Homeಮುಖಪುಟಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

- Advertisement -
- Advertisement -

‘ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು ಶಿವಾಜಿ ಮಹಾರಾಜರ ಸಮಾಧಿಯನ್ನು ಕಂಡುಹಿಡಿದರು’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ವಿವಾದ ಹುಟ್ಟುಹಾಕಿದೆ. ಭಾಗವತ್ ಅವರ ಈ ಹೇಳಿಕೆ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳುವ ಪಿತೂರಿ ಎಂದು ಮಹಾರಾಷ್ಟ್ರದ ಒಬಿಸಿ ನಾಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಾರದ ಆರಂಭದಲ್ಲಿ ಪುಣೆಯಲ್ಲಿ ಮಾತನಾಡಿದ್ದ ಭಾಗವತ್, “ಶಿವಾಜಿಯನ್ನು ಸ್ಮರಿಸುವಂತೆ ಜಾಗೃತಿಯ ಆಂದೋಲನವನ್ನು ಪ್ರಾರಂಭಿಸಲಾಯಿತು. ರಾಯಗಡದಲ್ಲಿ ಈ ಆಚರಣೆಯನ್ನು ಪ್ರಾರಂಭಿಸಲಾಯಿತು. ತಿಲಕರು ಇದನ್ನೆಲ್ಲ ಕಂಡುಹಿಡಿದರು” ಎಂದು ಹೇಳಿದ್ದರು. ಅವರ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿರುವ ಒಬಿಸಿ ನಾಯಕರು ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

1869 ರಲ್ಲಿ ಜ್ಯೋತಿರಾವ್ ಫುಲೆ ಅವರು ಸ್ಮಾರಕಕ್ಕೆ ಭೇಟಿ ನೀಡಿದ್ದರು ಎಂದು ಇತಿಹಾಸ ಹೇಳುತ್ತದೆ. ಫುಲೆ 19ನೇ ಶತಮಾನದ ಭಾರತದ ಪ್ರಮುಖ ಸಮಾಜ ಸುಧಾರಕರಾಗಿದ್ದರು. ವಿಶೇಷವಾಗಿ ಒಬಿಸಿ ಸಮುದಾಯಗಳು ಮತ್ತು ತಳಸ್ಥರದ ಸಮುದಾಯಗಳ ಪರವಾಗಿ ಅವರು ಹೋರಾಟ ಮಾಡಿದ್ದರು. ಅಲ್ಲದೆ, ಅವರು ಜಾತಿ ವ್ಯವಸ್ಥೆಯ ತೀವ್ರ ಟೀಕಾಕಾರ ಕೂಡಾ ಆಗಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯ ಮೂಲಕ ಒಬಿಸಿ ಸೇರಿದಂತೆ ಕೆಳ ಜಾತಿಗಳ ಸಬಲೀಕರಣಕ್ಕಾಗಿ ಅವರು ಕೆಲಸ ಮಾಡಿದ್ದರು.

ಫುಲೆ ರಾಯಗಡ ಕೋಟೆಗೆ ಭೇಟಿ ನೀಡಿದ ಅದೇ ವರ್ಷ, “ಛತ್ರಪತಿ ಶಿವಾಜಿ ರಾಜೇ ಭೋಸಲೆ ಯಂಚ ಪೋವಾಡ” ಎಂಬ ಲಾವಣಿಯೊಂದನ್ನು ಬರೆದಿದ್ದರು. ಅದು ಶಿವಾಜಿಯ ಇತಿಹಾಸವನ್ನು ಸಾಮಾನ್ಯ ಜನರ ದೃಷ್ಟಿಕೋನದಿಂದ ವಿವರಿಸುತ್ತದೆ ಮತ್ತು ಅವರನ್ನು ರಾಜರಿಗಿಂತ ಹೆಚ್ಚಾಗಿ ರೈತ ನಾಯಕ ಎಂದು ಚಿತ್ರಿಸುತ್ತದೆ. ಆ ಕಾಲದ ಬ್ರಾಹ್ಮಣ ಇತಿಹಾಸಕಾರರು ಶಿವಾಜಿಯನ್ನು ಬ್ರಾಹ್ಮಣರ ಕಲ್ಯಾಣಕ್ಕಾಗಿ ಸಮರ್ಪಿತವಾದ ರಾಜ ಎಂದು ಚಿತ್ರಿಸಿದ್ದರು.

