Homeಮುಖಪುಟಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

- Advertisement -
- Advertisement -

‘ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು ಶಿವಾಜಿ ಮಹಾರಾಜರ ಸಮಾಧಿಯನ್ನು ಕಂಡುಹಿಡಿದರು’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ವಿವಾದ ಹುಟ್ಟುಹಾಕಿದೆ. ಭಾಗವತ್ ಅವರ ಈ ಹೇಳಿಕೆ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳುವ ಪಿತೂರಿ ಎಂದು ಮಹಾರಾಷ್ಟ್ರದ ಒಬಿಸಿ ನಾಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಾರದ ಆರಂಭದಲ್ಲಿ ಪುಣೆಯಲ್ಲಿ ಮಾತನಾಡಿದ್ದ ಭಾಗವತ್, “ಶಿವಾಜಿಯನ್ನು ಸ್ಮರಿಸುವಂತೆ ಜಾಗೃತಿಯ ಆಂದೋಲನವನ್ನು ಪ್ರಾರಂಭಿಸಲಾಯಿತು. ರಾಯಗಡದಲ್ಲಿ ಈ ಆಚರಣೆಯನ್ನು ಪ್ರಾರಂಭಿಸಲಾಯಿತು. ತಿಲಕರು ಇದನ್ನೆಲ್ಲ ಕಂಡುಹಿಡಿದರು” ಎಂದು ಹೇಳಿದ್ದರು. ಅವರ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿರುವ ಒಬಿಸಿ ನಾಯಕರು ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

1869 ರಲ್ಲಿ ಜ್ಯೋತಿರಾವ್ ಫುಲೆ ಅವರು ಸ್ಮಾರಕಕ್ಕೆ ಭೇಟಿ ನೀಡಿದ್ದರು ಎಂದು ಇತಿಹಾಸ ಹೇಳುತ್ತದೆ. ಫುಲೆ 19ನೇ ಶತಮಾನದ ಭಾರತದ ಪ್ರಮುಖ ಸಮಾಜ ಸುಧಾರಕರಾಗಿದ್ದರು. ವಿಶೇಷವಾಗಿ ಒಬಿಸಿ ಸಮುದಾಯಗಳು ಮತ್ತು ತಳಸ್ಥರದ ಸಮುದಾಯಗಳ ಪರವಾಗಿ ಅವರು ಹೋರಾಟ ಮಾಡಿದ್ದರು. ಅಲ್ಲದೆ, ಅವರು ಜಾತಿ ವ್ಯವಸ್ಥೆಯ ತೀವ್ರ ಟೀಕಾಕಾರ ಕೂಡಾ ಆಗಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯ ಮೂಲಕ ಒಬಿಸಿ ಸೇರಿದಂತೆ ಕೆಳ ಜಾತಿಗಳ ಸಬಲೀಕರಣಕ್ಕಾಗಿ ಅವರು ಕೆಲಸ ಮಾಡಿದ್ದರು.

ಫುಲೆ ರಾಯಗಡ ಕೋಟೆಗೆ ಭೇಟಿ ನೀಡಿದ ಅದೇ ವರ್ಷ, “ಛತ್ರಪತಿ ಶಿವಾಜಿ ರಾಜೇ ಭೋಸಲೆ ಯಂಚ ಪೋವಾಡ” ಎಂಬ ಲಾವಣಿಯೊಂದನ್ನು ಬರೆದಿದ್ದರು. ಅದು ಶಿವಾಜಿಯ ಇತಿಹಾಸವನ್ನು ಸಾಮಾನ್ಯ ಜನರ ದೃಷ್ಟಿಕೋನದಿಂದ ವಿವರಿಸುತ್ತದೆ ಮತ್ತು ಅವರನ್ನು ರಾಜರಿಗಿಂತ ಹೆಚ್ಚಾಗಿ ರೈತ ನಾಯಕ ಎಂದು ಚಿತ್ರಿಸುತ್ತದೆ. ಆ ಕಾಲದ ಬ್ರಾಹ್ಮಣ ಇತಿಹಾಸಕಾರರು ಶಿವಾಜಿಯನ್ನು ಬ್ರಾಹ್ಮಣರ ಕಲ್ಯಾಣಕ್ಕಾಗಿ ಸಮರ್ಪಿತವಾದ ರಾಜ ಎಂದು ಚಿತ್ರಿಸಿದ್ದರು.

