Homeಗೌರಿ ಕಣ್ಣೋಟದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

- Advertisement -
- Advertisement -

ಇತ್ತೀಚೆಗೆ ಇಂಟರ್‌ನೆಟ್‌ನಲ್ಲಿ ಯಾರೋ ಒಬ್ಬ ಓರ್ವ ಯುವತಿಯ ಫೋಟೊ ಒಂದನ್ನು ಹಾಕಿ “ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದೆಂದು ನನಗೆ ಗೊತ್ತಾಗಲಿಲ್ಲ’’ ಎಂದು ಅದರಡಿ ಬರೆದಿದ್ದ. ಆತನ ಗೊಂದಲಕ್ಕೆ ಕಾರಣ ಆ ಹುಡುಗಿಯ ಮುಖದ ಮೇಲಿದ್ದ ದಟ್ಟವಾದ ಕೂದಲು. ಸೌಂದರ್ಯ ಕುರಿತು ಸಾಮಾನ್ಯ ಜನರ ಅಭಿಪ್ರಾಯ ಮತ್ತು ಪುರುಷರ ನಿರೀಕ್ಷೆಗೆ ಬೆಲೆ ಕೊಡದ ಆ ಯುವತಿ ತನ್ನ ಸಿಖ್ ಧರ್ಮದ ನಂಬಿಕೆಯಂತೆ ತನ್ನ ಮುಖದ ಮೇಲಿರುವ ಕೂದಲನ್ನು ಬೋಳಿಸಿಕೊಂಡಿರಲಿಲ್ಲ. ಸಹಜವಾಗಿಯೇ ಇದು ಆ ವ್ಯಕ್ತಿಗೆ ವಿಚಿತ್ರವಾಗಿ ಕಂಡಿತ್ತು.

ಆತ ಈ ಫೋಟೋವನ್ನು ಹಾಕಿದ ನಂತರ ಅದರಲ್ಲಿರುವ ಯುವತಿಯ ಧಾರ್ಮಿಕ ನಂಬಿಕೆಯನ್ನು ಬೆಂಬಲಿಸುತ್ತ ಮತ್ತು ಅದನ್ನು ಲೇವಡಿ ಮಾಡಿದ ವ್ಯಕ್ತಿಯ ಅಸೂಕ್ಷ್ಮತೆಯನ್ನು ಖಂಡಿಸುತ್ತಾ ಹಲವಾರು ಪ್ರತಿಕ್ರಿಯೆಗಳು ಬಂದವು. ಹಾಗೆಯೇ ಆಕೆಯನ್ನು ತಮಾಷೆ ಮಾಡಿದವರಿಗೂ ಕೊರತೆ ಇರಲಿಲ್ಲ. ಆಕೆಯ ಸುತ್ತ ಎಲ್ಲ ತರಹದ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವಾಗಲೇ ಆ ಯುವತಿಯೇ ತನ್ನ ಅಭಿಪ್ರಾಯವನ್ನು ದಾಖಲಿಸಿದಳು. ಆಕೆ ಅದೆಷ್ಟು ಸೂಕ್ಷ್ಮಮನಸ್ಸಿನ, ದೃಢ ನಂಬಿಕೆಯ, ಸಂವೇದನಾಶೀಲ ಯುವತಿ ಎಂದರೆ ಆಕೆಯನ್ನು ಎಲ್ಲರೂ ಹಾಡಿಹೊಗಳಿದರು.

ಆ ಯುವತಿಯ ಪ್ರತಿಕ್ರಿಯೆ ಹೀಗಿತ್ತು:

