಲ ಬಾರಿಗೆ ಈ ರೀತಿ ಮಾಡುತ್ತಿಲ್ಲ. ಭಾರತೀಯ ಟಿವಿ ಚಾನೆಲ್‌ಗಳಲ್ಲಿ ಇದೊಂದು ದೊಡ್ಡ ರೋಗವೇ ಆಗಿದೆ. ಕ್ಯಾಮರಾಮ್ಯಾನ್‌ಗಳು ಕಷ್ಟಪಟ್ಟು ಸೆರೆ ಹಿಡಿದ ವಿಡಿಯೋಗಳನ್ನು ಹಣ ಅಥವಾ ಕನಿಷ್ಠ ಕ್ರೆಡಿಟ್ ಕೂಡ ಕೊಡದೆ ಚಾನೆಲ್‌ಗಳು ತಮ್ಮ ಸ್ವಂತದ್ದು ಎಂಬಂತೆ ಬಳಸಿಕೊಳ್ಳುತ್ತಿವೆ. ಇದಕ್ಕೆ ಅವರು ‘ಫೇರ್ ಯೂಸ್’ (fair use) ಎಂಬ ಹೆಸರು ಕೊಟ್ಟು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದು ನಿಜವಾಗಿಯೂ ಫೇರ್ ಯೂಸ್ ಅಲ್ಲ, ಇದು ಸ್ಪಷ್ಟ ಕಳ್ಳತನ” ಎಂದು ಸೇನ್ ಹೇಳಿಕೊಂಡಿದ್ದಾರೆ.

ತನ್ನ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಕದ್ದು ಬಳಸಿಕೊಳ್ಳುವ ಮೂಲಕ ಝೀ ನ್ಯೂಸ್ ಹಕ್ಕುಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾತ್ರ ಮಾಡಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳನ್ನೂ ಉಲ್ಲಂಘಿಸಿದೆ ಎಂದು ಸೇನ್ ತಿಳಿಸಿದ್ದಾರೆ.

ಝೀ ನ್ಯೂಸ್ ನನ್ನ ಕೆಲಸವನ್ನು ಬಳಸಿಕೊಂಡಿದ್ದು ಇದೇ ಮೊದಲಲ್ಲ. 2014ರಲ್ಲಿ ಝೀ ನ್ಯೂಸ್ (ಬಂಗಾಳಿ) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರತಿಭಟನೆಗಳ ಕುರಿತಾದ ಒಂದು ವರದಿಯಲ್ಲಿ ನನ್ನ ಒಂದು ಫೋಟೋವನ್ನು ಅನುಮತಿಯಿಲ್ಲದೆ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದೆ. ಈ ಬಗ್ಗೆ ಪರಿಹಾರ ಕೋರಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದ್ದೇನೆ. ಎರಡು ಬಾರಿ ಅವರ ಕಚೇರಿ ತೆರಳಿ ಮಾತುಕತೆಯೂ ನಡೆಸಿದ್ದೇನೆ. ಕೊನೆಗೆ ಅವರು ಬಿಲ್ ಹಾಕು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ 18 ಕೋಟಿ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತಮ್ಮ ಮೊಕದ್ದಮೆಯಲ್ಲಿ, ಸೇನ್ ಅವರು ಝೀ ನ್ಯೂಸ್ ಅನುಮತಿಯಿಲ್ಲದೆ ತಮ್ಮ ವಿಶೇಷ ಚಿರತೆ ಸ್ಥಳಾಂತರ ದೃಶ್ಯಗಳನ್ನು ಪ್ರಸಾರ ಮಾಡಿದ್ದರಿಂದ ಉಂಟಾದ ಆರ್ಥಿಕ ಮತ್ತು ವೃತ್ತಿಪರ ನಷ್ಟಗಳ ಪಟ್ಟಿಯನ್ನು ವಿವರಿಸಿದ್ದಾರೆ.

ತಾನು ಸೆರೆಹಿಡಿದ ವಿಶೇಷ ವಿಡಿಯೋವನ್ನು ಮಾರಾಟ ಮಾಡುವ ಮೊದಲೇ ಝೀ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಎಂದು ಪ್ರಸಾರ ಮಾಡಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದೆ. ಝೀ ನ್ಯೂಸ್ ವಿಡಿಯೋ ಪ್ರಸಾರ ಮಾಡುವ ಮೊದಲು ನಾನು ಎನ್‌ಡಿಟಿವಿಗೆ ವಿಡಿಯೋ ಮಾರಾಟ ಸಂಬಂಧ ರೂ. 1.25 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ನಂತರ ಅದು ಕೈ ತಪ್ಪಿ ಹೋಯಿತು. ಇತರ ಚಾನೆಲ್‌ಗಳೂ ನನ್ನ ವಿಡಿಯೋ ಖರೀದಿಸುತ್ತಿತ್ತು. ಆದರೆ, ಝೀ ಪ್ರಸಾರ ಮಾಡಿದ್ದರಿಂದ ಯಾರೂ ನನ್ನ ವಿಡಿಯೋ ಖರೀದಿಸಲು ಮುಂದೆ ಬರಲಿಲ್ಲ ಎಂದು ಸೇನ್ ಹೇಳಿಕೊಂಡಿದ್ದಾರೆ.

ಕೋಲ್ಕತ್ತಾದ ವಾಣಿಜ್ಯ ನ್ಯಾಯಾಲಯವು ಈ ಮೊಕದ್ದಮೆಯನ್ನು ಒಪ್ಪಿಕೊಂಡಿದ್ದು, ಜನವರಿ 16ರಂದು ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...