Homeಮುಖಪುಟ'ಫುಲೆ' ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

‘ಫುಲೆ’ ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

- Advertisement -
- Advertisement -

ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಅನಂತ್ ಮಹಾದೇವನ್ ನಿರ್ದೇಶನದ ‘ಫುಲೆ’ ಚಿತ್ರ ಬಿಡುಗಡೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

19 ನೇ ಶತಮಾನದಲ್ಲಿ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕಥೆ ಆಧರಿತ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ಪತ್ರಲೇಖಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯದ ಒಂದು ವರ್ಗವು ಚಿತ್ರದಲ್ಲಿ ತಮ್ಮ ಚಿತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಕೆಲ ಸಂಸ್ಥೆಗಳು ಇದು ತಮ್ಮ ಸಮುದಾಯವನ್ನು ಅವಮಾನಿಸುತ್ತದೆ ಎಂದು ಆರೋಪಿಸಿದೆ. ಇದು ಚಿತ್ರ ಬಿಡುಗಡೆ ಮುಂದೂಡಿಕೆಯಾಗಲು ಕಾರಣ ಎನ್ನಲಾಗಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಚಿತ್ರದಲ್ಲಿ ಜಾತಿ ವ್ಯವಸ್ಥೆಯ ಕುರಿತು ಹೇಳುವ ಧ್ವನಿಮುದ್ರಿಕೆ ತೆಗೆದು ಹಾಕುವುದು ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲು ಸೂಚಿಸಿದೆ. ‘ಮಹರ್’, ‘ಮಾಂಗ್’, ‘ಪೇಶ್ವೆ’ ಮತ್ತು ‘ಮನು ಜಾತಿ ವ್ಯವಸ್ಥೆ’ ಮುಂತಾದ ಪದಗಳನ್ನು ತೆಗೆದು ಹಾಕಲು ಮತ್ತು ಚಿತ್ರದ ಕೆಲವು ಸಂಭಾಷಣೆಗಳನ್ನು ಬದಲಾಯಿಸಲು ನಿರ್ಮಾಪಕರಿಗೆ ಸೂಚನೆ ನೀಡಿದೆ ಎಂದು ವರದಿಗಳು ಹೇಳಿವೆ.

‘ಪೊರಕೆ ಹೊತ್ತ ವ್ಯಕ್ತಿ, ಸಾವಿತ್ರಿ ಬಾಯಿ ಮೇಲೆ ಸಗಣಿ ಎಸೆಯುವ ಹುಡುಗರು’ ಈ ದೃಶ್ಯಗಳು ಮತ್ತು ಚಿತ್ರದ ಕೆಲ ಡೈಲಾಗ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಸಿಬಿಎಫ್‌ಸಿ ಸೂಚಿಸಿದೆ ಎಂದು ವರದಿಯಾಗಿದೆ.

ನಿರ್ದೇಶಕ ಅನಂತ್ ಮಹಾದೇವನ್ ಅವರಿಗೆ ಬ್ರಾಹ್ಮಣ ಸಮುದಾಯಗಳು ಚಿತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿ ಬರೆದ ಹಲವಾರು ಪತ್ರಗಳು ಬಂದಿವೆಯಂತೆ. ಮಿಡ್-ಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಹಾದೇವನ್, “ಟ್ರೇಲರ್ ಬಿಡುಗಡೆಯಾದ ನಂತರ ಕೆಲವು ತಪ್ಪು ತಿಳುವಳಿಕೆಗಳು ಉಂಟಾಗಿವೆ. ವೀಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ನಾವು ಗೊಂದಲಗಳನ್ನು ನಿವಾರಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾದೇವನ್ ಮತ್ತು ಮುವಾಝಮ್ ಬೇಗ್ ಬರೆದ ಈ ಚಿತ್ರವು 19ನೇ ಶತಮಾನದಲ್ಲಿ ಜಾತೀಯತೆಯ ವಿರುದ್ಧ ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಮಾಡಿದ ಹೋರಾಟ ಮತ್ತು ಈ ವೇಳೆ ಅವರಿಗೆ ಎದುರಾದ ಸವಾಲುಗಳನ್ನು ವಿವರಿಸುತ್ತದೆ.

ಚಿತ್ರದ ಕುರಿತು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ ಸಂಘಟನೆಗಳಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಸಮಾಜ ಮತ್ತು ಪರಶುರಾಮ ಆರ್ಥಿಕ ವಿಕಾಸ ಮಹಾಮಂಡಲಗಳು ಸೇರಿವೆ.

ಜ್ಯೋತಿ ಬಾ ಫುಲೆ ಅವರ 20 ಶಾಲೆಗಳ ಸ್ಥಾಪನೆ ಮತ್ತು ಸತ್ಯಶೋಧಕ ಸಮಾಜದಂತಹ ಉಪಕ್ರಮಗಳನ್ನು ಕೆಲವು ಬ್ರಾಹ್ಮಣರು ಹೇಗೆ ಬೆಂಬಲಿಸಿದರು ಎಂಬುದನ್ನು ವಿವರಿಸಲು ತಾವು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿರುವುದಾಗಿ ಮಹಾದೇವನ್ ಹೇಳಿಕೊಂಡಿದ್ದಾರೆ.
ಈ ಚಿತ್ರವು ಅಜೆಂಡಾ ಆಧಾರಿತವಲ್ಲ, ಸತ್ಯವನ್ನು ಮಾತ್ರ ಹೇಳಲಾಗಿದೆ ಎಂದಿದ್ದಾರೆ.

ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ಸೂಚಿಸುವ ಮುನ್ನ, ಆರಂಭದಲ್ಲಿ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯೂ ಪ್ರಮಾಣಪತ್ರವನ್ನು ನೀಡಿತ್ತು. ಚಿತ್ರದಲ್ಲಿ ಮಾಡಲಾದ ಕೆಲವು ಐತಿಹಾಸಿಕ ವಾದಗಳನ್ನು ಬೆಂಬಲಿಸುವ ಸರಿಯಾದ ದಾಖಲೆಗಳನ್ನು ಕೂಡ ನಿರ್ಮಾಪಕರು ಸಲ್ಲಿಸಿದ್ದಾರೆ.

ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...