“ಹಾಯ್ ಗೆಳೆಯರೆ. ನಾನು ಬಲ್‌ಪ್ರೀತ್ ಕೌರ್. ಆ ಫೋಟೋದಲ್ಲಿರುವ ಹುಡುಗಿ. ನನ್ನ ಸ್ನೇಹಿತರು ಫೇಸ್ಸ್ಬುಕ್‌ನಲ್ಲಿ ಈ ಫೋಟೋದ ಬಗ್ಗೆ ನನ್ನ ಗಮನ ಸೆಳೆಯುವ ತನಕ ಈ ಕುರಿತು ನನಗೆ ಗೊತ್ತಿರಲಿಲ್ಲ. ಈ ನನ್ನ ಫೋಟೊವನ್ನು ತೆಗೆದವರು ನನ್ನನ್ನು ಕೇಳಿದ್ದರೆ ನಾನು ಸ್ಮೈಲ್‌ ಮಾಡಿ ಸಹಕರಿಸುತ್ತಿದ್ದೆ. ಈ ಫೋಟೋಗೆ ಬಂದಿರುವ ನಕಾರಾತ್ಮಕ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಓದಿ ನನಗೆ ಮುಜುಗರವಾಗಲಿ, ಅವಮಾನವಾಗಲಿ ಆಗಿಲ್ಲ. ಯಾಕೆಂದರೆ ನಾನು ಇರುವುದೇ ಹೀಗೆ. ಹೌದು, ನಾನು ಧರ್ಮದ ದೀಕ್ಷೆ ಪಡೆದಿರುವ, ಮುಖದ ಮೇಲೆ ಕೂದಲನ್ನು ಹೊಂದಿರುವ ಸಿಖ್ ಮಹಿಳೆ. ನಾನು ಇತರೆ ಮಹಿಳೆಯರಿಗಿಂತ ಭಿನ್ನವಾಗಿ ಕಾಣುವುದರಿಂದ ನನ್ನ ಲಿಂಗದ ಬಗ್ಗೆ ಹಲವರಿಗೆ ಅನುಮಾನ ಮೂಡುತ್ತದೆ ಎಂಬುದನ್ನು ನಾನು ಬಲ್ಲೆ. ಅದರೆ ಧರ್ಮಧೀಕ್ಷೆ ಪಡೆದಿರುವ ಸಿಖ್ಖರು ಈ ದೇಹವನ್ನು ದೇವರೇ ನಮಗೆ ಕೊಟ್ಟಿದ್ದೆಂದೂ, ಈ ದೇಹ ಪವಿತ್ರವೆಂದೂ (ಒಂದು ರೀತಿಯಲ್ಲಿ ಇದು ಲಿಂಗರಹಿತ ದೇಹ), ಇದನ್ನು ದೇವರು ಕೊಟ್ಟಂತೆಯೇ ಕಾಪಾಡಿಕೊಳ್ಳಬೇಕೆಂದೂ ನಂಬಿದ್ದೇವೆ. ಹೇಗೆ ಮಕ್ಕಳು ತಮಗೆ ಜನ್ಮ ನೀಡಿದ ತಂದೆ/ತಾಯಿಯನ್ನು ತಿರಸ್ಕರಿಸುವುದಿಲ್ಲವೋ, ಹಾಗೆಯೇ ಸಿಖ್ಖರು ದೇವರು ಕೊಟ್ಟಿರುವ ದೇಹವನ್ನು ತಿರಸ್ಕರಿಸುವುದಿಲ್ಲ. “ನಾನು, ನನ್ನದು’’ ಎಂಬ ಭಾವನೆಯಲ್ಲಿ ನಮ್ಮ ದೇಹವನ್ನು ಒಂದು ಪರಿಕರದಂತೆ ಬದಲಾಯಿಸುತ್ತಾ ಹೋದರೆ ನಾವು ನಮ್ಮ ಒಳಗೇ ನಮ್ಮ ಅಹಂ ಮತ್ತು ದೈವತ್ವದ ನಡುವೆ ಬಿರುಕನ್ನು ಮೂಡಿಸಿಕೊಳ್ಳುತ್ತೇವೆ. ಸೌಂದರ್ಯದ ಬಗ್ಗೆ ಸಮಾಜದ ಪರಿಕಲ್ಪನೆಯನ್ನು ಮೀರಿ ನಿಲ್ಲುವ ಮೂಲಕ ನಾನು ನನ್ನ ಕೃತ್ಯಗಳ ಬಗ್ಗೆ ಹೆಚ್ಚು ಗಮನಹರಿಸಲು ನನಗೆ ಸಾಧ್ಯ ಎಂದು ನಾನು ನಂಬಿದ್ದೇನೆ. ನನ್ನ ಚಿಂತನೆ, ವರ್ತನೆ ಮತ್ತು ಕೃತ್ಯಗಳು ನನ್ನ ಈ ದೇಹದ ವಿನ್ಯಾಸಕ್ಕಿಂತ ಮೌಲ್ಯಯುತವಾದದ್ದೆಂದು ಭಾವಿಸಿದ್ದೇನೆ”.

