Homeಮುಖಪುಟಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

- Advertisement -
- Advertisement -

‘ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು ಶಿವಾಜಿ ಮಹಾರಾಜರ ಸಮಾಧಿಯನ್ನು ಕಂಡುಹಿಡಿದರು’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ವಿವಾದ ಹುಟ್ಟುಹಾಕಿದೆ. ಭಾಗವತ್ ಅವರ ಈ ಹೇಳಿಕೆ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳುವ ಪಿತೂರಿ ಎಂದು ಮಹಾರಾಷ್ಟ್ರದ ಒಬಿಸಿ ನಾಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಾರದ ಆರಂಭದಲ್ಲಿ ಪುಣೆಯಲ್ಲಿ ಮಾತನಾಡಿದ್ದ ಭಾಗವತ್, “ಶಿವಾಜಿಯನ್ನು ಸ್ಮರಿಸುವಂತೆ ಜಾಗೃತಿಯ ಆಂದೋಲನವನ್ನು ಪ್ರಾರಂಭಿಸಲಾಯಿತು. ರಾಯಗಡದಲ್ಲಿ ಈ ಆಚರಣೆಯನ್ನು ಪ್ರಾರಂಭಿಸಲಾಯಿತು. ತಿಲಕರು ಇದನ್ನೆಲ್ಲ ಕಂಡುಹಿಡಿದರು” ಎಂದು ಹೇಳಿದ್ದರು. ಅವರ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿರುವ ಒಬಿಸಿ ನಾಯಕರು ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

1869 ರಲ್ಲಿ ಜ್ಯೋತಿರಾವ್ ಫುಲೆ ಅವರು ಸ್ಮಾರಕಕ್ಕೆ ಭೇಟಿ ನೀಡಿದ್ದರು ಎಂದು ಇತಿಹಾಸ ಹೇಳುತ್ತದೆ. ಫುಲೆ 19ನೇ ಶತಮಾನದ ಭಾರತದ ಪ್ರಮುಖ ಸಮಾಜ ಸುಧಾರಕರಾಗಿದ್ದರು. ವಿಶೇಷವಾಗಿ ಒಬಿಸಿ ಸಮುದಾಯಗಳು ಮತ್ತು ತಳಸ್ಥರದ ಸಮುದಾಯಗಳ ಪರವಾಗಿ ಅವರು ಹೋರಾಟ ಮಾಡಿದ್ದರು. ಅಲ್ಲದೆ, ಅವರು ಜಾತಿ ವ್ಯವಸ್ಥೆಯ ತೀವ್ರ ಟೀಕಾಕಾರ ಕೂಡಾ ಆಗಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯ ಮೂಲಕ ಒಬಿಸಿ ಸೇರಿದಂತೆ ಕೆಳ ಜಾತಿಗಳ ಸಬಲೀಕರಣಕ್ಕಾಗಿ ಅವರು ಕೆಲಸ ಮಾಡಿದ್ದರು.

ಫುಲೆ ರಾಯಗಡ ಕೋಟೆಗೆ ಭೇಟಿ ನೀಡಿದ ಅದೇ ವರ್ಷ, “ಛತ್ರಪತಿ ಶಿವಾಜಿ ರಾಜೇ ಭೋಸಲೆ ಯಂಚ ಪೋವಾಡ” ಎಂಬ ಲಾವಣಿಯೊಂದನ್ನು ಬರೆದಿದ್ದರು. ಅದು ಶಿವಾಜಿಯ ಇತಿಹಾಸವನ್ನು ಸಾಮಾನ್ಯ ಜನರ ದೃಷ್ಟಿಕೋನದಿಂದ ವಿವರಿಸುತ್ತದೆ ಮತ್ತು ಅವರನ್ನು ರಾಜರಿಗಿಂತ ಹೆಚ್ಚಾಗಿ ರೈತ ನಾಯಕ ಎಂದು ಚಿತ್ರಿಸುತ್ತದೆ. ಆ ಕಾಲದ ಬ್ರಾಹ್ಮಣ ಇತಿಹಾಸಕಾರರು ಶಿವಾಜಿಯನ್ನು ಬ್ರಾಹ್ಮಣರ ಕಲ್ಯಾಣಕ್ಕಾಗಿ ಸಮರ್ಪಿತವಾದ ರಾಜ ಎಂದು ಚಿತ್ರಿಸಿದ್ದರು.

