Homeಮುಖಪುಟಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್...ಕಾರಣ?

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

- Advertisement -
- Advertisement -

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮ್ಮೆ ಹೂಡಿದ್ದು, ಬರೋಬ್ಬರಿ 18 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ.

ಝೀ ನ್ಯೂಸ್ ಮತ್ತು ಅದರ ಮಾತೃ ಕಂಪನಿ ಝೀ ಮೀಡಿಯಾ ಕಾರ್ಪೊರೇಷನ್ ಅನ್ನು ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಜೂನ್ 2022ರಲ್ಲಿ ತಾನು ಸೆರೆ ಹಿಡಿದ ವಿಡಿಯೋ ಬಳಸಿಕೊಂಡಿದ್ದಕ್ಕೆ ಸೇನ್ ಮೊಕದ್ದಮೆ ಹೂಡಿದ್ದಾರೆ. ಜೂನ್ 3 ಮತ್ತು 10ರ ನಡುವೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದ ಸೇನ್, ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದ ಚಿರತೆಗಳನ್ನು ಸೆರೆಹಿಡಿದು ಸಾಗಿಸುವುದನ್ನು ದಾಖಲಿಸಿದ್ದರು.

ವಿಶ್ವದ ಮೊದಲ ಅಂತರಖಂಡ ವನ್ಯಜೀವಿ ಸ್ಥಳಾಂತರದಲ್ಲಿ, ಭಾರತವು 2022 ಮತ್ತು 2023ರಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಆಫ್ರಿಕನ್ ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದೆ. ಈ ಚಿರತೆಗಳು 1952ರಲ್ಲಿ ಭಾರತದಲ್ಲಿ ನಿರ್ನಾಮವಾಗಿದೆ ಎಂದು ಘೋಷಿಸಲಾಗಿದೆ.

ತಾನು ಚಿತ್ರೀಕರಿಸಿದ ವಿಡಿಯೋದ 12 ಸೆಕೆಂಡ್‌ಗಳ ಕಿರು ತುಣುಕನ್ನು ಝೀ ನ್ಯೂಸ್ ಹಿಂದಿ ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮವಾದ ಡಿಎನ್‌ಎಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸೇನ್ ಆರೋಪಿಸಿದ್ದಾರೆ. 2022ರ ಸೆಪ್ಟೆಂಬರ್ 16 ಮತ್ತು 17ರಂದು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಆ ಸಮಯದಲ್ಲಿ ರೋಹಿತ್ ರಂಜನ್ ಅವರು ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ತಾನು ಚಿತ್ರೀಕರಿಸಿದ 12 ಸೆಕೆಂಡ್‌ಗಳ ವಿಡಿಯೋ ಅತ್ಯಂತ ಅಪರೂಪದ್ದು. ಪ್ರಾಣಿಗಳ ಛಾಯಾಚಿತ್ರಣಲ್ಲಿ ಇಂಥದ್ದು ಕಾಣ ಸಿಗುವುದು ಬಹಳ ಕಡಿಮೆ. ಅದಕ್ಕಿಂತ ಮುಖ್ಯವಾಗಿ, ಈ ವಿಡಿಯೋಗೆ ಸಂಬಂಧಿಸಿದ ಚಿರತೆಗಳ ಸ್ಥಳಾಂತರ ಯೋಜನೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಯಾವ ದೊಡ್ಡ ಬೆಕ್ಕು ಪ್ರಭೇದವನ್ನೂ (ಚಿರತೆ, ಸಿಂಹ, ಹುಲಿ ಇತ್ಯಾದಿ) ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ಸಾಗಿಸಿ ಬಿಡುಗಡೆ ಮಾಡಿದ ಯೋಜನೆ ಇದುವರೆಗೆ ಎಂದೂ ನಡೆದಿರಲಿಲ್ಲ ಎಂದು ಸೇನ್ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಸಾರದ ವೇಳೆ ಝೀ ನ್ಯೂಸ್ ಚಾನೆಲ್‌ ವಿಡಿಯೋ ತನ್ನದೇ ‘ಸೂಪರ್ ಎಕ್ಸ್‌ಕ್ಲೂಸಿವ್’ ಎಂದು ಹೇಳಿಕೊಂಡಿತ್ತು. ವಾಟರ್‌ಮಾರ್ಕ್‌ಗಳು, ಟಿಕ್ಕರ್‌ಗಳು ಮತ್ತು ಆನ್-ಸ್ಕ್ರೀನ್ ಟೆಕ್ಸ್‌ ಅನ್ನೂ ಹಾಕಿಕೊಂಡಿತ್ತು. ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳನ್ನು ಸಾಗಿಸುವ ವಿಮಾನದೊಳಗೆ ಪ್ರವೇಶಿಸುವ ಅಪರೂಪದ ಅವಕಾಶ ತನಗೆ ದೊರೆತಿದೆ ಎಂಬಂತೆ ಬಿಂಬಿಸಿತ್ತು ಎಂದು ಸೇನ್ ಆರೋಪಿಸಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಕದ್ದು ತನ್ನದು ಎಂದು ಹೇಳಿಕೊಂಡಿದೆ. ಇದರಿಂದ ವಿಡಿಯೋ ತೆಗೆದ ತನಗೆ ಸಿಗಬೇಕಿದ್ದ ಖ್ಯಾತಿ ಮತ್ತು ಹಣ ಎರಡೂ ನಷ್ಟವಾಗಿದೆ ಎಂದು ಸೇನ್ ಹೇಳಿದ್ದಾರೆ.

