Homeಮುಖಪುಟ'ಫುಲೆ' ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

‘ಫುಲೆ’ ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

- Advertisement -
- Advertisement -

ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಅನಂತ್ ಮಹಾದೇವನ್ ನಿರ್ದೇಶನದ ‘ಫುಲೆ’ ಚಿತ್ರ ಬಿಡುಗಡೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

19 ನೇ ಶತಮಾನದಲ್ಲಿ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕಥೆ ಆಧರಿತ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ಪತ್ರಲೇಖಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯದ ಒಂದು ವರ್ಗವು ಚಿತ್ರದಲ್ಲಿ ತಮ್ಮ ಚಿತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಕೆಲ ಸಂಸ್ಥೆಗಳು ಇದು ತಮ್ಮ ಸಮುದಾಯವನ್ನು ಅವಮಾನಿಸುತ್ತದೆ ಎಂದು ಆರೋಪಿಸಿದೆ. ಇದು ಚಿತ್ರ ಬಿಡುಗಡೆ ಮುಂದೂಡಿಕೆಯಾಗಲು ಕಾರಣ ಎನ್ನಲಾಗಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಚಿತ್ರದಲ್ಲಿ ಜಾತಿ ವ್ಯವಸ್ಥೆಯ ಕುರಿತು ಹೇಳುವ ಧ್ವನಿಮುದ್ರಿಕೆ ತೆಗೆದು ಹಾಕುವುದು ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲು ಸೂಚಿಸಿದೆ. ‘ಮಹರ್’, ‘ಮಾಂಗ್’, ‘ಪೇಶ್ವೆ’ ಮತ್ತು ‘ಮನು ಜಾತಿ ವ್ಯವಸ್ಥೆ’ ಮುಂತಾದ ಪದಗಳನ್ನು ತೆಗೆದು ಹಾಕಲು ಮತ್ತು ಚಿತ್ರದ ಕೆಲವು ಸಂಭಾಷಣೆಗಳನ್ನು ಬದಲಾಯಿಸಲು ನಿರ್ಮಾಪಕರಿಗೆ ಸೂಚನೆ ನೀಡಿದೆ ಎಂದು ವರದಿಗಳು ಹೇಳಿವೆ.

‘ಪೊರಕೆ ಹೊತ್ತ ವ್ಯಕ್ತಿ, ಸಾವಿತ್ರಿ ಬಾಯಿ ಮೇಲೆ ಸಗಣಿ ಎಸೆಯುವ ಹುಡುಗರು’ ಈ ದೃಶ್ಯಗಳು ಮತ್ತು ಚಿತ್ರದ ಕೆಲ ಡೈಲಾಗ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಸಿಬಿಎಫ್‌ಸಿ ಸೂಚಿಸಿದೆ ಎಂದು ವರದಿಯಾಗಿದೆ.

ನಿರ್ದೇಶಕ ಅನಂತ್ ಮಹಾದೇವನ್ ಅವರಿಗೆ ಬ್ರಾಹ್ಮಣ ಸಮುದಾಯಗಳು ಚಿತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿ ಬರೆದ ಹಲವಾರು ಪತ್ರಗಳು ಬಂದಿವೆಯಂತೆ. ಮಿಡ್-ಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಹಾದೇವನ್, “ಟ್ರೇಲರ್ ಬಿಡುಗಡೆಯಾದ ನಂತರ ಕೆಲವು ತಪ್ಪು ತಿಳುವಳಿಕೆಗಳು ಉಂಟಾಗಿವೆ. ವೀಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ನಾವು ಗೊಂದಲಗಳನ್ನು ನಿವಾರಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾದೇವನ್ ಮತ್ತು ಮುವಾಝಮ್ ಬೇಗ್ ಬರೆದ ಈ ಚಿತ್ರವು 19ನೇ ಶತಮಾನದಲ್ಲಿ ಜಾತೀಯತೆಯ ವಿರುದ್ಧ ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಮಾಡಿದ ಹೋರಾಟ ಮತ್ತು ಈ ವೇಳೆ ಅವರಿಗೆ ಎದುರಾದ ಸವಾಲುಗಳನ್ನು ವಿವರಿಸುತ್ತದೆ.

ಚಿತ್ರದ ಕುರಿತು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ ಸಂಘಟನೆಗಳಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಸಮಾಜ ಮತ್ತು ಪರಶುರಾಮ ಆರ್ಥಿಕ ವಿಕಾಸ ಮಹಾಮಂಡಲಗಳು ಸೇರಿವೆ.

ಜ್ಯೋತಿ ಬಾ ಫುಲೆ ಅವರ 20 ಶಾಲೆಗಳ ಸ್ಥಾಪನೆ ಮತ್ತು ಸತ್ಯಶೋಧಕ ಸಮಾಜದಂತಹ ಉಪಕ್ರಮಗಳನ್ನು ಕೆಲವು ಬ್ರಾಹ್ಮಣರು ಹೇಗೆ ಬೆಂಬಲಿಸಿದರು ಎಂಬುದನ್ನು ವಿವರಿಸಲು ತಾವು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿರುವುದಾಗಿ ಮಹಾದೇವನ್ ಹೇಳಿಕೊಂಡಿದ್ದಾರೆ.
ಈ ಚಿತ್ರವು ಅಜೆಂಡಾ ಆಧಾರಿತವಲ್ಲ, ಸತ್ಯವನ್ನು ಮಾತ್ರ ಹೇಳಲಾಗಿದೆ ಎಂದಿದ್ದಾರೆ.

ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ಸೂಚಿಸುವ ಮುನ್ನ, ಆರಂಭದಲ್ಲಿ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯೂ ಪ್ರಮಾಣಪತ್ರವನ್ನು ನೀಡಿತ್ತು. ಚಿತ್ರದಲ್ಲಿ ಮಾಡಲಾದ ಕೆಲವು ಐತಿಹಾಸಿಕ ವಾದಗಳನ್ನು ಬೆಂಬಲಿಸುವ ಸರಿಯಾದ ದಾಖಲೆಗಳನ್ನು ಕೂಡ ನಿರ್ಮಾಪಕರು ಸಲ್ಲಿಸಿದ್ದಾರೆ.

ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...