Homeಚಳವಳಿತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಂದ ಕೊಲ್ಲಲ್ಪಟ್ಟ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಫೋಟೋ ಜರ್ನಲಿಸ್ಟ್ ದ್ಯಾನಿಶ್ ಸಿದ್ದೀಕಿ ಅವರಿಗೆ ಮರಣೋತ್ತರವಾಗಿ ಮುಂಬೈ ಪ್ರೆಸ್ ಕ್ಲಬ್ 2020 ರ ‘ವರ್ಷದ ಪತ್ರಕರ್ತ’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಬುಧವಾರ ಮುಂಬೈ ಪ್ರೆಸ್ ಕ್ಲಬ್ ಸ್ಥಾಪಿಸಿದ ವಾರ್ಷಿಕ ‘ರೆಡ್‌ಇಂಕ್ ಅವಾರ್ಡ್ಸ್ ಫಾರ್ ಎಕ್ಸಲೆನ್ಸ್ ಇನ್ ಜರ್ನಲಿಸಂ’ ಅನ್ನು ವರ್ಚುವಲ್ ಈವೆಂಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

“ತನಿಖಾ ಮತ್ತು ಪ್ರಭಾವಶಾಲಿ ಸುದ್ದಿ ಛಾಯಾಗ್ರಹಣಕ್ಕಾಗಿ” ದಾನಿಶ್ ಸಿದ್ದೀಕಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ದಾನಿಶ್ ಸಿದ್ದೀಕಿ ಪತ್ನಿ ಫ್ರೆಡ್ರಿಕ್ ಸಿದ್ದೀಕಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

“ಅವರು ಮಾಂತ್ರಿಕ ಕಣ್ಣು ಹೊಂದಿದ್ದ ವ್ಯಕ್ತಿ ಮತ್ತು ಈ ಯುಗದ ಅಗ್ರಗಣ್ಯ ಫೋಟೋ ಜರ್ನಲಿಸ್ಟ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. ಒಂದು ಚಿತ್ರವು ಸಾವಿರ ಪದಗಳನ್ನು ಹೇಳಬಲ್ಲದಾದರೆ, ಅವರ ಫೋಟೋಗಳು ಕಾದಂಬರಿಗಳಾಗಿವೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಅವರು ಸಿದ್ದೀಕಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

83 ವರ್ಷದ ಹಿರಿಯ ಪತ್ರಕರ್ತ ಪ್ರೇಮ್ ಶಂಕರ್ ಝಾ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. “ಕಠಿಣ ಪರಿಶ್ರಮ, ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಬೌದ್ಧಿಕ ಜ್ಞಾನದಿಂದ ಈ ಕ್ಷೇತ್ರದಲ್ಲಿ ಅಪಾರ ಖ್ಯಾತಿ ಗಳಿಸಿದ್ದಾರೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ, ಪ್ರೇಮ್ ಶಂಕರ್ ಝಾ ಅವರನ್ನು ಅಭಿನಂದಿಸಿದರು.

ಮುಂಬೈ ಪ್ರೆಸ್ ಕ್ಲಬ್ ಒಂದು ದಶಕದ ಹಿಂದೆ ಉತ್ತಮ ತನಿಖಾ ಮತ್ತು ವೈಶಿಷ್ಟ್ಯಪೂರ್ಣ ಬರವಣಿಗೆಯನ್ನು ಗುರುತಿಸಲು ದಿ ರೆಡ್‌ಇಂಕ್ ಪ್ರಶಸ್ತಿಗಳನ್ನು ನೀಡುತ್ತಿದೆ. ಈ ಬಾರಿಯ 10 ನೇ ಆವೃತ್ತಿಯ ಭಾಗವಾಗಿ 12 ವಿಭಾಗಗಳಲ್ಲಿ ವಿವಿಧ ಇತರ ಪತ್ರಕರ್ತರಿಗೆ ಪ್ರಶಸ್ತಿ ನೀಡಲಾಯಿತು.

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ 38 ವರ್ಷದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ಆದರೆ, ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಶ್ ಸಿದ್ದೀಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿಲ್ಲ. ಅವರ ಗುರುತನ್ನು ಪತ್ತೆ ಹಚ್ಚಿದ ಬಳಿಕ ತಾಲಿಬಾನಿಗಳು ಅವರನ್ನು “ಕ್ರೂರವಾಗಿ ಕೊಂದಿದ್ದಾರೆ” ಎಂದು ಅಮೆರಿಕದ ನಿಯತಕಾಲಿಕವೊಂದರ ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...