Homeಮುಖಪುಟಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್...

ಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್ ಪ್ರತಿಭಟನೆ

- Advertisement -
- Advertisement -

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ‘ಹಲ್ಲಾ ಬೋಲ್’ ಪ್ರತಿಭಟನೆ ಆಯೋಜಿಸಿದೆ. ಪ್ರತಿಭಟನಾ ಮೆರವಣಿಗೆ ಶನಿವಾರ ಆರಂಭವಾಗಿದೆ.

ಮಧ್ಯಾಹ್ನದ ಸುಮಾರಿಗೆ ಬೈಕುಲ್ಲಾದ ಜೆಜೆ ಆಸ್ಪತ್ರೆ ಬಳಿಯ ಕಂಪನಿಯಿಂದ ಆರಂಭವಾದ ಪಾದಯಾತ್ರೆ, ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಾಡಿರುವ ಅವಮಾನ ಸೇರಿದಂತೆ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮತ್ತು ರಾಜ್ಯದ ಯೋಜನೆಗಳನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸುತ್ತಿರುವ ಬಗ್ಗೆಯೂ ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಾಗಿದೆ.

ಈ ವರ್ಷದ ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಿದ ನಂತರದಲ್ಲಿ ಎಂವಿಎ ಆಯೋಜಿಸಿರುವ ಈ ಪ್ರತಿಭಟನೆಯು ಮಿತ್ರಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವೆಂದೇ ರಾಜಕೀಯ ವಿಶ್ಲೇಷಕರು ಬಣ್ಣಿಸಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ ಪಕ್ಷಗಳ ನಾಯಕರು, ಕಾರ್ಯಕರ್ತರು ಬೆಳಿಗ್ಗೆಯಿಂದಲೇ ಜೆಜೆ ಆಸ್ಪತ್ರೆ ಬಳಿ ಜಮಾಯಿಸಲಾರಂಭಿಸಿದ್ದರು.

ಮಧ್ಯಾಹ್ನದ ಸುಮಾರಿಗೆ ಮೆರವಣಿಗೆ ಪ್ರಾರಂಭವಾದಾಗ, ಅವರು ಬ್ಯಾನರ್‌ಗಳನ್ನು, ಫಲಕಗಳನ್ನು, ಶಿವಾಜಿ ಮಹಾರಾಜ ಮತ್ತು ಫುಲೆ ದಂಪತಿಯ ಚಿತ್ರಗಳನ್ನು ಹಿಡಿದು ನಡೆದರು.

ಮೆರವಣಿಗೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿಯ ಹಿರಿಯ ನಾಯಕ ಸುನೀಲ್ ತಾಟ್ಕರೆ, “ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕೆಲವು ಭಾಗಗಳಲ್ಲಿ ಹಕ್ಕು ಸಾಧಿಸುವ ಮೂಲಕ ಮಹಾರಾಷ್ಟ್ರವನ್ನು ಅವಮಾನಿಸಿದ್ದಾರೆ, ಆದರೆ ಶಿಂಧೆ ಸರ್ಕಾರವು ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ” ಎಂದು ದೂರಿದರು.

“ಎಂವಿಎಯ ಮೆರವಣಿಗೆಯನ್ನು ಎದುರಿಸಲು, ಮುಂಬೈನ ಎಲ್ಲಾ ಆರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ “ಮಾಫಿ ಮಾಂಗೋ” ಪ್ರತಿಭಟನೆಗಳನ್ನು ನಡೆಸುತ್ತಿದೆ. ಉದ್ಧವ್ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮಸ್ಥಳದ ಬಗ್ಗೆ, ಪಕ್ಷದ ನಾಯಕಿ ಸುಷ್ಮಾ ಅಂಧರೆ ಹಿಂದೂ ದೇವತೆಗಳನ್ನು ಮತ್ತು ಸಂತರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಎಂವಿಎ ನಾಯಕರು, ವಿಶೇಷವಾಗಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಮಾತನಾಡಿ, “ಪ್ರತಿಭಟನಾ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಲಿದ್ದು, ಈ ಕಾರಣಕ್ಕಾಗಿ ಬಿಜೆಪಿ ಗಮನ ಬೇರೆಡೆ ಸೆಳೆಯಲು ಗಿಮಿಕ್ ಮಾಡುತ್ತಿದೆ’’ ಎಂದು ವ್ಯಂಗ್ಯವಾಡಿದೆ.

ಹೋರಾಟದ ಕುರಿತು ಟ್ವೀಟ್‌ಗಳನ್ನು ಮಾಡಿರುವ ಶಿವಸೇನಾ ಯುವ ನಾಯಕ ಆದಿತ್ಯಾ ಠಾಕ್ರೆ, “ಮಹಾರಾಷ್ಟ್ರ ದ್ರೋಹಿಗಳ ವಿರುದ್ಧ ಎಂವಿಎ ಮಹಾಯಾತ್ರೆ ನಡೆಯಿತು. ಅದೊಂದು ಅಗಾಧ ಅನುಭವ. ಮಹಾರಾಷ್ಟ್ರದ ಮೇಲೆ ಪ್ರೀತಿ ಇರುವ ಲಕ್ಷಾಂತರ ಜನರು ಇದರಲ್ಲಿ ಭಾಗವಹಿಸಿದ್ದರು. ಇದು ಜನಸಾಮಾನ್ಯರ ಹೋರಾಟ” ಎಂದು ಬಣ್ಣಿಸಿದ್ದಾರೆ.

“ಸ್ವಾರ್ಥಕ್ಕಿಂತ ಆತ್ಮಗೌರವವೇ ಮುಖ್ಯ ಎಂಬುದಕ್ಕೆ ಇಂದಿನ ಮಹಾ ಮೆರವಣಿಗೆಯಲ್ಲಿ ನೆರೆದಿದ್ದ ಅಪಾರ ಜನಸ್ತೋಮವೇ ಸಾಕ್ಷಿ. ಆಸೆಗಳಿಗಿಂತ ಮಹಾರಾಷ್ಟ್ರದ ಪ್ರೀತಿ ದೊಡ್ಡದು. ಅಧಿಕಾರಕ್ಕಿಂತ ಹೆಚ್ಚು ಶಕ್ತಿಶಾಲಿ ಮಹಾರಾಷ್ಟ್ರದ ಜನರು. ಮಹಾರಾಷ್ಟ್ರದ ದ್ರೋಹಿಗಳನ್ನು ಅಧಿಕಾರದಿಂದ ಕೆಳಗಿಳಿಸಲು ಮಹಾರಾಷ್ಟ್ರ ಎಚ್ಚೆತ್ತುಕೊಂಡಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿ.ಎಂಲಿಂಗಪ್ಪ ಅವರು ನಿಗಮದ ಅಧ್ಯಕ್ಷರಾಗಿದ್ದರಷ್ಟೆ, ಸಚಿವ ಸ್ಥಾನ ದೊರೆತಿರಲಿಲ್ಲ. ಸಚಿವ ಸ್ಥಾನ ಕೇಳಿದ ಲಿಂಗಪ್ಪ ಅವರಿಗೆ ನಿಮ್ಮ ಹೆಸರಲ್ಲೇ ಸಿಎಂ ಇದೆ, ನಿಮಗ್ಯಾಕೆ ಸಚಿವ ಸ್ಥಾನ ಎಂದಿದ್ದರಂತೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...