ಎಷ್ಟೇ ಆದರೂ ಕೊನೆಗೂ ಈ ದೇಹ ಬೂದಿ ಆಗುವುದರಿಂದ ಇದರ ಬಗ್ಗೆ ಯಾಕಷ್ಟು ಚಡಪಡಿಸಬೇಕು? ನಾನು ಸತ್ತ ನಂತರ ಯಾರೂ ನಾನು ಹೇಗಿದ್ದೆ ಎಂದು ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಅಷ್ಟೇ ಯಾಕೆ, ನನ್ನ ಮಕ್ಕಳೂ, ನನ್ನ ದನಿಯನ್ನೂ ಮರೆತುಬಿಡುತ್ತಾರೆ. ಕಾಲಕ್ರಮೇಣ ನಮ್ಮ ಶಾರೀರಿಕ ನೆನಪುಗಳೂ ಅಳಿಸಿಹೋಗುತ್ತವೆ. ಬದಲಾಗಿ ನನ್ನ ಪ್ರಭಾವ ಮತ್ತು ನನ್ನ ಲೆಗಸಿ ಉಳಿದಿರುತ್ತದೆ. ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

ಆದ್ದರಿಂದ ನನಗೆ ನನ್ನ ಮುಖ ಹೇಗಿದೆ ಎಂಬುದಕ್ಕಿಂತ ಆ ಮುಖದ ಹಿಂದೆ ಇರುವ ನಗೆ ಮುಖ್ಯವಾಗಿದೆ. ಮುಂದೆ ಯಾರದರೂ ನನ್ನನ್ನು ನೋಡಿದರೆ ದಯವಿಟ್ಟು ನನಗೆ ಹಲೋ ಹೇಳಿ ನನ್ನನ್ನು ಮಾತನಾಡಿಸಿ. ನನ್ನ ಈ ಫೋಟೋಗೆ ಬಂದಿರುವ ಪಾಸಿಟಿವ್ ಮತ್ತು ನೆಗಟಿವ್, ಎರಡೂ ರೀತಿಯ ಪ್ರತಿಕ್ರಿಯೆಗಳಿಂದ ನಾನು ನನ್ನನ್ನಲ್ಲದೆ ಇತರರನ್ನೂ ಇನ್ನೂ ಚೆನ್ನಾಗಿ ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗಿದ್ದರಿಂದ ನಾನು ಎಲ್ಲರಿಗೂ ಆಭಾರಿ ಆಗಿದ್ದೇನೆ.

ಅಂದಹಾಗೆ ನಾನು ಫೋಟೊದಲ್ಲಿ ತೊಟ್ಟಿರುವ ಯೋಗಾ ಪ್ಯಾಂಟ್‌ಗಳು ತುಂಬಾ ಆರಾಮಾಗಿರುತ್ತವೆ. ಹಾಗೆಯೇ ನಾನು ತೊಟ್ಟಿರುವ `ಬೆಟ್ಟರ್ ಟುಗೆದರ್’ ಎಂಬ ಬರಹ ಇರುವ ಟೀಶರ್ಟ್ ಒಂದು ಅಂತರ್‌ಧರ್ಮೀಯ ಯುವಕರ ಸಂಘಟನೆಯದ್ದು. ಕತೆಗಳನ್ನು ಹೇಳುವ ಮತ್ತು ಸಂವಾದಗಳನ್ನು ನಡೆಸುವ ಮೂಲಕ ವಿವಿಧ ಧರ್ಮಗಳ ನಡುವೆ ಸಾಮರಸ್ಯ ತರುವ ಉದ್ದೇಶ ಆ ಯುವ ಸಂಘಟನೆಯದ್ದು. ನನ್ನ ಬಗ್ಗೆ ಇದು ಇನ್ನಷ್ಟು ವಿವರಣೆ ನೀಡುತ್ತದೆಂದು ಇಲ್ಲಿ ಇದನ್ನು ಉಲ್ಲೇಖಿಸಿದ್ದೇನೆ.

