Homeಗೌರಿ ಕಣ್ಣೋಟದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

- Advertisement -
- Advertisement -

ಇತ್ತೀಚೆಗೆ ಇಂಟರ್‌ನೆಟ್‌ನಲ್ಲಿ ಯಾರೋ ಒಬ್ಬ ಓರ್ವ ಯುವತಿಯ ಫೋಟೊ ಒಂದನ್ನು ಹಾಕಿ “ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದೆಂದು ನನಗೆ ಗೊತ್ತಾಗಲಿಲ್ಲ’’ ಎಂದು ಅದರಡಿ ಬರೆದಿದ್ದ. ಆತನ ಗೊಂದಲಕ್ಕೆ ಕಾರಣ ಆ ಹುಡುಗಿಯ ಮುಖದ ಮೇಲಿದ್ದ ದಟ್ಟವಾದ ಕೂದಲು. ಸೌಂದರ್ಯ ಕುರಿತು ಸಾಮಾನ್ಯ ಜನರ ಅಭಿಪ್ರಾಯ ಮತ್ತು ಪುರುಷರ ನಿರೀಕ್ಷೆಗೆ ಬೆಲೆ ಕೊಡದ ಆ ಯುವತಿ ತನ್ನ ಸಿಖ್ ಧರ್ಮದ ನಂಬಿಕೆಯಂತೆ ತನ್ನ ಮುಖದ ಮೇಲಿರುವ ಕೂದಲನ್ನು ಬೋಳಿಸಿಕೊಂಡಿರಲಿಲ್ಲ. ಸಹಜವಾಗಿಯೇ ಇದು ಆ ವ್ಯಕ್ತಿಗೆ ವಿಚಿತ್ರವಾಗಿ ಕಂಡಿತ್ತು.

ಆತ ಈ ಫೋಟೋವನ್ನು ಹಾಕಿದ ನಂತರ ಅದರಲ್ಲಿರುವ ಯುವತಿಯ ಧಾರ್ಮಿಕ ನಂಬಿಕೆಯನ್ನು ಬೆಂಬಲಿಸುತ್ತ ಮತ್ತು ಅದನ್ನು ಲೇವಡಿ ಮಾಡಿದ ವ್ಯಕ್ತಿಯ ಅಸೂಕ್ಷ್ಮತೆಯನ್ನು ಖಂಡಿಸುತ್ತಾ ಹಲವಾರು ಪ್ರತಿಕ್ರಿಯೆಗಳು ಬಂದವು. ಹಾಗೆಯೇ ಆಕೆಯನ್ನು ತಮಾಷೆ ಮಾಡಿದವರಿಗೂ ಕೊರತೆ ಇರಲಿಲ್ಲ. ಆಕೆಯ ಸುತ್ತ ಎಲ್ಲ ತರಹದ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವಾಗಲೇ ಆ ಯುವತಿಯೇ ತನ್ನ ಅಭಿಪ್ರಾಯವನ್ನು ದಾಖಲಿಸಿದಳು. ಆಕೆ ಅದೆಷ್ಟು ಸೂಕ್ಷ್ಮಮನಸ್ಸಿನ, ದೃಢ ನಂಬಿಕೆಯ, ಸಂವೇದನಾಶೀಲ ಯುವತಿ ಎಂದರೆ ಆಕೆಯನ್ನು ಎಲ್ಲರೂ ಹಾಡಿಹೊಗಳಿದರು.

ಆ ಯುವತಿಯ ಪ್ರತಿಕ್ರಿಯೆ ಹೀಗಿತ್ತು:

