Homeಫ್ಯಾಕ್ಟ್‌ಚೆಕ್ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪ್ರಧಾನಿ ಮೋದಿ ಅವರು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ತಮ್ಮ ಮೊದಲ ರ‍್ಯಾಲಿಯಲ್ಲಿ ಭಾನುವಾರ ಮಾತನಾಡಿದರು. ಆದರೆ ರ್ಯಾಲಿಗೆ ನಿರೀಕ್ಷಿತ ಸಂಖ್ಯೆಯಲ್ಲಿ ಜನರು ಭಾಗವಹಿಸಿರಲಿಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ಭಾರೀ ಜನ ಸೇರಿರುವುದಾಗಿ ಹಲವು ಫೋಟೊಗಳು ಹರಿದಾಡತೊಡಗಿದವು. ಆ ಚಿತ್ರಗಳು ಯಾವುವು ಎಂಬುದನ್ನು ಪರಿಶೀಲಿಸೋಣ.

ಚಿತ್ರ 1

ಈ ಒಂದು ಚಿತ್ರವನ್ನು ಬಿಜೆಪಿ ತಮಿಳುನಾಡು, ಬಿಜೆಪಿ ಪಂಜಾಬ್ ಮತ್ತು ಬಿಜೆಪಿ ಸದಸ್ಯರಾದ ತಾಜಿಂದರ್ ಬಗ್ಗಾ, ಎಸ್‌ಜಿ ಸೂರ್ಯ, ಭನು ಜಲನ್ ಮತ್ತು ಒಪಿ ಮಿಶ್ರಾ ಹಂಚಿಕೊಂಡಿದ್ದಾರೆ.

ಕಳೆದ ವಾರ ಕಾಂಗ್ರೆಸ್, ಸಿಪಿಐ (ಎಂ) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ ಜಂಟಿ ರ‍್ಯಾಲಿ ನಡೆದಿತ್ತು. ಆಗಲೂ ಹಲವಾರು ಕಾಂಗ್ರೆಸ್ ಬೆಂಬಲಿಗರು ಇದೇ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂಬುದು ವಿಶೇಷ.

ಫ್ಯಾಕ್ಟ್-ಚೆಕ್

ಆಲ್ಟ್ ನ್ಯೂಸ್ ನಡೆಸಿದ ರಿವರ್ಸ್ ಇಮೇಜ್ ಹುಡುಕಾಟದ ಪ್ರಕಾರ, ಪ್ರಚಲಿತದಲ್ಲಿ ಬಿಜೆಪಿ ಬಳಸುತ್ತಿರುವ ಈ ಚಿತ್ರವು 2019ರಲ್ಲಿ ಎಡಪಂಥೀಯ ನೇತೃತ್ವದ ರಂಗ ನಡೆಸಿದ ಬೃಹತ್ ರ‍್ಯಾಲಿಯ ಚಿತ್ರವಾಗಿದೆ.

ಈ ಚಿತ್ರವನ್ನು 2019 ರಲ್ಲಿ ಸೋಷಿಯಲ್ ನ್ಯೂಸ್ XYZ ಪ್ರಕಟಿಸಿತು, ಇದು ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಎಡರಂಗ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಚಿತ್ರ ಎಂಬುದು ಸ್ಪಷ್ಟವಾಗಿದೆ. ಹಾಗೆಯೇ ಶೀರ್ಷಿಕೆಯೊಂದಿಗೆ ಅದು ಪ್ರಕಟಿಸಿದೆ. ಫೆಬ್ರವರಿ 3, 2019ರಂದು ನಡೆದ ಈ ರ‍್ಯಾಲಿಯ ಚಿತ್ರವನ್ನು ಐಎಎನ್‌ಎಸ್ ಪ್ರಕಟಿಸಿದೆ ಎಂದು ವರದಿ ಹೇಳುತ್ತದೆ.

ಚಿತ್ರವು ಭಾರಿ ಜನಸಮೂಹವನ್ನು ತೋರಿಸುತ್ತದೆ, ಇದನ್ನು ಮುಂಭಾಗದ ಎಡ ಪಕ್ಷಗಳ ಕೆಂಪು ಧ್ವಜಗಳಿಂದ ಗುರುತಿಸಲಾಗಿದೆ. ಬಿಜೆಪಿ ಬೆಂಬಲಿಗರು ಟ್ವೀಟ್ ಮಾಡಿದ ಚಿತ್ರವು ಸ್ವಲ್ಪ ಮಸುಕಾದ ಆವೃತ್ತಿಯಾಗಿದ್ದು, ಕೆಂಪು ಬಣ್ಣವನ್ನು ಕೇಸರಿ ಎಂದು ತಪ್ಪಾಗಿ ಗ್ರಹಿಸುವಂತೆ ಮಾಡಲಾಗಿದೆ.

ಚಿತ್ರ 2

ಎರಡನೇ ಚಿತ್ರವನ್ನು ಬಿಜೆಪಿ ಸದಸ್ಯ ಒ.ಪಿ.ಮಿಶ್ರಾ ಅವರು “ಹೌ ಜೋಶ್” ಎಂದು ಉತ್ಸುಕರಿತರಾಗಿ ಹೇಳಿ, ಶೇರ್ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ರಿವರ್ಸ್ ಇಮೇಜ್ ಹುಡುಕಾಟವು ಈ ಚಿತ್ರವು 2014 ರಲ್ಲಿ ಎಡಪಂಥಿಯ ನೇತೃತ್ವದ ಬೃಹತ್ ರ‍್ಯಾಲಿಯನ್ನು ಪ್ರತಿನಿಧಿಸುತ್ತದೆ ಎಂದು ಸಾಬೀತು ಮಾಡಿದೆ.

ಫೇಕ್ ನ್ಯೂಸ್ ಹೆಚ್ಚಳವು ಚುನಾವಣೆಗಳ ಮೊದಲು ಕಂಡುಬರುವುದು ಸಾಮಾನ್ಯ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಇದಕ್ಕೆ ಹೊರತಾಗಿಲ್ಲ. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಪಿಎಂ ಮೋದಿಯವರ ಭಾಷಣಕ್ಕೆ ಹೆಚ್ಚಿನ ಜನಸಮೂಹ ಸೇರದಿರುವುದು ಗಮನಾರ್ಹವಾಗಿದೆ. ಮೂರು ರೈಲು ಬಾಡಿಗೆ ಪಡೆದು ಜನರನ್ನು ತಂದರೂ ಅಲ್ಲಿ ದೊಡ್ಡ ಜನಸಂದಣಿ ಇರಲೇ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...