Homeಮುಖಪುಟ'ಫುಲೆ' ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

‘ಫುಲೆ’ ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

- Advertisement -
- Advertisement -

ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಅನಂತ್ ಮಹಾದೇವನ್ ನಿರ್ದೇಶನದ ‘ಫುಲೆ’ ಚಿತ್ರ ಬಿಡುಗಡೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

19 ನೇ ಶತಮಾನದಲ್ಲಿ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕಥೆ ಆಧರಿತ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ಪತ್ರಲೇಖಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯದ ಒಂದು ವರ್ಗವು ಚಿತ್ರದಲ್ಲಿ ತಮ್ಮ ಚಿತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಕೆಲ ಸಂಸ್ಥೆಗಳು ಇದು ತಮ್ಮ ಸಮುದಾಯವನ್ನು ಅವಮಾನಿಸುತ್ತದೆ ಎಂದು ಆರೋಪಿಸಿದೆ. ಇದು ಚಿತ್ರ ಬಿಡುಗಡೆ ಮುಂದೂಡಿಕೆಯಾಗಲು ಕಾರಣ ಎನ್ನಲಾಗಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಚಿತ್ರದಲ್ಲಿ ಜಾತಿ ವ್ಯವಸ್ಥೆಯ ಕುರಿತು ಹೇಳುವ ಧ್ವನಿಮುದ್ರಿಕೆ ತೆಗೆದು ಹಾಕುವುದು ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲು ಸೂಚಿಸಿದೆ. ‘ಮಹರ್’, ‘ಮಾಂಗ್’, ‘ಪೇಶ್ವೆ’ ಮತ್ತು ‘ಮನು ಜಾತಿ ವ್ಯವಸ್ಥೆ’ ಮುಂತಾದ ಪದಗಳನ್ನು ತೆಗೆದು ಹಾಕಲು ಮತ್ತು ಚಿತ್ರದ ಕೆಲವು ಸಂಭಾಷಣೆಗಳನ್ನು ಬದಲಾಯಿಸಲು ನಿರ್ಮಾಪಕರಿಗೆ ಸೂಚನೆ ನೀಡಿದೆ ಎಂದು ವರದಿಗಳು ಹೇಳಿವೆ.

‘ಪೊರಕೆ ಹೊತ್ತ ವ್ಯಕ್ತಿ, ಸಾವಿತ್ರಿ ಬಾಯಿ ಮೇಲೆ ಸಗಣಿ ಎಸೆಯುವ ಹುಡುಗರು’ ಈ ದೃಶ್ಯಗಳು ಮತ್ತು ಚಿತ್ರದ ಕೆಲ ಡೈಲಾಗ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಸಿಬಿಎಫ್‌ಸಿ ಸೂಚಿಸಿದೆ ಎಂದು ವರದಿಯಾಗಿದೆ.

ನಿರ್ದೇಶಕ ಅನಂತ್ ಮಹಾದೇವನ್ ಅವರಿಗೆ ಬ್ರಾಹ್ಮಣ ಸಮುದಾಯಗಳು ಚಿತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿ ಬರೆದ ಹಲವಾರು ಪತ್ರಗಳು ಬಂದಿವೆಯಂತೆ. ಮಿಡ್-ಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಹಾದೇವನ್, “ಟ್ರೇಲರ್ ಬಿಡುಗಡೆಯಾದ ನಂತರ ಕೆಲವು ತಪ್ಪು ತಿಳುವಳಿಕೆಗಳು ಉಂಟಾಗಿವೆ. ವೀಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ನಾವು ಗೊಂದಲಗಳನ್ನು ನಿವಾರಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾದೇವನ್ ಮತ್ತು ಮುವಾಝಮ್ ಬೇಗ್ ಬರೆದ ಈ ಚಿತ್ರವು 19ನೇ ಶತಮಾನದಲ್ಲಿ ಜಾತೀಯತೆಯ ವಿರುದ್ಧ ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಮಾಡಿದ ಹೋರಾಟ ಮತ್ತು ಈ ವೇಳೆ ಅವರಿಗೆ ಎದುರಾದ ಸವಾಲುಗಳನ್ನು ವಿವರಿಸುತ್ತದೆ.

ಚಿತ್ರದ ಕುರಿತು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ ಸಂಘಟನೆಗಳಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಸಮಾಜ ಮತ್ತು ಪರಶುರಾಮ ಆರ್ಥಿಕ ವಿಕಾಸ ಮಹಾಮಂಡಲಗಳು ಸೇರಿವೆ.

ಜ್ಯೋತಿ ಬಾ ಫುಲೆ ಅವರ 20 ಶಾಲೆಗಳ ಸ್ಥಾಪನೆ ಮತ್ತು ಸತ್ಯಶೋಧಕ ಸಮಾಜದಂತಹ ಉಪಕ್ರಮಗಳನ್ನು ಕೆಲವು ಬ್ರಾಹ್ಮಣರು ಹೇಗೆ ಬೆಂಬಲಿಸಿದರು ಎಂಬುದನ್ನು ವಿವರಿಸಲು ತಾವು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿರುವುದಾಗಿ ಮಹಾದೇವನ್ ಹೇಳಿಕೊಂಡಿದ್ದಾರೆ.
ಈ ಚಿತ್ರವು ಅಜೆಂಡಾ ಆಧಾರಿತವಲ್ಲ, ಸತ್ಯವನ್ನು ಮಾತ್ರ ಹೇಳಲಾಗಿದೆ ಎಂದಿದ್ದಾರೆ.

ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ಸೂಚಿಸುವ ಮುನ್ನ, ಆರಂಭದಲ್ಲಿ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯೂ ಪ್ರಮಾಣಪತ್ರವನ್ನು ನೀಡಿತ್ತು. ಚಿತ್ರದಲ್ಲಿ ಮಾಡಲಾದ ಕೆಲವು ಐತಿಹಾಸಿಕ ವಾದಗಳನ್ನು ಬೆಂಬಲಿಸುವ ಸರಿಯಾದ ದಾಖಲೆಗಳನ್ನು ಕೂಡ ನಿರ್ಮಾಪಕರು ಸಲ್ಲಿಸಿದ್ದಾರೆ.

ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...