“ಹಾಯ್ ಗೆಳೆಯರೆ. ನಾನು ಬಲ್‌ಪ್ರೀತ್ ಕೌರ್. ಆ ಫೋಟೋದಲ್ಲಿರುವ ಹುಡುಗಿ. ನನ್ನ ಸ್ನೇಹಿತರು ಫೇಸ್ಸ್ಬುಕ್‌ನಲ್ಲಿ ಈ ಫೋಟೋದ ಬಗ್ಗೆ ನನ್ನ ಗಮನ ಸೆಳೆಯುವ ತನಕ ಈ ಕುರಿತು ನನಗೆ ಗೊತ್ತಿರಲಿಲ್ಲ. ಈ ನನ್ನ ಫೋಟೊವನ್ನು ತೆಗೆದವರು ನನ್ನನ್ನು ಕೇಳಿದ್ದರೆ ನಾನು ಸ್ಮೈಲ್‌ ಮಾಡಿ ಸಹಕರಿಸುತ್ತಿದ್ದೆ. ಈ ಫೋಟೋಗೆ ಬಂದಿರುವ ನಕಾರಾತ್ಮಕ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಓದಿ ನನಗೆ ಮುಜುಗರವಾಗಲಿ, ಅವಮಾನವಾಗಲಿ ಆಗಿಲ್ಲ. ಯಾಕೆಂದರೆ ನಾನು ಇರುವುದೇ ಹೀಗೆ. ಹೌದು, ನಾನು ಧರ್ಮದ ದೀಕ್ಷೆ ಪಡೆದಿರುವ, ಮುಖದ ಮೇಲೆ ಕೂದಲನ್ನು ಹೊಂದಿರುವ ಸಿಖ್ ಮಹಿಳೆ. ನಾನು ಇತರೆ ಮಹಿಳೆಯರಿಗಿಂತ ಭಿನ್ನವಾಗಿ ಕಾಣುವುದರಿಂದ ನನ್ನ ಲಿಂಗದ ಬಗ್ಗೆ ಹಲವರಿಗೆ ಅನುಮಾನ ಮೂಡುತ್ತದೆ ಎಂಬುದನ್ನು ನಾನು ಬಲ್ಲೆ. ಅದರೆ ಧರ್ಮಧೀಕ್ಷೆ ಪಡೆದಿರುವ ಸಿಖ್ಖರು ಈ ದೇಹವನ್ನು ದೇವರೇ ನಮಗೆ ಕೊಟ್ಟಿದ್ದೆಂದೂ, ಈ ದೇಹ ಪವಿತ್ರವೆಂದೂ (ಒಂದು ರೀತಿಯಲ್ಲಿ ಇದು ಲಿಂಗರಹಿತ ದೇಹ), ಇದನ್ನು ದೇವರು ಕೊಟ್ಟಂತೆಯೇ ಕಾಪಾಡಿಕೊಳ್ಳಬೇಕೆಂದೂ ನಂಬಿದ್ದೇವೆ. ಹೇಗೆ ಮಕ್ಕಳು ತಮಗೆ ಜನ್ಮ ನೀಡಿದ ತಂದೆ/ತಾಯಿಯನ್ನು ತಿರಸ್ಕರಿಸುವುದಿಲ್ಲವೋ, ಹಾಗೆಯೇ ಸಿಖ್ಖರು ದೇವರು ಕೊಟ್ಟಿರುವ ದೇಹವನ್ನು ತಿರಸ್ಕರಿಸುವುದಿಲ್ಲ. “ನಾನು, ನನ್ನದು’’ ಎಂಬ ಭಾವನೆಯಲ್ಲಿ ನಮ್ಮ ದೇಹವನ್ನು ಒಂದು ಪರಿಕರದಂತೆ ಬದಲಾಯಿಸುತ್ತಾ ಹೋದರೆ ನಾವು ನಮ್ಮ ಒಳಗೇ ನಮ್ಮ ಅಹಂ ಮತ್ತು ದೈವತ್ವದ ನಡುವೆ ಬಿರುಕನ್ನು ಮೂಡಿಸಿಕೊಳ್ಳುತ್ತೇವೆ. ಸೌಂದರ್ಯದ ಬಗ್ಗೆ ಸಮಾಜದ ಪರಿಕಲ್ಪನೆಯನ್ನು ಮೀರಿ ನಿಲ್ಲುವ ಮೂಲಕ ನಾನು ನನ್ನ ಕೃತ್ಯಗಳ ಬಗ್ಗೆ ಹೆಚ್ಚು ಗಮನಹರಿಸಲು ನನಗೆ ಸಾಧ್ಯ ಎಂದು ನಾನು ನಂಬಿದ್ದೇನೆ. ನನ್ನ ಚಿಂತನೆ, ವರ್ತನೆ ಮತ್ತು ಕೃತ್ಯಗಳು ನನ್ನ ಈ ದೇಹದ ವಿನ್ಯಾಸಕ್ಕಿಂತ ಮೌಲ್ಯಯುತವಾದದ್ದೆಂದು ಭಾವಿಸಿದ್ದೇನೆ”.

