Homeಮುಖಪುಟಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್...

ಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್ ಪ್ರತಿಭಟನೆ

- Advertisement -
- Advertisement -

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ‘ಹಲ್ಲಾ ಬೋಲ್’ ಪ್ರತಿಭಟನೆ ಆಯೋಜಿಸಿದೆ. ಪ್ರತಿಭಟನಾ ಮೆರವಣಿಗೆ ಶನಿವಾರ ಆರಂಭವಾಗಿದೆ.

ಮಧ್ಯಾಹ್ನದ ಸುಮಾರಿಗೆ ಬೈಕುಲ್ಲಾದ ಜೆಜೆ ಆಸ್ಪತ್ರೆ ಬಳಿಯ ಕಂಪನಿಯಿಂದ ಆರಂಭವಾದ ಪಾದಯಾತ್ರೆ, ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಾಡಿರುವ ಅವಮಾನ ಸೇರಿದಂತೆ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮತ್ತು ರಾಜ್ಯದ ಯೋಜನೆಗಳನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸುತ್ತಿರುವ ಬಗ್ಗೆಯೂ ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಾಗಿದೆ.

ಈ ವರ್ಷದ ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಿದ ನಂತರದಲ್ಲಿ ಎಂವಿಎ ಆಯೋಜಿಸಿರುವ ಈ ಪ್ರತಿಭಟನೆಯು ಮಿತ್ರಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವೆಂದೇ ರಾಜಕೀಯ ವಿಶ್ಲೇಷಕರು ಬಣ್ಣಿಸಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ ಪಕ್ಷಗಳ ನಾಯಕರು, ಕಾರ್ಯಕರ್ತರು ಬೆಳಿಗ್ಗೆಯಿಂದಲೇ ಜೆಜೆ ಆಸ್ಪತ್ರೆ ಬಳಿ ಜಮಾಯಿಸಲಾರಂಭಿಸಿದ್ದರು.

ಮಧ್ಯಾಹ್ನದ ಸುಮಾರಿಗೆ ಮೆರವಣಿಗೆ ಪ್ರಾರಂಭವಾದಾಗ, ಅವರು ಬ್ಯಾನರ್‌ಗಳನ್ನು, ಫಲಕಗಳನ್ನು, ಶಿವಾಜಿ ಮಹಾರಾಜ ಮತ್ತು ಫುಲೆ ದಂಪತಿಯ ಚಿತ್ರಗಳನ್ನು ಹಿಡಿದು ನಡೆದರು.

ಮೆರವಣಿಗೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿಯ ಹಿರಿಯ ನಾಯಕ ಸುನೀಲ್ ತಾಟ್ಕರೆ, “ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕೆಲವು ಭಾಗಗಳಲ್ಲಿ ಹಕ್ಕು ಸಾಧಿಸುವ ಮೂಲಕ ಮಹಾರಾಷ್ಟ್ರವನ್ನು ಅವಮಾನಿಸಿದ್ದಾರೆ, ಆದರೆ ಶಿಂಧೆ ಸರ್ಕಾರವು ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ” ಎಂದು ದೂರಿದರು.

“ಎಂವಿಎಯ ಮೆರವಣಿಗೆಯನ್ನು ಎದುರಿಸಲು, ಮುಂಬೈನ ಎಲ್ಲಾ ಆರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ “ಮಾಫಿ ಮಾಂಗೋ” ಪ್ರತಿಭಟನೆಗಳನ್ನು ನಡೆಸುತ್ತಿದೆ. ಉದ್ಧವ್ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮಸ್ಥಳದ ಬಗ್ಗೆ, ಪಕ್ಷದ ನಾಯಕಿ ಸುಷ್ಮಾ ಅಂಧರೆ ಹಿಂದೂ ದೇವತೆಗಳನ್ನು ಮತ್ತು ಸಂತರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಎಂವಿಎ ನಾಯಕರು, ವಿಶೇಷವಾಗಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಮಾತನಾಡಿ, “ಪ್ರತಿಭಟನಾ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಲಿದ್ದು, ಈ ಕಾರಣಕ್ಕಾಗಿ ಬಿಜೆಪಿ ಗಮನ ಬೇರೆಡೆ ಸೆಳೆಯಲು ಗಿಮಿಕ್ ಮಾಡುತ್ತಿದೆ’’ ಎಂದು ವ್ಯಂಗ್ಯವಾಡಿದೆ.

ಹೋರಾಟದ ಕುರಿತು ಟ್ವೀಟ್‌ಗಳನ್ನು ಮಾಡಿರುವ ಶಿವಸೇನಾ ಯುವ ನಾಯಕ ಆದಿತ್ಯಾ ಠಾಕ್ರೆ, “ಮಹಾರಾಷ್ಟ್ರ ದ್ರೋಹಿಗಳ ವಿರುದ್ಧ ಎಂವಿಎ ಮಹಾಯಾತ್ರೆ ನಡೆಯಿತು. ಅದೊಂದು ಅಗಾಧ ಅನುಭವ. ಮಹಾರಾಷ್ಟ್ರದ ಮೇಲೆ ಪ್ರೀತಿ ಇರುವ ಲಕ್ಷಾಂತರ ಜನರು ಇದರಲ್ಲಿ ಭಾಗವಹಿಸಿದ್ದರು. ಇದು ಜನಸಾಮಾನ್ಯರ ಹೋರಾಟ” ಎಂದು ಬಣ್ಣಿಸಿದ್ದಾರೆ.

“ಸ್ವಾರ್ಥಕ್ಕಿಂತ ಆತ್ಮಗೌರವವೇ ಮುಖ್ಯ ಎಂಬುದಕ್ಕೆ ಇಂದಿನ ಮಹಾ ಮೆರವಣಿಗೆಯಲ್ಲಿ ನೆರೆದಿದ್ದ ಅಪಾರ ಜನಸ್ತೋಮವೇ ಸಾಕ್ಷಿ. ಆಸೆಗಳಿಗಿಂತ ಮಹಾರಾಷ್ಟ್ರದ ಪ್ರೀತಿ ದೊಡ್ಡದು. ಅಧಿಕಾರಕ್ಕಿಂತ ಹೆಚ್ಚು ಶಕ್ತಿಶಾಲಿ ಮಹಾರಾಷ್ಟ್ರದ ಜನರು. ಮಹಾರಾಷ್ಟ್ರದ ದ್ರೋಹಿಗಳನ್ನು ಅಧಿಕಾರದಿಂದ ಕೆಳಗಿಳಿಸಲು ಮಹಾರಾಷ್ಟ್ರ ಎಚ್ಚೆತ್ತುಕೊಂಡಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿ.ಎಂಲಿಂಗಪ್ಪ ಅವರು ನಿಗಮದ ಅಧ್ಯಕ್ಷರಾಗಿದ್ದರಷ್ಟೆ, ಸಚಿವ ಸ್ಥಾನ ದೊರೆತಿರಲಿಲ್ಲ. ಸಚಿವ ಸ್ಥಾನ ಕೇಳಿದ ಲಿಂಗಪ್ಪ ಅವರಿಗೆ ನಿಮ್ಮ ಹೆಸರಲ್ಲೇ ಸಿಎಂ ಇದೆ, ನಿಮಗ್ಯಾಕೆ ಸಚಿವ ಸ್ಥಾನ ಎಂದಿದ್ದರಂತೆ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...