Homeಮುಖಪುಟಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್...

ಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್ ಪ್ರತಿಭಟನೆ

- Advertisement -
- Advertisement -

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ‘ಹಲ್ಲಾ ಬೋಲ್’ ಪ್ರತಿಭಟನೆ ಆಯೋಜಿಸಿದೆ. ಪ್ರತಿಭಟನಾ ಮೆರವಣಿಗೆ ಶನಿವಾರ ಆರಂಭವಾಗಿದೆ.

ಮಧ್ಯಾಹ್ನದ ಸುಮಾರಿಗೆ ಬೈಕುಲ್ಲಾದ ಜೆಜೆ ಆಸ್ಪತ್ರೆ ಬಳಿಯ ಕಂಪನಿಯಿಂದ ಆರಂಭವಾದ ಪಾದಯಾತ್ರೆ, ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಾಡಿರುವ ಅವಮಾನ ಸೇರಿದಂತೆ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮತ್ತು ರಾಜ್ಯದ ಯೋಜನೆಗಳನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸುತ್ತಿರುವ ಬಗ್ಗೆಯೂ ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಾಗಿದೆ.

ಈ ವರ್ಷದ ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಿದ ನಂತರದಲ್ಲಿ ಎಂವಿಎ ಆಯೋಜಿಸಿರುವ ಈ ಪ್ರತಿಭಟನೆಯು ಮಿತ್ರಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವೆಂದೇ ರಾಜಕೀಯ ವಿಶ್ಲೇಷಕರು ಬಣ್ಣಿಸಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ ಪಕ್ಷಗಳ ನಾಯಕರು, ಕಾರ್ಯಕರ್ತರು ಬೆಳಿಗ್ಗೆಯಿಂದಲೇ ಜೆಜೆ ಆಸ್ಪತ್ರೆ ಬಳಿ ಜಮಾಯಿಸಲಾರಂಭಿಸಿದ್ದರು.

ಮಧ್ಯಾಹ್ನದ ಸುಮಾರಿಗೆ ಮೆರವಣಿಗೆ ಪ್ರಾರಂಭವಾದಾಗ, ಅವರು ಬ್ಯಾನರ್‌ಗಳನ್ನು, ಫಲಕಗಳನ್ನು, ಶಿವಾಜಿ ಮಹಾರಾಜ ಮತ್ತು ಫುಲೆ ದಂಪತಿಯ ಚಿತ್ರಗಳನ್ನು ಹಿಡಿದು ನಡೆದರು.

ಮೆರವಣಿಗೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿಯ ಹಿರಿಯ ನಾಯಕ ಸುನೀಲ್ ತಾಟ್ಕರೆ, “ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕೆಲವು ಭಾಗಗಳಲ್ಲಿ ಹಕ್ಕು ಸಾಧಿಸುವ ಮೂಲಕ ಮಹಾರಾಷ್ಟ್ರವನ್ನು ಅವಮಾನಿಸಿದ್ದಾರೆ, ಆದರೆ ಶಿಂಧೆ ಸರ್ಕಾರವು ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ” ಎಂದು ದೂರಿದರು.

“ಎಂವಿಎಯ ಮೆರವಣಿಗೆಯನ್ನು ಎದುರಿಸಲು, ಮುಂಬೈನ ಎಲ್ಲಾ ಆರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ “ಮಾಫಿ ಮಾಂಗೋ” ಪ್ರತಿಭಟನೆಗಳನ್ನು ನಡೆಸುತ್ತಿದೆ. ಉದ್ಧವ್ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮಸ್ಥಳದ ಬಗ್ಗೆ, ಪಕ್ಷದ ನಾಯಕಿ ಸುಷ್ಮಾ ಅಂಧರೆ ಹಿಂದೂ ದೇವತೆಗಳನ್ನು ಮತ್ತು ಸಂತರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಎಂವಿಎ ನಾಯಕರು, ವಿಶೇಷವಾಗಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಮಾತನಾಡಿ, “ಪ್ರತಿಭಟನಾ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಲಿದ್ದು, ಈ ಕಾರಣಕ್ಕಾಗಿ ಬಿಜೆಪಿ ಗಮನ ಬೇರೆಡೆ ಸೆಳೆಯಲು ಗಿಮಿಕ್ ಮಾಡುತ್ತಿದೆ’’ ಎಂದು ವ್ಯಂಗ್ಯವಾಡಿದೆ.

ಹೋರಾಟದ ಕುರಿತು ಟ್ವೀಟ್‌ಗಳನ್ನು ಮಾಡಿರುವ ಶಿವಸೇನಾ ಯುವ ನಾಯಕ ಆದಿತ್ಯಾ ಠಾಕ್ರೆ, “ಮಹಾರಾಷ್ಟ್ರ ದ್ರೋಹಿಗಳ ವಿರುದ್ಧ ಎಂವಿಎ ಮಹಾಯಾತ್ರೆ ನಡೆಯಿತು. ಅದೊಂದು ಅಗಾಧ ಅನುಭವ. ಮಹಾರಾಷ್ಟ್ರದ ಮೇಲೆ ಪ್ರೀತಿ ಇರುವ ಲಕ್ಷಾಂತರ ಜನರು ಇದರಲ್ಲಿ ಭಾಗವಹಿಸಿದ್ದರು. ಇದು ಜನಸಾಮಾನ್ಯರ ಹೋರಾಟ” ಎಂದು ಬಣ್ಣಿಸಿದ್ದಾರೆ.

“ಸ್ವಾರ್ಥಕ್ಕಿಂತ ಆತ್ಮಗೌರವವೇ ಮುಖ್ಯ ಎಂಬುದಕ್ಕೆ ಇಂದಿನ ಮಹಾ ಮೆರವಣಿಗೆಯಲ್ಲಿ ನೆರೆದಿದ್ದ ಅಪಾರ ಜನಸ್ತೋಮವೇ ಸಾಕ್ಷಿ. ಆಸೆಗಳಿಗಿಂತ ಮಹಾರಾಷ್ಟ್ರದ ಪ್ರೀತಿ ದೊಡ್ಡದು. ಅಧಿಕಾರಕ್ಕಿಂತ ಹೆಚ್ಚು ಶಕ್ತಿಶಾಲಿ ಮಹಾರಾಷ್ಟ್ರದ ಜನರು. ಮಹಾರಾಷ್ಟ್ರದ ದ್ರೋಹಿಗಳನ್ನು ಅಧಿಕಾರದಿಂದ ಕೆಳಗಿಳಿಸಲು ಮಹಾರಾಷ್ಟ್ರ ಎಚ್ಚೆತ್ತುಕೊಂಡಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿ.ಎಂಲಿಂಗಪ್ಪ ಅವರು ನಿಗಮದ ಅಧ್ಯಕ್ಷರಾಗಿದ್ದರಷ್ಟೆ, ಸಚಿವ ಸ್ಥಾನ ದೊರೆತಿರಲಿಲ್ಲ. ಸಚಿವ ಸ್ಥಾನ ಕೇಳಿದ ಲಿಂಗಪ್ಪ ಅವರಿಗೆ ನಿಮ್ಮ ಹೆಸರಲ್ಲೇ ಸಿಎಂ ಇದೆ, ನಿಮಗ್ಯಾಕೆ ಸಚಿವ ಸ್ಥಾನ ಎಂದಿದ್ದರಂತೆ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...