ಎಷ್ಟೇ ಆದರೂ ಕೊನೆಗೂ ಈ ದೇಹ ಬೂದಿ ಆಗುವುದರಿಂದ ಇದರ ಬಗ್ಗೆ ಯಾಕಷ್ಟು ಚಡಪಡಿಸಬೇಕು? ನಾನು ಸತ್ತ ನಂತರ ಯಾರೂ ನಾನು ಹೇಗಿದ್ದೆ ಎಂದು ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಅಷ್ಟೇ ಯಾಕೆ, ನನ್ನ ಮಕ್ಕಳೂ, ನನ್ನ ದನಿಯನ್ನೂ ಮರೆತುಬಿಡುತ್ತಾರೆ. ಕಾಲಕ್ರಮೇಣ ನಮ್ಮ ಶಾರೀರಿಕ ನೆನಪುಗಳೂ ಅಳಿಸಿಹೋಗುತ್ತವೆ. ಬದಲಾಗಿ ನನ್ನ ಪ್ರಭಾವ ಮತ್ತು ನನ್ನ ಲೆಗಸಿ ಉಳಿದಿರುತ್ತದೆ. ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

ಆದ್ದರಿಂದ ನನಗೆ ನನ್ನ ಮುಖ ಹೇಗಿದೆ ಎಂಬುದಕ್ಕಿಂತ ಆ ಮುಖದ ಹಿಂದೆ ಇರುವ ನಗೆ ಮುಖ್ಯವಾಗಿದೆ. ಮುಂದೆ ಯಾರದರೂ ನನ್ನನ್ನು ನೋಡಿದರೆ ದಯವಿಟ್ಟು ನನಗೆ ಹಲೋ ಹೇಳಿ ನನ್ನನ್ನು ಮಾತನಾಡಿಸಿ. ನನ್ನ ಈ ಫೋಟೋಗೆ ಬಂದಿರುವ ಪಾಸಿಟಿವ್ ಮತ್ತು ನೆಗಟಿವ್, ಎರಡೂ ರೀತಿಯ ಪ್ರತಿಕ್ರಿಯೆಗಳಿಂದ ನಾನು ನನ್ನನ್ನಲ್ಲದೆ ಇತರರನ್ನೂ ಇನ್ನೂ ಚೆನ್ನಾಗಿ ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗಿದ್ದರಿಂದ ನಾನು ಎಲ್ಲರಿಗೂ ಆಭಾರಿ ಆಗಿದ್ದೇನೆ.

ಅಂದಹಾಗೆ ನಾನು ಫೋಟೊದಲ್ಲಿ ತೊಟ್ಟಿರುವ ಯೋಗಾ ಪ್ಯಾಂಟ್‌ಗಳು ತುಂಬಾ ಆರಾಮಾಗಿರುತ್ತವೆ. ಹಾಗೆಯೇ ನಾನು ತೊಟ್ಟಿರುವ `ಬೆಟ್ಟರ್ ಟುಗೆದರ್’ ಎಂಬ ಬರಹ ಇರುವ ಟೀಶರ್ಟ್ ಒಂದು ಅಂತರ್‌ಧರ್ಮೀಯ ಯುವಕರ ಸಂಘಟನೆಯದ್ದು. ಕತೆಗಳನ್ನು ಹೇಳುವ ಮತ್ತು ಸಂವಾದಗಳನ್ನು ನಡೆಸುವ ಮೂಲಕ ವಿವಿಧ ಧರ್ಮಗಳ ನಡುವೆ ಸಾಮರಸ್ಯ ತರುವ ಉದ್ದೇಶ ಆ ಯುವ ಸಂಘಟನೆಯದ್ದು. ನನ್ನ ಬಗ್ಗೆ ಇದು ಇನ್ನಷ್ಟು ವಿವರಣೆ ನೀಡುತ್ತದೆಂದು ಇಲ್ಲಿ ಇದನ್ನು ಉಲ್ಲೇಖಿಸಿದ್ದೇನೆ.

