Homeಮುಖಪುಟಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

- Advertisement -
- Advertisement -

‘ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು ಶಿವಾಜಿ ಮಹಾರಾಜರ ಸಮಾಧಿಯನ್ನು ಕಂಡುಹಿಡಿದರು’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ವಿವಾದ ಹುಟ್ಟುಹಾಕಿದೆ. ಭಾಗವತ್ ಅವರ ಈ ಹೇಳಿಕೆ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳುವ ಪಿತೂರಿ ಎಂದು ಮಹಾರಾಷ್ಟ್ರದ ಒಬಿಸಿ ನಾಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಾರದ ಆರಂಭದಲ್ಲಿ ಪುಣೆಯಲ್ಲಿ ಮಾತನಾಡಿದ್ದ ಭಾಗವತ್, “ಶಿವಾಜಿಯನ್ನು ಸ್ಮರಿಸುವಂತೆ ಜಾಗೃತಿಯ ಆಂದೋಲನವನ್ನು ಪ್ರಾರಂಭಿಸಲಾಯಿತು. ರಾಯಗಡದಲ್ಲಿ ಈ ಆಚರಣೆಯನ್ನು ಪ್ರಾರಂಭಿಸಲಾಯಿತು. ತಿಲಕರು ಇದನ್ನೆಲ್ಲ ಕಂಡುಹಿಡಿದರು” ಎಂದು ಹೇಳಿದ್ದರು. ಅವರ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿರುವ ಒಬಿಸಿ ನಾಯಕರು ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

1869 ರಲ್ಲಿ ಜ್ಯೋತಿರಾವ್ ಫುಲೆ ಅವರು ಸ್ಮಾರಕಕ್ಕೆ ಭೇಟಿ ನೀಡಿದ್ದರು ಎಂದು ಇತಿಹಾಸ ಹೇಳುತ್ತದೆ. ಫುಲೆ 19ನೇ ಶತಮಾನದ ಭಾರತದ ಪ್ರಮುಖ ಸಮಾಜ ಸುಧಾರಕರಾಗಿದ್ದರು. ವಿಶೇಷವಾಗಿ ಒಬಿಸಿ ಸಮುದಾಯಗಳು ಮತ್ತು ತಳಸ್ಥರದ ಸಮುದಾಯಗಳ ಪರವಾಗಿ ಅವರು ಹೋರಾಟ ಮಾಡಿದ್ದರು. ಅಲ್ಲದೆ, ಅವರು ಜಾತಿ ವ್ಯವಸ್ಥೆಯ ತೀವ್ರ ಟೀಕಾಕಾರ ಕೂಡಾ ಆಗಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯ ಮೂಲಕ ಒಬಿಸಿ ಸೇರಿದಂತೆ ಕೆಳ ಜಾತಿಗಳ ಸಬಲೀಕರಣಕ್ಕಾಗಿ ಅವರು ಕೆಲಸ ಮಾಡಿದ್ದರು.

ಫುಲೆ ರಾಯಗಡ ಕೋಟೆಗೆ ಭೇಟಿ ನೀಡಿದ ಅದೇ ವರ್ಷ, “ಛತ್ರಪತಿ ಶಿವಾಜಿ ರಾಜೇ ಭೋಸಲೆ ಯಂಚ ಪೋವಾಡ” ಎಂಬ ಲಾವಣಿಯೊಂದನ್ನು ಬರೆದಿದ್ದರು. ಅದು ಶಿವಾಜಿಯ ಇತಿಹಾಸವನ್ನು ಸಾಮಾನ್ಯ ಜನರ ದೃಷ್ಟಿಕೋನದಿಂದ ವಿವರಿಸುತ್ತದೆ ಮತ್ತು ಅವರನ್ನು ರಾಜರಿಗಿಂತ ಹೆಚ್ಚಾಗಿ ರೈತ ನಾಯಕ ಎಂದು ಚಿತ್ರಿಸುತ್ತದೆ. ಆ ಕಾಲದ ಬ್ರಾಹ್ಮಣ ಇತಿಹಾಸಕಾರರು ಶಿವಾಜಿಯನ್ನು ಬ್ರಾಹ್ಮಣರ ಕಲ್ಯಾಣಕ್ಕಾಗಿ ಸಮರ್ಪಿತವಾದ ರಾಜ ಎಂದು ಚಿತ್ರಿಸಿದ್ದರು.

