Homeಮುಖಪುಟ'ಫುಲೆ' ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

‘ಫುಲೆ’ ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

- Advertisement -
- Advertisement -

ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಅನಂತ್ ಮಹಾದೇವನ್ ನಿರ್ದೇಶನದ ‘ಫುಲೆ’ ಚಿತ್ರ ಬಿಡುಗಡೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

19 ನೇ ಶತಮಾನದಲ್ಲಿ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕಥೆ ಆಧರಿತ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ಪತ್ರಲೇಖಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯದ ಒಂದು ವರ್ಗವು ಚಿತ್ರದಲ್ಲಿ ತಮ್ಮ ಚಿತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಕೆಲ ಸಂಸ್ಥೆಗಳು ಇದು ತಮ್ಮ ಸಮುದಾಯವನ್ನು ಅವಮಾನಿಸುತ್ತದೆ ಎಂದು ಆರೋಪಿಸಿದೆ. ಇದು ಚಿತ್ರ ಬಿಡುಗಡೆ ಮುಂದೂಡಿಕೆಯಾಗಲು ಕಾರಣ ಎನ್ನಲಾಗಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಚಿತ್ರದಲ್ಲಿ ಜಾತಿ ವ್ಯವಸ್ಥೆಯ ಕುರಿತು ಹೇಳುವ ಧ್ವನಿಮುದ್ರಿಕೆ ತೆಗೆದು ಹಾಕುವುದು ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲು ಸೂಚಿಸಿದೆ. ‘ಮಹರ್’, ‘ಮಾಂಗ್’, ‘ಪೇಶ್ವೆ’ ಮತ್ತು ‘ಮನು ಜಾತಿ ವ್ಯವಸ್ಥೆ’ ಮುಂತಾದ ಪದಗಳನ್ನು ತೆಗೆದು ಹಾಕಲು ಮತ್ತು ಚಿತ್ರದ ಕೆಲವು ಸಂಭಾಷಣೆಗಳನ್ನು ಬದಲಾಯಿಸಲು ನಿರ್ಮಾಪಕರಿಗೆ ಸೂಚನೆ ನೀಡಿದೆ ಎಂದು ವರದಿಗಳು ಹೇಳಿವೆ.

‘ಪೊರಕೆ ಹೊತ್ತ ವ್ಯಕ್ತಿ, ಸಾವಿತ್ರಿ ಬಾಯಿ ಮೇಲೆ ಸಗಣಿ ಎಸೆಯುವ ಹುಡುಗರು’ ಈ ದೃಶ್ಯಗಳು ಮತ್ತು ಚಿತ್ರದ ಕೆಲ ಡೈಲಾಗ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಸಿಬಿಎಫ್‌ಸಿ ಸೂಚಿಸಿದೆ ಎಂದು ವರದಿಯಾಗಿದೆ.

ನಿರ್ದೇಶಕ ಅನಂತ್ ಮಹಾದೇವನ್ ಅವರಿಗೆ ಬ್ರಾಹ್ಮಣ ಸಮುದಾಯಗಳು ಚಿತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿ ಬರೆದ ಹಲವಾರು ಪತ್ರಗಳು ಬಂದಿವೆಯಂತೆ. ಮಿಡ್-ಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಹಾದೇವನ್, “ಟ್ರೇಲರ್ ಬಿಡುಗಡೆಯಾದ ನಂತರ ಕೆಲವು ತಪ್ಪು ತಿಳುವಳಿಕೆಗಳು ಉಂಟಾಗಿವೆ. ವೀಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ನಾವು ಗೊಂದಲಗಳನ್ನು ನಿವಾರಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾದೇವನ್ ಮತ್ತು ಮುವಾಝಮ್ ಬೇಗ್ ಬರೆದ ಈ ಚಿತ್ರವು 19ನೇ ಶತಮಾನದಲ್ಲಿ ಜಾತೀಯತೆಯ ವಿರುದ್ಧ ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಮಾಡಿದ ಹೋರಾಟ ಮತ್ತು ಈ ವೇಳೆ ಅವರಿಗೆ ಎದುರಾದ ಸವಾಲುಗಳನ್ನು ವಿವರಿಸುತ್ತದೆ.

ಚಿತ್ರದ ಕುರಿತು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ ಸಂಘಟನೆಗಳಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಸಮಾಜ ಮತ್ತು ಪರಶುರಾಮ ಆರ್ಥಿಕ ವಿಕಾಸ ಮಹಾಮಂಡಲಗಳು ಸೇರಿವೆ.

ಜ್ಯೋತಿ ಬಾ ಫುಲೆ ಅವರ 20 ಶಾಲೆಗಳ ಸ್ಥಾಪನೆ ಮತ್ತು ಸತ್ಯಶೋಧಕ ಸಮಾಜದಂತಹ ಉಪಕ್ರಮಗಳನ್ನು ಕೆಲವು ಬ್ರಾಹ್ಮಣರು ಹೇಗೆ ಬೆಂಬಲಿಸಿದರು ಎಂಬುದನ್ನು ವಿವರಿಸಲು ತಾವು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿರುವುದಾಗಿ ಮಹಾದೇವನ್ ಹೇಳಿಕೊಂಡಿದ್ದಾರೆ.
ಈ ಚಿತ್ರವು ಅಜೆಂಡಾ ಆಧಾರಿತವಲ್ಲ, ಸತ್ಯವನ್ನು ಮಾತ್ರ ಹೇಳಲಾಗಿದೆ ಎಂದಿದ್ದಾರೆ.

ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ಸೂಚಿಸುವ ಮುನ್ನ, ಆರಂಭದಲ್ಲಿ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯೂ ಪ್ರಮಾಣಪತ್ರವನ್ನು ನೀಡಿತ್ತು. ಚಿತ್ರದಲ್ಲಿ ಮಾಡಲಾದ ಕೆಲವು ಐತಿಹಾಸಿಕ ವಾದಗಳನ್ನು ಬೆಂಬಲಿಸುವ ಸರಿಯಾದ ದಾಖಲೆಗಳನ್ನು ಕೂಡ ನಿರ್ಮಾಪಕರು ಸಲ್ಲಿಸಿದ್ದಾರೆ.

ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...