ಝೀ ನ್ಯೂಸ್ ವಿರುದ್ದ ಕಾನೂನು ಕ್ರಮ ಅಗತ್ಯವಾಗಿದೆ. ಏಕೆಂದರೆ, ಝೀ ನ್ಯೂಸ್ ಮೊದಲ ಬಾರಿಗೆ ಈ ರೀತಿ ಮಾಡುತ್ತಿಲ್ಲ. ಭಾರತೀಯ ಟಿವಿ ಚಾನೆಲ್‌ಗಳಲ್ಲಿ ಇದೊಂದು ದೊಡ್ಡ ರೋಗವೇ ಆಗಿದೆ. ಕ್ಯಾಮರಾಮ್ಯಾನ್‌ಗಳು ಕಷ್ಟಪಟ್ಟು ಸೆರೆ ಹಿಡಿದ ವಿಡಿಯೋಗಳನ್ನು ಹಣ ಅಥವಾ ಕನಿಷ್ಠ ಕ್ರೆಡಿಟ್ ಕೂಡ ಕೊಡದೆ ಚಾನೆಲ್‌ಗಳು ತಮ್ಮ ಸ್ವಂತದ್ದು ಎಂಬಂತೆ ಬಳಸಿಕೊಳ್ಳುತ್ತಿವೆ. ಇದಕ್ಕೆ ಅವರು ‘ಫೇರ್ ಯೂಸ್’ (fair use) ಎಂಬ ಹೆಸರು ಕೊಟ್ಟು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದು ನಿಜವಾಗಿಯೂ ಫೇರ್ ಯೂಸ್ ಅಲ್ಲ, ಇದು ಸ್ಪಷ್ಟ ಕಳ್ಳತನ” ಎಂದು ಸೇನ್ ಹೇಳಿಕೊಂಡಿದ್ದಾರೆ.

ತನ್ನ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಕದ್ದು ಬಳಸಿಕೊಳ್ಳುವ ಮೂಲಕ ಝೀ ನ್ಯೂಸ್ ಹಕ್ಕುಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾತ್ರ ಮಾಡಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳನ್ನೂ ಉಲ್ಲಂಘಿಸಿದೆ ಎಂದು ಸೇನ್ ತಿಳಿಸಿದ್ದಾರೆ.

ಝೀ ನ್ಯೂಸ್ ನನ್ನ ಕೆಲಸವನ್ನು ಬಳಸಿಕೊಂಡಿದ್ದು ಇದೇ ಮೊದಲಲ್ಲ. 2014ರಲ್ಲಿ ಝೀ ನ್ಯೂಸ್ (ಬಂಗಾಳಿ) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರತಿಭಟನೆಗಳ ಕುರಿತಾದ ಒಂದು ವರದಿಯಲ್ಲಿ ನನ್ನ ಒಂದು ಫೋಟೋವನ್ನು ಅನುಮತಿಯಿಲ್ಲದೆ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದೆ. ಈ ಬಗ್ಗೆ ಪರಿಹಾರ ಕೋರಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದ್ದೇನೆ. ಎರಡು ಬಾರಿ ಅವರ ಕಚೇರಿ ತೆರಳಿ ಮಾತುಕತೆಯೂ ನಡೆಸಿದ್ದೇನೆ. ಕೊನೆಗೆ ಅವರು ಬಿಲ್ ಹಾಕು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ 18 ಕೋಟಿ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತಮ್ಮ ಮೊಕದ್ದಮೆಯಲ್ಲಿ, ಸೇನ್ ಅವರು ಝೀ ನ್ಯೂಸ್ ಅನುಮತಿಯಿಲ್ಲದೆ ತಮ್ಮ ವಿಶೇಷ ಚಿರತೆ ಸ್ಥಳಾಂತರ ದೃಶ್ಯಗಳನ್ನು ಪ್ರಸಾರ ಮಾಡಿದ್ದರಿಂದ ಉಂಟಾದ ಆರ್ಥಿಕ ಮತ್ತು ವೃತ್ತಿಪರ ನಷ್ಟಗಳ ಪಟ್ಟಿಯನ್ನು ವಿವರಿಸಿದ್ದಾರೆ.

ತಾನು ಸೆರೆಹಿಡಿದ ವಿಶೇಷ ವಿಡಿಯೋವನ್ನು ಮಾರಾಟ ಮಾಡುವ ಮೊದಲೇ ಝೀ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಎಂದು ಪ್ರಸಾರ ಮಾಡಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದೆ. ಝೀ ನ್ಯೂಸ್ ವಿಡಿಯೋ ಪ್ರಸಾರ ಮಾಡುವ ಮೊದಲು ನಾನು ಎನ್‌ಡಿಟಿವಿಗೆ ವಿಡಿಯೋ ಮಾರಾಟ ಸಂಬಂಧ ರೂ. 1.25 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ನಂತರ ಅದು ಕೈ ತಪ್ಪಿ ಹೋಯಿತು. ಇತರ ಚಾನೆಲ್‌ಗಳೂ ನನ್ನ ವಿಡಿಯೋ ಖರೀದಿಸುತ್ತಿತ್ತು. ಆದರೆ, ಝೀ ಪ್ರಸಾರ ಮಾಡಿದ್ದರಿಂದ ಯಾರೂ ನನ್ನ ವಿಡಿಯೋ ಖರೀದಿಸಲು ಮುಂದೆ ಬರಲಿಲ್ಲ ಎಂದು ಸೇನ್ ಹೇಳಿಕೊಂಡಿದ್ದಾರೆ.

ಕೋಲ್ಕತ್ತಾದ ವಾಣಿಜ್ಯ ನ್ಯಾಯಾಲಯವು ಈ ಮೊಕದ್ದಮೆಯನ್ನು ಒಪ್ಪಿಕೊಂಡಿದ್ದು, ಜನವರಿ 16ರಂದು ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...