ಇದನ್ನೂಓದಿ: ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಈ ಬಗ್ಗೆ ಮಾತನಾಡಿರುವ ಇತಿಹಾಸತಜ್ಞ ಇಂದ್ರಜಿತ್ ಸಾವಂತ್, “ಅರ್ಧ ಶತಮಾನಕ್ಕೂ ಹೆಚ್ಚು ಕಾಲ, ರಾಯಗಢ ಕೋಟೆಯ ಆವರಣದಲ್ಲಿ ದಟ್ಟವಾದ ಗಿಡಗಂಟಿಗಳಿಂದ ಶಿವಾಜಿ ಮಹಾರಾಜರ ಸಮಾಧಿ ಮುಚ್ಚಿಹೋಗಿತ್ತು. ಇಂತಹ ಪರಿಸ್ಥಿತಿಗಳಲ್ಲಿ ಮಹಾತ್ಮ ಜ್ಯೋತಿಬಾ ಫುಲೆ 1869 ರಲ್ಲಿ ರಾಯಗಡಕ್ಕೆ ಹೋದರು. ಯಾರೂ ಭೇಟಿ ನೀಡದ ಈ ಸ್ಥಳಕ್ಕೆ ತೆರಳಿ ಅವರು ಸಮಾಧಿಯನ್ನು ಹುಡುಕಿದರು. ಇಡೀ ಭೇಟಿಯನ್ನು ದೀನಬಂಧು ಪತ್ರಿಕೆಯಲ್ಲಿ ದಾಖಲಿಸಲಾಗಿದೆ” ಎಂದು ಹೇಳುತ್ತಾರೆ. ಇಂದ್ರಜಿತ್ ಸಾವಂತ್ ಅವರು ಶಿವಾಜಿಯ ಸಮಾಧಿಯ ಕುರಿತು ‘ಶಿವಛತ್ರಪತಿಂಚ್ಯಾ ಸಮಾಧಿಚಾ ಶೋದ್ ವಾ ಬೋಧ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ಆದರೆ ಬಾಲಗಂಗಾಧರ ತಿಲಕ್ ಅವರು 1895 ರಲ್ಲಿ ಸ್ಮಾರಕವನ್ನು ದುರಸ್ತಿ ಮಾಡಲು ಮತ್ತು ಅದರ ಮೇಲೆ ಛತ್ರಿ ನಿರ್ಮಿಸಲು ಹಣವನ್ನು ಸಂಗ್ರಹಿಸಿದ್ದರು. ಆದರೆ 1925 ರಲ್ಲಿ, ಬ್ರಿಟಿಷ್ ಸರ್ಕಾರವು ಸಮಾಧಿ ನಿರ್ಮಾಣ ಮತ್ತು ದುರಸ್ತಿಗೆ ಅನುಮೋದನೆ ನೀಡಿತ್ತು.

ಶಿವಾಜಿ ಸಮಾಧಿ ಕಂಡುಹಿಡಿದ ಇತಿಹಾಸವನ್ನು ತಿರುಚುವುದು ಇತಿಹಾಸವನ್ನು ಪುನಃ ಬರೆಯುವ ಹಿಂದುತ್ವ ಪಿತೂರಿಯ ಭಾಗವಾಗಿದೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದು, ಭಾಗವತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಧಿಯನ್ನು ಕಂಡುಹಿಡಿದ ವ್ಯಕ್ತಿ ಎಂದು ತಿಲಕರ ಹೆಸರನ್ನು ಸೇರಿಸುವುದನ್ನು ಇತಿಹಾಸಕಾರರು ಪ್ರಶ್ನಿಸಿದ್ದಾರೆ.

ಇದನ್ನೂಓದಿ: ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

“ತಿಲಕರು ಸಮಾಧಿಯನ್ನು ಕಂಡುಹಿಡಿದ ಬಗ್ಗೆ ಯಾವುದೇ ಐತಿಹಾಸಿಕ ಉಲ್ಲೇಖಗಳಿಲ್ಲ. 1895 ರಿಂದ ಸ್ಮಾರಕಕ್ಕಾಗಿ ಚಳುವಳಿಯನ್ನು ಮುನ್ನಡೆಸುವಲ್ಲಿ ತಿಲಕರು ಪಾತ್ರವಹಿಸಿದ್ದರು ಮತ್ತು ಯೋಜನೆಗೆ ಹಣವನ್ನು ಸಂಗ್ರಹಿಸಿದ್ದರು. ಅದನ್ನು ಠೇವಣಿ ಮಾಡಿದ ಬ್ಯಾಂಕ್ ಬಸ್ಟ್ ಆದ ನಂತರ ಸಂಪೂರ್ಣ ಮೊತ್ತವು ಕಳೆದುಹೋಯಿತು. 1920ರಲ್ಲಿ ತಿಲಕರ ಮರಣದ ವೇಳೆಗೆ ಆಂದೋಲನವು ಭಗ್ನಗೊಂಡಿತ್ತು. ತಿಲಕ್ ಅವರು ಅದನ್ನು ಕಂಡುಹಿಡಿದಿದ್ದಾರೆ ಎಂದು ಹೇಳುವ ಮೂಲಕ ಸ್ಮಾರಕಕ್ಕೆ ಲಿಂಕ್ ಮಾಡುವುದು ಇತಿಹಾಸವನ್ನು ತಿರುಚುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಇತಿಹಾಸಗಾರ ಸಾವಂತ್ ಹೇಳಿದ್ದಾರೆ.

“ಶಿವಾಜಿ ಮಹಾರಾಜರ ಸಮಾಧಿಯನ್ನು ಮೊದಲು ಕಂಡುಹಿಡಿದದ್ದು ಜ್ಯೋತಿರಾವ್ ಫುಲೆ ಎಂಬುದು ಸತ್ಯ. ಈ ಐತಿಹಾಸಿಕ ಸತ್ಯವನ್ನು ಈ ಜಗತ್ತಿನ ಯಾವ ವ್ಯಕ್ತಿಯೂ ಬದಲಾಯಿಸಲು ಸಾಧ್ಯವಿಲ್ಲ. ಶಿವಜಯಂತಿ ಆಚರಣೆಯನ್ನು ಪ್ರಾರಂಭಿಸಲು ಸಹ ಫುಲೆ ಕಾರಣರಾಗಿದ್ದರು” ಎಂದು ರಾಜ್ಯದ ಪ್ರಮುಖ ಒಬಿಸಿ ನಾಯಕರಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಜ್ಯ ಕ್ಯಾಬಿನೆಟ್ ಸಚಿವ ಚಗ್ಗನ್ ಭುಜಬಲ್ ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...