“ನನ್ನ ಮಾತುಗಳಿಂದ ಯಾರಿಗಾದರೂ ನೋವುಂಟಾಗಿದ್ದರೆ ದಯವಿಟ್ಟು ನನ್ನನ್ನು ಕ್ಷಮಿಸಿ.’’

ಬಲ್‌ಪ್ರೀತ್ ಕೌರ್‌ಳ ಪ್ರತಿಕ್ರಿಯೆ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾಗಲೇ ಆಕೆಯ ಫೋಟೋವನ್ನು ಇಂಟರ್‌ನೆಟ್‌ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿ ತಪ್ಪೊಪ್ಪಿಕೊಂಡ. ಆತ ಹೀಗೆ ಬರೆದ:

“ನಾನು ಬಲ್‌ಪ್ರೀತಳ ಫೋಟೊ ಹಾಕಿದ್ದು ತಮಾಷೆಯಾಗಿರಲಿಲ್ಲ ಎಂದು ನನಗೆ ಅರಿವಾಗಿದೆ. ನಾನು ಸಿಖ್ಖರ, ಬಲ್‌ಪ್ರೀತಳ ಮತ್ತು ಇತರರ ಕ್ಷಮೆ ಕೇಳುತ್ತೇನೆ. ಇತರರನ್ನು ಲೇವಡಿ ಮಾಡುವುದು ಹಲವರಿಗೆ ಸಂತೋಷ ಕೊಡಬಹುದು, ಆದರೆ ಆ ಲೇವಡಿಗೆ ಗುರಿಯಾಗುವವರನ್ನು ಅಗೌರವಿಸುತ್ತದೆ. ನಾನು ಮಾಡಿದ್ದು ಸಂಪೂರ್ಣವಾಗಿ ತಪ್ಪು ಎಂದು ನನಗೆ ಗೊತ್ತು.”

ಇದಾದ ನಂತರ ನಾನು ಸಿಖ್ಖ್ ಧರ್ಮದ ಬಗ್ಗೆ ಹೆಚ್ಚು ಓದಿಕೊಂಡಿದ್ದು ಅದು ನಿಜವಾಗಲೂ ಆಸಕ್ತಿದಾಯಕವಾಗಿದೆ. ಬಲ್‌ಪ್ರೀತ್ ಹೇಳುವಂತೆ ನಮ್ಮ ದೈಹಿಕ ಸೌಂದರ್ಯಕ್ಕೆ ಹೆಚ್ಚು ಗಮನ ಕೊಡುವುದಕ್ಕಿಂತ ನಾವೊಂದು ಉತ್ತಮವಾದ ಲೆಗಸಿಯನ್ನು ಬಿಟ್ಟುಹೋಗುವುದು ಮುಖ್ಯ.

ಬಲ್‌ಪ್ರೀತ್, ನಾನು ಈ ಕುರಿತು ಮುಕ್ತವಾಗಿ ಚಿಂತಿಸದ ವ್ಯಕ್ತಿಯಾಗಿದ್ದಕ್ಕೆ ನನ್ನನ್ನು ಕ್ಷಮಿಸು. ನೀನು ನನಗಿಂತ ಉತ್ತಮ ವ್ಯಕ್ತಿ ಅಗಿರುವೆ.

ಸಿಖ್ಖರೇ, ನಾನು ನಿಮ್ಮ ಜೀವನಕ್ರಮದ ಬಗ್ಗೆ ಮತ್ತು ನಿಮ್ಮ ಸಂಸ್ಕೃತಿಯ ಬಗ್ಗೆ ಅವಹೇಳನ ಮಾಡಿದ್ದಕ್ಕೆ ನಿಮ್ಮ ಕ್ಷಮೆ ಕೇಳುತ್ತೇನೆ. ಬಲ್‌ಪ್ರೀತ್ ತಾನು ನಂಬಿರುವ ಸಿದ್ಧಾಂತದಲ್ಲಿ ಇಟ್ಟುರುವ ನಂಬಿಕೆ ನನ್ನನ್ನು ಸ್ತಬ್ಧನನ್ನಾಗಿಸಿದೆ.