“ನನ್ನ ಮಾತುಗಳಿಂದ ಯಾರಿಗಾದರೂ ನೋವುಂಟಾಗಿದ್ದರೆ ದಯವಿಟ್ಟು ನನ್ನನ್ನು ಕ್ಷಮಿಸಿ.’’

ಬಲ್‌ಪ್ರೀತ್ ಕೌರ್‌ಳ ಪ್ರತಿಕ್ರಿಯೆ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾಗಲೇ ಆಕೆಯ ಫೋಟೋವನ್ನು ಇಂಟರ್‌ನೆಟ್‌ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿ ತಪ್ಪೊಪ್ಪಿಕೊಂಡ. ಆತ ಹೀಗೆ ಬರೆದ:

“ನಾನು ಬಲ್‌ಪ್ರೀತಳ ಫೋಟೊ ಹಾಕಿದ್ದು ತಮಾಷೆಯಾಗಿರಲಿಲ್ಲ ಎಂದು ನನಗೆ ಅರಿವಾಗಿದೆ. ನಾನು ಸಿಖ್ಖರ, ಬಲ್‌ಪ್ರೀತಳ ಮತ್ತು ಇತರರ ಕ್ಷಮೆ ಕೇಳುತ್ತೇನೆ. ಇತರರನ್ನು ಲೇವಡಿ ಮಾಡುವುದು ಹಲವರಿಗೆ ಸಂತೋಷ ಕೊಡಬಹುದು, ಆದರೆ ಆ ಲೇವಡಿಗೆ ಗುರಿಯಾಗುವವರನ್ನು ಅಗೌರವಿಸುತ್ತದೆ. ನಾನು ಮಾಡಿದ್ದು ಸಂಪೂರ್ಣವಾಗಿ ತಪ್ಪು ಎಂದು ನನಗೆ ಗೊತ್ತು.”

ಇದಾದ ನಂತರ ನಾನು ಸಿಖ್ಖ್ ಧರ್ಮದ ಬಗ್ಗೆ ಹೆಚ್ಚು ಓದಿಕೊಂಡಿದ್ದು ಅದು ನಿಜವಾಗಲೂ ಆಸಕ್ತಿದಾಯಕವಾಗಿದೆ. ಬಲ್‌ಪ್ರೀತ್ ಹೇಳುವಂತೆ ನಮ್ಮ ದೈಹಿಕ ಸೌಂದರ್ಯಕ್ಕೆ ಹೆಚ್ಚು ಗಮನ ಕೊಡುವುದಕ್ಕಿಂತ ನಾವೊಂದು ಉತ್ತಮವಾದ ಲೆಗಸಿಯನ್ನು ಬಿಟ್ಟುಹೋಗುವುದು ಮುಖ್ಯ.

ಬಲ್‌ಪ್ರೀತ್, ನಾನು ಈ ಕುರಿತು ಮುಕ್ತವಾಗಿ ಚಿಂತಿಸದ ವ್ಯಕ್ತಿಯಾಗಿದ್ದಕ್ಕೆ ನನ್ನನ್ನು ಕ್ಷಮಿಸು. ನೀನು ನನಗಿಂತ ಉತ್ತಮ ವ್ಯಕ್ತಿ ಅಗಿರುವೆ.

ಸಿಖ್ಖರೇ, ನಾನು ನಿಮ್ಮ ಜೀವನಕ್ರಮದ ಬಗ್ಗೆ ಮತ್ತು ನಿಮ್ಮ ಸಂಸ್ಕೃತಿಯ ಬಗ್ಗೆ ಅವಹೇಳನ ಮಾಡಿದ್ದಕ್ಕೆ ನಿಮ್ಮ ಕ್ಷಮೆ ಕೇಳುತ್ತೇನೆ. ಬಲ್‌ಪ್ರೀತ್ ತಾನು ನಂಬಿರುವ ಸಿದ್ಧಾಂತದಲ್ಲಿ ಇಟ್ಟುರುವ ನಂಬಿಕೆ ನನ್ನನ್ನು ಸ್ತಬ್ಧನನ್ನಾಗಿಸಿದೆ.