ಇದನ್ನೂಓದಿ: ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಈ ಬಗ್ಗೆ ಮಾತನಾಡಿರುವ ಇತಿಹಾಸತಜ್ಞ ಇಂದ್ರಜಿತ್ ಸಾವಂತ್, “ಅರ್ಧ ಶತಮಾನಕ್ಕೂ ಹೆಚ್ಚು ಕಾಲ, ರಾಯಗಢ ಕೋಟೆಯ ಆವರಣದಲ್ಲಿ ದಟ್ಟವಾದ ಗಿಡಗಂಟಿಗಳಿಂದ ಶಿವಾಜಿ ಮಹಾರಾಜರ ಸಮಾಧಿ ಮುಚ್ಚಿಹೋಗಿತ್ತು. ಇಂತಹ ಪರಿಸ್ಥಿತಿಗಳಲ್ಲಿ ಮಹಾತ್ಮ ಜ್ಯೋತಿಬಾ ಫುಲೆ 1869 ರಲ್ಲಿ ರಾಯಗಡಕ್ಕೆ ಹೋದರು. ಯಾರೂ ಭೇಟಿ ನೀಡದ ಈ ಸ್ಥಳಕ್ಕೆ ತೆರಳಿ ಅವರು ಸಮಾಧಿಯನ್ನು ಹುಡುಕಿದರು. ಇಡೀ ಭೇಟಿಯನ್ನು ದೀನಬಂಧು ಪತ್ರಿಕೆಯಲ್ಲಿ ದಾಖಲಿಸಲಾಗಿದೆ” ಎಂದು ಹೇಳುತ್ತಾರೆ. ಇಂದ್ರಜಿತ್ ಸಾವಂತ್ ಅವರು ಶಿವಾಜಿಯ ಸಮಾಧಿಯ ಕುರಿತು ‘ಶಿವಛತ್ರಪತಿಂಚ್ಯಾ ಸಮಾಧಿಚಾ ಶೋದ್ ವಾ ಬೋಧ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ಆದರೆ ಬಾಲಗಂಗಾಧರ ತಿಲಕ್ ಅವರು 1895 ರಲ್ಲಿ ಸ್ಮಾರಕವನ್ನು ದುರಸ್ತಿ ಮಾಡಲು ಮತ್ತು ಅದರ ಮೇಲೆ ಛತ್ರಿ ನಿರ್ಮಿಸಲು ಹಣವನ್ನು ಸಂಗ್ರಹಿಸಿದ್ದರು. ಆದರೆ 1925 ರಲ್ಲಿ, ಬ್ರಿಟಿಷ್ ಸರ್ಕಾರವು ಸಮಾಧಿ ನಿರ್ಮಾಣ ಮತ್ತು ದುರಸ್ತಿಗೆ ಅನುಮೋದನೆ ನೀಡಿತ್ತು.

ಶಿವಾಜಿ ಸಮಾಧಿ ಕಂಡುಹಿಡಿದ ಇತಿಹಾಸವನ್ನು ತಿರುಚುವುದು ಇತಿಹಾಸವನ್ನು ಪುನಃ ಬರೆಯುವ ಹಿಂದುತ್ವ ಪಿತೂರಿಯ ಭಾಗವಾಗಿದೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದು, ಭಾಗವತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಧಿಯನ್ನು ಕಂಡುಹಿಡಿದ ವ್ಯಕ್ತಿ ಎಂದು ತಿಲಕರ ಹೆಸರನ್ನು ಸೇರಿಸುವುದನ್ನು ಇತಿಹಾಸಕಾರರು ಪ್ರಶ್ನಿಸಿದ್ದಾರೆ.

ಇದನ್ನೂಓದಿ: ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

“ತಿಲಕರು ಸಮಾಧಿಯನ್ನು ಕಂಡುಹಿಡಿದ ಬಗ್ಗೆ ಯಾವುದೇ ಐತಿಹಾಸಿಕ ಉಲ್ಲೇಖಗಳಿಲ್ಲ. 1895 ರಿಂದ ಸ್ಮಾರಕಕ್ಕಾಗಿ ಚಳುವಳಿಯನ್ನು ಮುನ್ನಡೆಸುವಲ್ಲಿ ತಿಲಕರು ಪಾತ್ರವಹಿಸಿದ್ದರು ಮತ್ತು ಯೋಜನೆಗೆ ಹಣವನ್ನು ಸಂಗ್ರಹಿಸಿದ್ದರು. ಅದನ್ನು ಠೇವಣಿ ಮಾಡಿದ ಬ್ಯಾಂಕ್ ಬಸ್ಟ್ ಆದ ನಂತರ ಸಂಪೂರ್ಣ ಮೊತ್ತವು ಕಳೆದುಹೋಯಿತು. 1920ರಲ್ಲಿ ತಿಲಕರ ಮರಣದ ವೇಳೆಗೆ ಆಂದೋಲನವು ಭಗ್ನಗೊಂಡಿತ್ತು. ತಿಲಕ್ ಅವರು ಅದನ್ನು ಕಂಡುಹಿಡಿದಿದ್ದಾರೆ ಎಂದು ಹೇಳುವ ಮೂಲಕ ಸ್ಮಾರಕಕ್ಕೆ ಲಿಂಕ್ ಮಾಡುವುದು ಇತಿಹಾಸವನ್ನು ತಿರುಚುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಇತಿಹಾಸಗಾರ ಸಾವಂತ್ ಹೇಳಿದ್ದಾರೆ.

“ಶಿವಾಜಿ ಮಹಾರಾಜರ ಸಮಾಧಿಯನ್ನು ಮೊದಲು ಕಂಡುಹಿಡಿದದ್ದು ಜ್ಯೋತಿರಾವ್ ಫುಲೆ ಎಂಬುದು ಸತ್ಯ. ಈ ಐತಿಹಾಸಿಕ ಸತ್ಯವನ್ನು ಈ ಜಗತ್ತಿನ ಯಾವ ವ್ಯಕ್ತಿಯೂ ಬದಲಾಯಿಸಲು ಸಾಧ್ಯವಿಲ್ಲ. ಶಿವಜಯಂತಿ ಆಚರಣೆಯನ್ನು ಪ್ರಾರಂಭಿಸಲು ಸಹ ಫುಲೆ ಕಾರಣರಾಗಿದ್ದರು” ಎಂದು ರಾಜ್ಯದ ಪ್ರಮುಖ ಒಬಿಸಿ ನಾಯಕರಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಜ್ಯ ಕ್ಯಾಬಿನೆಟ್ ಸಚಿವ ಚಗ್ಗನ್ ಭುಜಬಲ್ ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...