ಆತ ಅಷ್ಟಕ್ಕೆ ಸುಮ್ಮನಾಗಲಿಲ್ಲ. ಅಮೆರಿಕದ ಒಹೈಯೋ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ, ಮುಂದೆ ನ್ಯೂರೋ ಸರ್ಜನ್ ಆಗಬೇಕೆಂಬ ಗುರಿ ಹೊಂದಿರುವ ಬಲ್‌ಪ್ರೀತಳಿಗೆ ವೈಯಕ್ತಿಕವಾಗಿ ಈ ಮೇಲ್ ಮೂಲಕ ಕ್ಷಮೆ ಕೋರಿದ. ಅದನ್ನು ಓದಿ ಬಲ್‌ಪ್ರೀತ್ ಎಷ್ಟು ದಂಗಾದಳೆಂದರೆ “ಆತ ಪ್ರಾಮಾಣಿಕವಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಿಜವಾಗಲೂ ಹೇಳಬೇಕೆಂದರೆ ನನಗೂ ಆ ರೀತಿ ಕ್ಷಮೆ ಕೇಳುವುದು ಕಷ್ಟವಾಗುತ್ತಿತ್ತೇನೋ’’ ಎಂದಿದ್ದಾಳೆ. ಹಾಗೆ ಹೇಳುವ ಮೂಲಕ ಬಲ್‌ಪ್ರೀತ್ ನಿಜವಾಗಲೂ ಎಷ್ಟು ಧಾರಾಳ ಮನಸ್ಸಿನವಳು ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾಳೆ.

ಸದ್ಯದಲ್ಲೇ ಆತ ಓಹೈಯೋಗೆ ಬಂದು ಆಕೆಯನ್ನು ಮುಖತಃ ಭೇಟಿ ಆಗಿ ಕ್ಷಮೆ ಕೋರಲೂ ಸಿದ್ಧ ಎಂದಿದ್ದಾನೆ. ಅದಕ್ಕೆ ಬಲ್‌ಪ್ರೀತ್ “ಅದರ ಅಗತ್ಯವಿಲ್ಲ. ಆದರೆ ನಾವು ಭೇಟಿ ಆದರೆ ಈ ಬಾರಿ ಜೊತೆಯಾಗಿ ಫೋಟೋ ತೆಗೆಸಿಕೊಳ್ಳೋಣ’’ ಎಂದು ತಮಾಷೆ ಮಾಡಿದ್ದಾಳೆ!

ಇತರರ ಧಾರ್ಮಿಕ ನಂಬಿಕೆಯ ಬಗ್ಗೆ, ಉಡುಗೆತೊಡುಗೆಗಳ ಬಗ್ಗೆ, ದೈಹಿಕ ಸೌಂದರ್ಯದ ಬಗ್ಗೆ ಪೂರ್ವಾಗ್ರಹಗಳನ್ನು ಹೊಂದಿರುವವರು ಅವುಗಳನ್ನು ಲೇವಡಿ ಮಾಡುವುದು ಸಾಮಾನ್ಯ. ಆದರೆ ಬಲ್‌ಪ್ರೀತ್ ಎಂಬ ಯುವತಿ ತನ್ನ ತಾಳ್ಮೆ, ದಿಟ್ಟತನ ಮತ್ತು ಸೂಕ್ಷ್ಮತೆಯಿಂದ ಅಂತಹ ಪೂರ್ವಾಗ್ರಹಗಳನ್ನು ಮನಮುಟ್ಟುವಂತೆ ತೊಡೆದುಹಾಕಿದ್ದಾಳೆ. ಇದು ಇತರರಿಗೆ ಮೇಲುಪಂಕ್ತಿ ಆಗಲಿ ಎಂಬ ಆಶಯ ನನ್ನದು…

ಗೌರಿ ಲಂಕೇಶ್‌

ಅಕ್ಟೋಬರ್ 17, 2012


ಇದನ್ನೂ ಓದಿ: ದೊರೆಸ್ವಾಮಿ ಎಂಬ ರಾಕ್‍ಸ್ಟಾರ್ !! ಆರು ವರ್ಷದ ಹಿಂದೆ ಗೌರಿ ಲಂಕೇಶ್‌ ಬರೆದ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...