ಆತ ಅಷ್ಟಕ್ಕೆ ಸುಮ್ಮನಾಗಲಿಲ್ಲ. ಅಮೆರಿಕದ ಒಹೈಯೋ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ, ಮುಂದೆ ನ್ಯೂರೋ ಸರ್ಜನ್ ಆಗಬೇಕೆಂಬ ಗುರಿ ಹೊಂದಿರುವ ಬಲ್‌ಪ್ರೀತಳಿಗೆ ವೈಯಕ್ತಿಕವಾಗಿ ಈ ಮೇಲ್ ಮೂಲಕ ಕ್ಷಮೆ ಕೋರಿದ. ಅದನ್ನು ಓದಿ ಬಲ್‌ಪ್ರೀತ್ ಎಷ್ಟು ದಂಗಾದಳೆಂದರೆ “ಆತ ಪ್ರಾಮಾಣಿಕವಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಿಜವಾಗಲೂ ಹೇಳಬೇಕೆಂದರೆ ನನಗೂ ಆ ರೀತಿ ಕ್ಷಮೆ ಕೇಳುವುದು ಕಷ್ಟವಾಗುತ್ತಿತ್ತೇನೋ’’ ಎಂದಿದ್ದಾಳೆ. ಹಾಗೆ ಹೇಳುವ ಮೂಲಕ ಬಲ್‌ಪ್ರೀತ್ ನಿಜವಾಗಲೂ ಎಷ್ಟು ಧಾರಾಳ ಮನಸ್ಸಿನವಳು ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾಳೆ.

ಸದ್ಯದಲ್ಲೇ ಆತ ಓಹೈಯೋಗೆ ಬಂದು ಆಕೆಯನ್ನು ಮುಖತಃ ಭೇಟಿ ಆಗಿ ಕ್ಷಮೆ ಕೋರಲೂ ಸಿದ್ಧ ಎಂದಿದ್ದಾನೆ. ಅದಕ್ಕೆ ಬಲ್‌ಪ್ರೀತ್ “ಅದರ ಅಗತ್ಯವಿಲ್ಲ. ಆದರೆ ನಾವು ಭೇಟಿ ಆದರೆ ಈ ಬಾರಿ ಜೊತೆಯಾಗಿ ಫೋಟೋ ತೆಗೆಸಿಕೊಳ್ಳೋಣ’’ ಎಂದು ತಮಾಷೆ ಮಾಡಿದ್ದಾಳೆ!

ಇತರರ ಧಾರ್ಮಿಕ ನಂಬಿಕೆಯ ಬಗ್ಗೆ, ಉಡುಗೆತೊಡುಗೆಗಳ ಬಗ್ಗೆ, ದೈಹಿಕ ಸೌಂದರ್ಯದ ಬಗ್ಗೆ ಪೂರ್ವಾಗ್ರಹಗಳನ್ನು ಹೊಂದಿರುವವರು ಅವುಗಳನ್ನು ಲೇವಡಿ ಮಾಡುವುದು ಸಾಮಾನ್ಯ. ಆದರೆ ಬಲ್‌ಪ್ರೀತ್ ಎಂಬ ಯುವತಿ ತನ್ನ ತಾಳ್ಮೆ, ದಿಟ್ಟತನ ಮತ್ತು ಸೂಕ್ಷ್ಮತೆಯಿಂದ ಅಂತಹ ಪೂರ್ವಾಗ್ರಹಗಳನ್ನು ಮನಮುಟ್ಟುವಂತೆ ತೊಡೆದುಹಾಕಿದ್ದಾಳೆ. ಇದು ಇತರರಿಗೆ ಮೇಲುಪಂಕ್ತಿ ಆಗಲಿ ಎಂಬ ಆಶಯ ನನ್ನದು…

ಗೌರಿ ಲಂಕೇಶ್‌

ಅಕ್ಟೋಬರ್ 17, 2012


ಇದನ್ನೂ ಓದಿ: ದೊರೆಸ್ವಾಮಿ ಎಂಬ ರಾಕ್‍ಸ್ಟಾರ್ !! ಆರು ವರ್ಷದ ಹಿಂದೆ ಗೌರಿ ಲಂಕೇಶ್‌ ಬರೆದ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...