Homeಫ್ಯಾಕ್ಟ್‌ಚೆಕ್ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪ್ರಧಾನಿ ಮೋದಿ ಅವರು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ತಮ್ಮ ಮೊದಲ ರ‍್ಯಾಲಿಯಲ್ಲಿ ಭಾನುವಾರ ಮಾತನಾಡಿದರು. ಆದರೆ ರ್ಯಾಲಿಗೆ ನಿರೀಕ್ಷಿತ ಸಂಖ್ಯೆಯಲ್ಲಿ ಜನರು ಭಾಗವಹಿಸಿರಲಿಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ಭಾರೀ ಜನ ಸೇರಿರುವುದಾಗಿ ಹಲವು ಫೋಟೊಗಳು ಹರಿದಾಡತೊಡಗಿದವು. ಆ ಚಿತ್ರಗಳು ಯಾವುವು ಎಂಬುದನ್ನು ಪರಿಶೀಲಿಸೋಣ.

ಚಿತ್ರ 1

ಈ ಒಂದು ಚಿತ್ರವನ್ನು ಬಿಜೆಪಿ ತಮಿಳುನಾಡು, ಬಿಜೆಪಿ ಪಂಜಾಬ್ ಮತ್ತು ಬಿಜೆಪಿ ಸದಸ್ಯರಾದ ತಾಜಿಂದರ್ ಬಗ್ಗಾ, ಎಸ್‌ಜಿ ಸೂರ್ಯ, ಭನು ಜಲನ್ ಮತ್ತು ಒಪಿ ಮಿಶ್ರಾ ಹಂಚಿಕೊಂಡಿದ್ದಾರೆ.

ಕಳೆದ ವಾರ ಕಾಂಗ್ರೆಸ್, ಸಿಪಿಐ (ಎಂ) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ ಜಂಟಿ ರ‍್ಯಾಲಿ ನಡೆದಿತ್ತು. ಆಗಲೂ ಹಲವಾರು ಕಾಂಗ್ರೆಸ್ ಬೆಂಬಲಿಗರು ಇದೇ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂಬುದು ವಿಶೇಷ.

ಫ್ಯಾಕ್ಟ್-ಚೆಕ್

ಆಲ್ಟ್ ನ್ಯೂಸ್ ನಡೆಸಿದ ರಿವರ್ಸ್ ಇಮೇಜ್ ಹುಡುಕಾಟದ ಪ್ರಕಾರ, ಪ್ರಚಲಿತದಲ್ಲಿ ಬಿಜೆಪಿ ಬಳಸುತ್ತಿರುವ ಈ ಚಿತ್ರವು 2019ರಲ್ಲಿ ಎಡಪಂಥೀಯ ನೇತೃತ್ವದ ರಂಗ ನಡೆಸಿದ ಬೃಹತ್ ರ‍್ಯಾಲಿಯ ಚಿತ್ರವಾಗಿದೆ.

ಈ ಚಿತ್ರವನ್ನು 2019 ರಲ್ಲಿ ಸೋಷಿಯಲ್ ನ್ಯೂಸ್ XYZ ಪ್ರಕಟಿಸಿತು, ಇದು ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಎಡರಂಗ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಚಿತ್ರ ಎಂಬುದು ಸ್ಪಷ್ಟವಾಗಿದೆ. ಹಾಗೆಯೇ ಶೀರ್ಷಿಕೆಯೊಂದಿಗೆ ಅದು ಪ್ರಕಟಿಸಿದೆ. ಫೆಬ್ರವರಿ 3, 2019ರಂದು ನಡೆದ ಈ ರ‍್ಯಾಲಿಯ ಚಿತ್ರವನ್ನು ಐಎಎನ್‌ಎಸ್ ಪ್ರಕಟಿಸಿದೆ ಎಂದು ವರದಿ ಹೇಳುತ್ತದೆ.

ಚಿತ್ರವು ಭಾರಿ ಜನಸಮೂಹವನ್ನು ತೋರಿಸುತ್ತದೆ, ಇದನ್ನು ಮುಂಭಾಗದ ಎಡ ಪಕ್ಷಗಳ ಕೆಂಪು ಧ್ವಜಗಳಿಂದ ಗುರುತಿಸಲಾಗಿದೆ. ಬಿಜೆಪಿ ಬೆಂಬಲಿಗರು ಟ್ವೀಟ್ ಮಾಡಿದ ಚಿತ್ರವು ಸ್ವಲ್ಪ ಮಸುಕಾದ ಆವೃತ್ತಿಯಾಗಿದ್ದು, ಕೆಂಪು ಬಣ್ಣವನ್ನು ಕೇಸರಿ ಎಂದು ತಪ್ಪಾಗಿ ಗ್ರಹಿಸುವಂತೆ ಮಾಡಲಾಗಿದೆ.

ಚಿತ್ರ 2

ಎರಡನೇ ಚಿತ್ರವನ್ನು ಬಿಜೆಪಿ ಸದಸ್ಯ ಒ.ಪಿ.ಮಿಶ್ರಾ ಅವರು “ಹೌ ಜೋಶ್” ಎಂದು ಉತ್ಸುಕರಿತರಾಗಿ ಹೇಳಿ, ಶೇರ್ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ರಿವರ್ಸ್ ಇಮೇಜ್ ಹುಡುಕಾಟವು ಈ ಚಿತ್ರವು 2014 ರಲ್ಲಿ ಎಡಪಂಥಿಯ ನೇತೃತ್ವದ ಬೃಹತ್ ರ‍್ಯಾಲಿಯನ್ನು ಪ್ರತಿನಿಧಿಸುತ್ತದೆ ಎಂದು ಸಾಬೀತು ಮಾಡಿದೆ.

ಫೇಕ್ ನ್ಯೂಸ್ ಹೆಚ್ಚಳವು ಚುನಾವಣೆಗಳ ಮೊದಲು ಕಂಡುಬರುವುದು ಸಾಮಾನ್ಯ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಇದಕ್ಕೆ ಹೊರತಾಗಿಲ್ಲ. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಪಿಎಂ ಮೋದಿಯವರ ಭಾಷಣಕ್ಕೆ ಹೆಚ್ಚಿನ ಜನಸಮೂಹ ಸೇರದಿರುವುದು ಗಮನಾರ್ಹವಾಗಿದೆ. ಮೂರು ರೈಲು ಬಾಡಿಗೆ ಪಡೆದು ಜನರನ್ನು ತಂದರೂ ಅಲ್ಲಿ ದೊಡ್ಡ ಜನಸಂದಣಿ ಇರಲೇ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...