Homeಚಳವಳಿತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಂದ ಕೊಲ್ಲಲ್ಪಟ್ಟ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಫೋಟೋ ಜರ್ನಲಿಸ್ಟ್ ದ್ಯಾನಿಶ್ ಸಿದ್ದೀಕಿ ಅವರಿಗೆ ಮರಣೋತ್ತರವಾಗಿ ಮುಂಬೈ ಪ್ರೆಸ್ ಕ್ಲಬ್ 2020 ರ ‘ವರ್ಷದ ಪತ್ರಕರ್ತ’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಬುಧವಾರ ಮುಂಬೈ ಪ್ರೆಸ್ ಕ್ಲಬ್ ಸ್ಥಾಪಿಸಿದ ವಾರ್ಷಿಕ ‘ರೆಡ್‌ಇಂಕ್ ಅವಾರ್ಡ್ಸ್ ಫಾರ್ ಎಕ್ಸಲೆನ್ಸ್ ಇನ್ ಜರ್ನಲಿಸಂ’ ಅನ್ನು ವರ್ಚುವಲ್ ಈವೆಂಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

“ತನಿಖಾ ಮತ್ತು ಪ್ರಭಾವಶಾಲಿ ಸುದ್ದಿ ಛಾಯಾಗ್ರಹಣಕ್ಕಾಗಿ” ದಾನಿಶ್ ಸಿದ್ದೀಕಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ದಾನಿಶ್ ಸಿದ್ದೀಕಿ ಪತ್ನಿ ಫ್ರೆಡ್ರಿಕ್ ಸಿದ್ದೀಕಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

“ಅವರು ಮಾಂತ್ರಿಕ ಕಣ್ಣು ಹೊಂದಿದ್ದ ವ್ಯಕ್ತಿ ಮತ್ತು ಈ ಯುಗದ ಅಗ್ರಗಣ್ಯ ಫೋಟೋ ಜರ್ನಲಿಸ್ಟ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. ಒಂದು ಚಿತ್ರವು ಸಾವಿರ ಪದಗಳನ್ನು ಹೇಳಬಲ್ಲದಾದರೆ, ಅವರ ಫೋಟೋಗಳು ಕಾದಂಬರಿಗಳಾಗಿವೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಅವರು ಸಿದ್ದೀಕಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

83 ವರ್ಷದ ಹಿರಿಯ ಪತ್ರಕರ್ತ ಪ್ರೇಮ್ ಶಂಕರ್ ಝಾ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. “ಕಠಿಣ ಪರಿಶ್ರಮ, ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಬೌದ್ಧಿಕ ಜ್ಞಾನದಿಂದ ಈ ಕ್ಷೇತ್ರದಲ್ಲಿ ಅಪಾರ ಖ್ಯಾತಿ ಗಳಿಸಿದ್ದಾರೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ, ಪ್ರೇಮ್ ಶಂಕರ್ ಝಾ ಅವರನ್ನು ಅಭಿನಂದಿಸಿದರು.

ಮುಂಬೈ ಪ್ರೆಸ್ ಕ್ಲಬ್ ಒಂದು ದಶಕದ ಹಿಂದೆ ಉತ್ತಮ ತನಿಖಾ ಮತ್ತು ವೈಶಿಷ್ಟ್ಯಪೂರ್ಣ ಬರವಣಿಗೆಯನ್ನು ಗುರುತಿಸಲು ದಿ ರೆಡ್‌ಇಂಕ್ ಪ್ರಶಸ್ತಿಗಳನ್ನು ನೀಡುತ್ತಿದೆ. ಈ ಬಾರಿಯ 10 ನೇ ಆವೃತ್ತಿಯ ಭಾಗವಾಗಿ 12 ವಿಭಾಗಗಳಲ್ಲಿ ವಿವಿಧ ಇತರ ಪತ್ರಕರ್ತರಿಗೆ ಪ್ರಶಸ್ತಿ ನೀಡಲಾಯಿತು.

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ 38 ವರ್ಷದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ಆದರೆ, ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಶ್ ಸಿದ್ದೀಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿಲ್ಲ. ಅವರ ಗುರುತನ್ನು ಪತ್ತೆ ಹಚ್ಚಿದ ಬಳಿಕ ತಾಲಿಬಾನಿಗಳು ಅವರನ್ನು “ಕ್ರೂರವಾಗಿ ಕೊಂದಿದ್ದಾರೆ” ಎಂದು ಅಮೆರಿಕದ ನಿಯತಕಾಲಿಕವೊಂದರ ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...