Homeಫ್ಯಾಕ್ಟ್‌ಚೆಕ್ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪ್ರಧಾನಿ ಮೋದಿ ಅವರು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ತಮ್ಮ ಮೊದಲ ರ‍್ಯಾಲಿಯಲ್ಲಿ ಭಾನುವಾರ ಮಾತನಾಡಿದರು. ಆದರೆ ರ್ಯಾಲಿಗೆ ನಿರೀಕ್ಷಿತ ಸಂಖ್ಯೆಯಲ್ಲಿ ಜನರು ಭಾಗವಹಿಸಿರಲಿಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ಭಾರೀ ಜನ ಸೇರಿರುವುದಾಗಿ ಹಲವು ಫೋಟೊಗಳು ಹರಿದಾಡತೊಡಗಿದವು. ಆ ಚಿತ್ರಗಳು ಯಾವುವು ಎಂಬುದನ್ನು ಪರಿಶೀಲಿಸೋಣ.

ಚಿತ್ರ 1

ಈ ಒಂದು ಚಿತ್ರವನ್ನು ಬಿಜೆಪಿ ತಮಿಳುನಾಡು, ಬಿಜೆಪಿ ಪಂಜಾಬ್ ಮತ್ತು ಬಿಜೆಪಿ ಸದಸ್ಯರಾದ ತಾಜಿಂದರ್ ಬಗ್ಗಾ, ಎಸ್‌ಜಿ ಸೂರ್ಯ, ಭನು ಜಲನ್ ಮತ್ತು ಒಪಿ ಮಿಶ್ರಾ ಹಂಚಿಕೊಂಡಿದ್ದಾರೆ.

ಕಳೆದ ವಾರ ಕಾಂಗ್ರೆಸ್, ಸಿಪಿಐ (ಎಂ) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ ಜಂಟಿ ರ‍್ಯಾಲಿ ನಡೆದಿತ್ತು. ಆಗಲೂ ಹಲವಾರು ಕಾಂಗ್ರೆಸ್ ಬೆಂಬಲಿಗರು ಇದೇ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂಬುದು ವಿಶೇಷ.

ಫ್ಯಾಕ್ಟ್-ಚೆಕ್

ಆಲ್ಟ್ ನ್ಯೂಸ್ ನಡೆಸಿದ ರಿವರ್ಸ್ ಇಮೇಜ್ ಹುಡುಕಾಟದ ಪ್ರಕಾರ, ಪ್ರಚಲಿತದಲ್ಲಿ ಬಿಜೆಪಿ ಬಳಸುತ್ತಿರುವ ಈ ಚಿತ್ರವು 2019ರಲ್ಲಿ ಎಡಪಂಥೀಯ ನೇತೃತ್ವದ ರಂಗ ನಡೆಸಿದ ಬೃಹತ್ ರ‍್ಯಾಲಿಯ ಚಿತ್ರವಾಗಿದೆ.

ಈ ಚಿತ್ರವನ್ನು 2019 ರಲ್ಲಿ ಸೋಷಿಯಲ್ ನ್ಯೂಸ್ XYZ ಪ್ರಕಟಿಸಿತು, ಇದು ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಎಡರಂಗ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಚಿತ್ರ ಎಂಬುದು ಸ್ಪಷ್ಟವಾಗಿದೆ. ಹಾಗೆಯೇ ಶೀರ್ಷಿಕೆಯೊಂದಿಗೆ ಅದು ಪ್ರಕಟಿಸಿದೆ. ಫೆಬ್ರವರಿ 3, 2019ರಂದು ನಡೆದ ಈ ರ‍್ಯಾಲಿಯ ಚಿತ್ರವನ್ನು ಐಎಎನ್‌ಎಸ್ ಪ್ರಕಟಿಸಿದೆ ಎಂದು ವರದಿ ಹೇಳುತ್ತದೆ.

ಚಿತ್ರವು ಭಾರಿ ಜನಸಮೂಹವನ್ನು ತೋರಿಸುತ್ತದೆ, ಇದನ್ನು ಮುಂಭಾಗದ ಎಡ ಪಕ್ಷಗಳ ಕೆಂಪು ಧ್ವಜಗಳಿಂದ ಗುರುತಿಸಲಾಗಿದೆ. ಬಿಜೆಪಿ ಬೆಂಬಲಿಗರು ಟ್ವೀಟ್ ಮಾಡಿದ ಚಿತ್ರವು ಸ್ವಲ್ಪ ಮಸುಕಾದ ಆವೃತ್ತಿಯಾಗಿದ್ದು, ಕೆಂಪು ಬಣ್ಣವನ್ನು ಕೇಸರಿ ಎಂದು ತಪ್ಪಾಗಿ ಗ್ರಹಿಸುವಂತೆ ಮಾಡಲಾಗಿದೆ.

ಚಿತ್ರ 2

ಎರಡನೇ ಚಿತ್ರವನ್ನು ಬಿಜೆಪಿ ಸದಸ್ಯ ಒ.ಪಿ.ಮಿಶ್ರಾ ಅವರು “ಹೌ ಜೋಶ್” ಎಂದು ಉತ್ಸುಕರಿತರಾಗಿ ಹೇಳಿ, ಶೇರ್ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ರಿವರ್ಸ್ ಇಮೇಜ್ ಹುಡುಕಾಟವು ಈ ಚಿತ್ರವು 2014 ರಲ್ಲಿ ಎಡಪಂಥಿಯ ನೇತೃತ್ವದ ಬೃಹತ್ ರ‍್ಯಾಲಿಯನ್ನು ಪ್ರತಿನಿಧಿಸುತ್ತದೆ ಎಂದು ಸಾಬೀತು ಮಾಡಿದೆ.

ಫೇಕ್ ನ್ಯೂಸ್ ಹೆಚ್ಚಳವು ಚುನಾವಣೆಗಳ ಮೊದಲು ಕಂಡುಬರುವುದು ಸಾಮಾನ್ಯ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಇದಕ್ಕೆ ಹೊರತಾಗಿಲ್ಲ. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಪಿಎಂ ಮೋದಿಯವರ ಭಾಷಣಕ್ಕೆ ಹೆಚ್ಚಿನ ಜನಸಮೂಹ ಸೇರದಿರುವುದು ಗಮನಾರ್ಹವಾಗಿದೆ. ಮೂರು ರೈಲು ಬಾಡಿಗೆ ಪಡೆದು ಜನರನ್ನು ತಂದರೂ ಅಲ್ಲಿ ದೊಡ್ಡ ಜನಸಂದಣಿ ಇರಲೇ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...