ಇದನ್ನೂಓದಿ: ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಈ ಬಗ್ಗೆ ಮಾತನಾಡಿರುವ ಇತಿಹಾಸತಜ್ಞ ಇಂದ್ರಜಿತ್ ಸಾವಂತ್, “ಅರ್ಧ ಶತಮಾನಕ್ಕೂ ಹೆಚ್ಚು ಕಾಲ, ರಾಯಗಢ ಕೋಟೆಯ ಆವರಣದಲ್ಲಿ ದಟ್ಟವಾದ ಗಿಡಗಂಟಿಗಳಿಂದ ಶಿವಾಜಿ ಮಹಾರಾಜರ ಸಮಾಧಿ ಮುಚ್ಚಿಹೋಗಿತ್ತು. ಇಂತಹ ಪರಿಸ್ಥಿತಿಗಳಲ್ಲಿ ಮಹಾತ್ಮ ಜ್ಯೋತಿಬಾ ಫುಲೆ 1869 ರಲ್ಲಿ ರಾಯಗಡಕ್ಕೆ ಹೋದರು. ಯಾರೂ ಭೇಟಿ ನೀಡದ ಈ ಸ್ಥಳಕ್ಕೆ ತೆರಳಿ ಅವರು ಸಮಾಧಿಯನ್ನು ಹುಡುಕಿದರು. ಇಡೀ ಭೇಟಿಯನ್ನು ದೀನಬಂಧು ಪತ್ರಿಕೆಯಲ್ಲಿ ದಾಖಲಿಸಲಾಗಿದೆ” ಎಂದು ಹೇಳುತ್ತಾರೆ. ಇಂದ್ರಜಿತ್ ಸಾವಂತ್ ಅವರು ಶಿವಾಜಿಯ ಸಮಾಧಿಯ ಕುರಿತು ‘ಶಿವಛತ್ರಪತಿಂಚ್ಯಾ ಸಮಾಧಿಚಾ ಶೋದ್ ವಾ ಬೋಧ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ಆದರೆ ಬಾಲಗಂಗಾಧರ ತಿಲಕ್ ಅವರು 1895 ರಲ್ಲಿ ಸ್ಮಾರಕವನ್ನು ದುರಸ್ತಿ ಮಾಡಲು ಮತ್ತು ಅದರ ಮೇಲೆ ಛತ್ರಿ ನಿರ್ಮಿಸಲು ಹಣವನ್ನು ಸಂಗ್ರಹಿಸಿದ್ದರು. ಆದರೆ 1925 ರಲ್ಲಿ, ಬ್ರಿಟಿಷ್ ಸರ್ಕಾರವು ಸಮಾಧಿ ನಿರ್ಮಾಣ ಮತ್ತು ದುರಸ್ತಿಗೆ ಅನುಮೋದನೆ ನೀಡಿತ್ತು.

ಶಿವಾಜಿ ಸಮಾಧಿ ಕಂಡುಹಿಡಿದ ಇತಿಹಾಸವನ್ನು ತಿರುಚುವುದು ಇತಿಹಾಸವನ್ನು ಪುನಃ ಬರೆಯುವ ಹಿಂದುತ್ವ ಪಿತೂರಿಯ ಭಾಗವಾಗಿದೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದು, ಭಾಗವತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಧಿಯನ್ನು ಕಂಡುಹಿಡಿದ ವ್ಯಕ್ತಿ ಎಂದು ತಿಲಕರ ಹೆಸರನ್ನು ಸೇರಿಸುವುದನ್ನು ಇತಿಹಾಸಕಾರರು ಪ್ರಶ್ನಿಸಿದ್ದಾರೆ.

ಇದನ್ನೂಓದಿ: ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

“ತಿಲಕರು ಸಮಾಧಿಯನ್ನು ಕಂಡುಹಿಡಿದ ಬಗ್ಗೆ ಯಾವುದೇ ಐತಿಹಾಸಿಕ ಉಲ್ಲೇಖಗಳಿಲ್ಲ. 1895 ರಿಂದ ಸ್ಮಾರಕಕ್ಕಾಗಿ ಚಳುವಳಿಯನ್ನು ಮುನ್ನಡೆಸುವಲ್ಲಿ ತಿಲಕರು ಪಾತ್ರವಹಿಸಿದ್ದರು ಮತ್ತು ಯೋಜನೆಗೆ ಹಣವನ್ನು ಸಂಗ್ರಹಿಸಿದ್ದರು. ಅದನ್ನು ಠೇವಣಿ ಮಾಡಿದ ಬ್ಯಾಂಕ್ ಬಸ್ಟ್ ಆದ ನಂತರ ಸಂಪೂರ್ಣ ಮೊತ್ತವು ಕಳೆದುಹೋಯಿತು. 1920ರಲ್ಲಿ ತಿಲಕರ ಮರಣದ ವೇಳೆಗೆ ಆಂದೋಲನವು ಭಗ್ನಗೊಂಡಿತ್ತು. ತಿಲಕ್ ಅವರು ಅದನ್ನು ಕಂಡುಹಿಡಿದಿದ್ದಾರೆ ಎಂದು ಹೇಳುವ ಮೂಲಕ ಸ್ಮಾರಕಕ್ಕೆ ಲಿಂಕ್ ಮಾಡುವುದು ಇತಿಹಾಸವನ್ನು ತಿರುಚುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಇತಿಹಾಸಗಾರ ಸಾವಂತ್ ಹೇಳಿದ್ದಾರೆ.

“ಶಿವಾಜಿ ಮಹಾರಾಜರ ಸಮಾಧಿಯನ್ನು ಮೊದಲು ಕಂಡುಹಿಡಿದದ್ದು ಜ್ಯೋತಿರಾವ್ ಫುಲೆ ಎಂಬುದು ಸತ್ಯ. ಈ ಐತಿಹಾಸಿಕ ಸತ್ಯವನ್ನು ಈ ಜಗತ್ತಿನ ಯಾವ ವ್ಯಕ್ತಿಯೂ ಬದಲಾಯಿಸಲು ಸಾಧ್ಯವಿಲ್ಲ. ಶಿವಜಯಂತಿ ಆಚರಣೆಯನ್ನು ಪ್ರಾರಂಭಿಸಲು ಸಹ ಫುಲೆ ಕಾರಣರಾಗಿದ್ದರು” ಎಂದು ರಾಜ್ಯದ ಪ್ರಮುಖ ಒಬಿಸಿ ನಾಯಕರಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಜ್ಯ ಕ್ಯಾಬಿನೆಟ್ ಸಚಿವ ಚಗ್ಗನ್ ಭುಜಬಲ್ ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...