ಇದನ್ನೂಓದಿ: ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಈ ಬಗ್ಗೆ ಮಾತನಾಡಿರುವ ಇತಿಹಾಸತಜ್ಞ ಇಂದ್ರಜಿತ್ ಸಾವಂತ್, “ಅರ್ಧ ಶತಮಾನಕ್ಕೂ ಹೆಚ್ಚು ಕಾಲ, ರಾಯಗಢ ಕೋಟೆಯ ಆವರಣದಲ್ಲಿ ದಟ್ಟವಾದ ಗಿಡಗಂಟಿಗಳಿಂದ ಶಿವಾಜಿ ಮಹಾರಾಜರ ಸಮಾಧಿ ಮುಚ್ಚಿಹೋಗಿತ್ತು. ಇಂತಹ ಪರಿಸ್ಥಿತಿಗಳಲ್ಲಿ ಮಹಾತ್ಮ ಜ್ಯೋತಿಬಾ ಫುಲೆ 1869 ರಲ್ಲಿ ರಾಯಗಡಕ್ಕೆ ಹೋದರು. ಯಾರೂ ಭೇಟಿ ನೀಡದ ಈ ಸ್ಥಳಕ್ಕೆ ತೆರಳಿ ಅವರು ಸಮಾಧಿಯನ್ನು ಹುಡುಕಿದರು. ಇಡೀ ಭೇಟಿಯನ್ನು ದೀನಬಂಧು ಪತ್ರಿಕೆಯಲ್ಲಿ ದಾಖಲಿಸಲಾಗಿದೆ” ಎಂದು ಹೇಳುತ್ತಾರೆ. ಇಂದ್ರಜಿತ್ ಸಾವಂತ್ ಅವರು ಶಿವಾಜಿಯ ಸಮಾಧಿಯ ಕುರಿತು ‘ಶಿವಛತ್ರಪತಿಂಚ್ಯಾ ಸಮಾಧಿಚಾ ಶೋದ್ ವಾ ಬೋಧ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ಆದರೆ ಬಾಲಗಂಗಾಧರ ತಿಲಕ್ ಅವರು 1895 ರಲ್ಲಿ ಸ್ಮಾರಕವನ್ನು ದುರಸ್ತಿ ಮಾಡಲು ಮತ್ತು ಅದರ ಮೇಲೆ ಛತ್ರಿ ನಿರ್ಮಿಸಲು ಹಣವನ್ನು ಸಂಗ್ರಹಿಸಿದ್ದರು. ಆದರೆ 1925 ರಲ್ಲಿ, ಬ್ರಿಟಿಷ್ ಸರ್ಕಾರವು ಸಮಾಧಿ ನಿರ್ಮಾಣ ಮತ್ತು ದುರಸ್ತಿಗೆ ಅನುಮೋದನೆ ನೀಡಿತ್ತು.

ಶಿವಾಜಿ ಸಮಾಧಿ ಕಂಡುಹಿಡಿದ ಇತಿಹಾಸವನ್ನು ತಿರುಚುವುದು ಇತಿಹಾಸವನ್ನು ಪುನಃ ಬರೆಯುವ ಹಿಂದುತ್ವ ಪಿತೂರಿಯ ಭಾಗವಾಗಿದೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದು, ಭಾಗವತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಧಿಯನ್ನು ಕಂಡುಹಿಡಿದ ವ್ಯಕ್ತಿ ಎಂದು ತಿಲಕರ ಹೆಸರನ್ನು ಸೇರಿಸುವುದನ್ನು ಇತಿಹಾಸಕಾರರು ಪ್ರಶ್ನಿಸಿದ್ದಾರೆ.

ಇದನ್ನೂಓದಿ: ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

“ತಿಲಕರು ಸಮಾಧಿಯನ್ನು ಕಂಡುಹಿಡಿದ ಬಗ್ಗೆ ಯಾವುದೇ ಐತಿಹಾಸಿಕ ಉಲ್ಲೇಖಗಳಿಲ್ಲ. 1895 ರಿಂದ ಸ್ಮಾರಕಕ್ಕಾಗಿ ಚಳುವಳಿಯನ್ನು ಮುನ್ನಡೆಸುವಲ್ಲಿ ತಿಲಕರು ಪಾತ್ರವಹಿಸಿದ್ದರು ಮತ್ತು ಯೋಜನೆಗೆ ಹಣವನ್ನು ಸಂಗ್ರಹಿಸಿದ್ದರು. ಅದನ್ನು ಠೇವಣಿ ಮಾಡಿದ ಬ್ಯಾಂಕ್ ಬಸ್ಟ್ ಆದ ನಂತರ ಸಂಪೂರ್ಣ ಮೊತ್ತವು ಕಳೆದುಹೋಯಿತು. 1920ರಲ್ಲಿ ತಿಲಕರ ಮರಣದ ವೇಳೆಗೆ ಆಂದೋಲನವು ಭಗ್ನಗೊಂಡಿತ್ತು. ತಿಲಕ್ ಅವರು ಅದನ್ನು ಕಂಡುಹಿಡಿದಿದ್ದಾರೆ ಎಂದು ಹೇಳುವ ಮೂಲಕ ಸ್ಮಾರಕಕ್ಕೆ ಲಿಂಕ್ ಮಾಡುವುದು ಇತಿಹಾಸವನ್ನು ತಿರುಚುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಇತಿಹಾಸಗಾರ ಸಾವಂತ್ ಹೇಳಿದ್ದಾರೆ.

“ಶಿವಾಜಿ ಮಹಾರಾಜರ ಸಮಾಧಿಯನ್ನು ಮೊದಲು ಕಂಡುಹಿಡಿದದ್ದು ಜ್ಯೋತಿರಾವ್ ಫುಲೆ ಎಂಬುದು ಸತ್ಯ. ಈ ಐತಿಹಾಸಿಕ ಸತ್ಯವನ್ನು ಈ ಜಗತ್ತಿನ ಯಾವ ವ್ಯಕ್ತಿಯೂ ಬದಲಾಯಿಸಲು ಸಾಧ್ಯವಿಲ್ಲ. ಶಿವಜಯಂತಿ ಆಚರಣೆಯನ್ನು ಪ್ರಾರಂಭಿಸಲು ಸಹ ಫುಲೆ ಕಾರಣರಾಗಿದ್ದರು” ಎಂದು ರಾಜ್ಯದ ಪ್ರಮುಖ ಒಬಿಸಿ ನಾಯಕರಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಜ್ಯ ಕ್ಯಾಬಿನೆಟ್ ಸಚಿವ ಚಗ್ಗನ್ ಭುಜಬಲ್ ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...