Homeಮುಖಪುಟಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್...

ಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್ ಪ್ರತಿಭಟನೆ

- Advertisement -
- Advertisement -

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ‘ಹಲ್ಲಾ ಬೋಲ್’ ಪ್ರತಿಭಟನೆ ಆಯೋಜಿಸಿದೆ. ಪ್ರತಿಭಟನಾ ಮೆರವಣಿಗೆ ಶನಿವಾರ ಆರಂಭವಾಗಿದೆ.

ಮಧ್ಯಾಹ್ನದ ಸುಮಾರಿಗೆ ಬೈಕುಲ್ಲಾದ ಜೆಜೆ ಆಸ್ಪತ್ರೆ ಬಳಿಯ ಕಂಪನಿಯಿಂದ ಆರಂಭವಾದ ಪಾದಯಾತ್ರೆ, ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಾಡಿರುವ ಅವಮಾನ ಸೇರಿದಂತೆ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮತ್ತು ರಾಜ್ಯದ ಯೋಜನೆಗಳನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸುತ್ತಿರುವ ಬಗ್ಗೆಯೂ ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಾಗಿದೆ.

ಈ ವರ್ಷದ ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಿದ ನಂತರದಲ್ಲಿ ಎಂವಿಎ ಆಯೋಜಿಸಿರುವ ಈ ಪ್ರತಿಭಟನೆಯು ಮಿತ್ರಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವೆಂದೇ ರಾಜಕೀಯ ವಿಶ್ಲೇಷಕರು ಬಣ್ಣಿಸಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ ಪಕ್ಷಗಳ ನಾಯಕರು, ಕಾರ್ಯಕರ್ತರು ಬೆಳಿಗ್ಗೆಯಿಂದಲೇ ಜೆಜೆ ಆಸ್ಪತ್ರೆ ಬಳಿ ಜಮಾಯಿಸಲಾರಂಭಿಸಿದ್ದರು.

ಮಧ್ಯಾಹ್ನದ ಸುಮಾರಿಗೆ ಮೆರವಣಿಗೆ ಪ್ರಾರಂಭವಾದಾಗ, ಅವರು ಬ್ಯಾನರ್‌ಗಳನ್ನು, ಫಲಕಗಳನ್ನು, ಶಿವಾಜಿ ಮಹಾರಾಜ ಮತ್ತು ಫುಲೆ ದಂಪತಿಯ ಚಿತ್ರಗಳನ್ನು ಹಿಡಿದು ನಡೆದರು.

ಮೆರವಣಿಗೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿಯ ಹಿರಿಯ ನಾಯಕ ಸುನೀಲ್ ತಾಟ್ಕರೆ, “ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕೆಲವು ಭಾಗಗಳಲ್ಲಿ ಹಕ್ಕು ಸಾಧಿಸುವ ಮೂಲಕ ಮಹಾರಾಷ್ಟ್ರವನ್ನು ಅವಮಾನಿಸಿದ್ದಾರೆ, ಆದರೆ ಶಿಂಧೆ ಸರ್ಕಾರವು ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ” ಎಂದು ದೂರಿದರು.

“ಎಂವಿಎಯ ಮೆರವಣಿಗೆಯನ್ನು ಎದುರಿಸಲು, ಮುಂಬೈನ ಎಲ್ಲಾ ಆರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ “ಮಾಫಿ ಮಾಂಗೋ” ಪ್ರತಿಭಟನೆಗಳನ್ನು ನಡೆಸುತ್ತಿದೆ. ಉದ್ಧವ್ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮಸ್ಥಳದ ಬಗ್ಗೆ, ಪಕ್ಷದ ನಾಯಕಿ ಸುಷ್ಮಾ ಅಂಧರೆ ಹಿಂದೂ ದೇವತೆಗಳನ್ನು ಮತ್ತು ಸಂತರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಎಂವಿಎ ನಾಯಕರು, ವಿಶೇಷವಾಗಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಮಾತನಾಡಿ, “ಪ್ರತಿಭಟನಾ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಲಿದ್ದು, ಈ ಕಾರಣಕ್ಕಾಗಿ ಬಿಜೆಪಿ ಗಮನ ಬೇರೆಡೆ ಸೆಳೆಯಲು ಗಿಮಿಕ್ ಮಾಡುತ್ತಿದೆ’’ ಎಂದು ವ್ಯಂಗ್ಯವಾಡಿದೆ.

ಹೋರಾಟದ ಕುರಿತು ಟ್ವೀಟ್‌ಗಳನ್ನು ಮಾಡಿರುವ ಶಿವಸೇನಾ ಯುವ ನಾಯಕ ಆದಿತ್ಯಾ ಠಾಕ್ರೆ, “ಮಹಾರಾಷ್ಟ್ರ ದ್ರೋಹಿಗಳ ವಿರುದ್ಧ ಎಂವಿಎ ಮಹಾಯಾತ್ರೆ ನಡೆಯಿತು. ಅದೊಂದು ಅಗಾಧ ಅನುಭವ. ಮಹಾರಾಷ್ಟ್ರದ ಮೇಲೆ ಪ್ರೀತಿ ಇರುವ ಲಕ್ಷಾಂತರ ಜನರು ಇದರಲ್ಲಿ ಭಾಗವಹಿಸಿದ್ದರು. ಇದು ಜನಸಾಮಾನ್ಯರ ಹೋರಾಟ” ಎಂದು ಬಣ್ಣಿಸಿದ್ದಾರೆ.

“ಸ್ವಾರ್ಥಕ್ಕಿಂತ ಆತ್ಮಗೌರವವೇ ಮುಖ್ಯ ಎಂಬುದಕ್ಕೆ ಇಂದಿನ ಮಹಾ ಮೆರವಣಿಗೆಯಲ್ಲಿ ನೆರೆದಿದ್ದ ಅಪಾರ ಜನಸ್ತೋಮವೇ ಸಾಕ್ಷಿ. ಆಸೆಗಳಿಗಿಂತ ಮಹಾರಾಷ್ಟ್ರದ ಪ್ರೀತಿ ದೊಡ್ಡದು. ಅಧಿಕಾರಕ್ಕಿಂತ ಹೆಚ್ಚು ಶಕ್ತಿಶಾಲಿ ಮಹಾರಾಷ್ಟ್ರದ ಜನರು. ಮಹಾರಾಷ್ಟ್ರದ ದ್ರೋಹಿಗಳನ್ನು ಅಧಿಕಾರದಿಂದ ಕೆಳಗಿಳಿಸಲು ಮಹಾರಾಷ್ಟ್ರ ಎಚ್ಚೆತ್ತುಕೊಂಡಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿ.ಎಂಲಿಂಗಪ್ಪ ಅವರು ನಿಗಮದ ಅಧ್ಯಕ್ಷರಾಗಿದ್ದರಷ್ಟೆ, ಸಚಿವ ಸ್ಥಾನ ದೊರೆತಿರಲಿಲ್ಲ. ಸಚಿವ ಸ್ಥಾನ ಕೇಳಿದ ಲಿಂಗಪ್ಪ ಅವರಿಗೆ ನಿಮ್ಮ ಹೆಸರಲ್ಲೇ ಸಿಎಂ ಇದೆ, ನಿಮಗ್ಯಾಕೆ ಸಚಿವ ಸ್ಥಾನ ಎಂದಿದ್ದರಂತೆ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...